<p><strong>ತುಮಕೂರು:</strong> ನೂತನ ವರ್ಷದ ಸಂಭ್ರಮಾಚರಣೆ ವೇಳೆ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಡಿ. 31ರ ಬೆಳಿಗ್ಗೆ 8ರಿಂದ ಜ. 2ರ ಬೆಳಿಗ್ಗೆ 8 ಗಂಟೆಯ ವರೆಗೆ ಜಿಲ್ಲೆಯ ಪ್ರವಾಸಿ ತಾಣಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.</p>.<p>ತಾಲ್ಲೂಕಿನ ನಾಮದ ಚಿಲುಮೆ, ದೇವರಾಯನ ದುರ್ಗ ಹಾಗೂ ಬಸದಿ ಬೆಟ್ಟಕ್ಕೆ ಪ್ರವಾಸಿಗರ ಭೇಟಿಗೆ ಅವಕಾಶ ಕಲ್ಪಿಸಿಲ್ಲ. ಡಿ. 31ರ ಬೆಳಿಗ್ಗೆ 8 ಗಂಟೆಯಿಂದ ಜ. 1ರ ಬೆಳಿಗ್ಗೆ 6ರ ವರೆಗೆ ಮತ್ತು ಜ. 1ರ ಸಂಜೆ 6 ಗಂಟೆಯಿಂದ ಜ. 2ರ ಬೆಳಿಗ್ಗೆ 8 ಗಂಟೆಯ ವರೆಗೆ ಈ ಪ್ರದೇಶದಲ್ಲಿ ಸಾರ್ವಜನಿಕರು ಮತ್ತು ವಾಹನಗಳ ಪ್ರವೇಶ ನಿರ್ಬಂಧಿಸಲಾಗಿದೆ.</p>.<p>‘ಸಾರ್ವಜನಿಕರ ಹಿತದೃಷ್ಟಿಯಿಂದ ಸಂರಕ್ಷಿತ ಅರಣ್ಯ ಪ್ರದೇಶ ಮತ್ತು ಅಪಘಾತ ವಲಯದಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ತಿಳಿಸಿದ್ದಾರೆ.</p>.<p>ಸಾರ್ವಜನಿಕರು ಸುರಕ್ಷಿತವಾಗಿ ಹೊಸ ವರ್ಷ ಆಚರಿಸಬೇಕು. ವಿದ್ಯಾಸಂಸ್ಥೆ ಮುಖ್ಯಸ್ಥರು ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಸಂಸ್ಥೆಯ ಆವರಣ, ಹಾಸ್ಟೆಲ್ಗಳಲ್ಲಿ ಶಿಸ್ತಿನ ಚೌಕಟ್ಟು ಮೀರದಂತೆ ನೋಡಿಕೊಳ್ಳಬೇಕು. ಸವಾರರು ವ್ಹೀಲಿಂಗ್ ಮತ್ತು ಅಡ್ಡಾದಿಡ್ಡಿಯಾಗಿ ವಾಹನ ಚಲಾಯಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ನೂತನ ವರ್ಷದ ಸಂಭ್ರಮಾಚರಣೆ ವೇಳೆ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಡಿ. 31ರ ಬೆಳಿಗ್ಗೆ 8ರಿಂದ ಜ. 2ರ ಬೆಳಿಗ್ಗೆ 8 ಗಂಟೆಯ ವರೆಗೆ ಜಿಲ್ಲೆಯ ಪ್ರವಾಸಿ ತಾಣಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.</p>.<p>ತಾಲ್ಲೂಕಿನ ನಾಮದ ಚಿಲುಮೆ, ದೇವರಾಯನ ದುರ್ಗ ಹಾಗೂ ಬಸದಿ ಬೆಟ್ಟಕ್ಕೆ ಪ್ರವಾಸಿಗರ ಭೇಟಿಗೆ ಅವಕಾಶ ಕಲ್ಪಿಸಿಲ್ಲ. ಡಿ. 31ರ ಬೆಳಿಗ್ಗೆ 8 ಗಂಟೆಯಿಂದ ಜ. 1ರ ಬೆಳಿಗ್ಗೆ 6ರ ವರೆಗೆ ಮತ್ತು ಜ. 1ರ ಸಂಜೆ 6 ಗಂಟೆಯಿಂದ ಜ. 2ರ ಬೆಳಿಗ್ಗೆ 8 ಗಂಟೆಯ ವರೆಗೆ ಈ ಪ್ರದೇಶದಲ್ಲಿ ಸಾರ್ವಜನಿಕರು ಮತ್ತು ವಾಹನಗಳ ಪ್ರವೇಶ ನಿರ್ಬಂಧಿಸಲಾಗಿದೆ.</p>.<p>‘ಸಾರ್ವಜನಿಕರ ಹಿತದೃಷ್ಟಿಯಿಂದ ಸಂರಕ್ಷಿತ ಅರಣ್ಯ ಪ್ರದೇಶ ಮತ್ತು ಅಪಘಾತ ವಲಯದಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ತಿಳಿಸಿದ್ದಾರೆ.</p>.<p>ಸಾರ್ವಜನಿಕರು ಸುರಕ್ಷಿತವಾಗಿ ಹೊಸ ವರ್ಷ ಆಚರಿಸಬೇಕು. ವಿದ್ಯಾಸಂಸ್ಥೆ ಮುಖ್ಯಸ್ಥರು ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಸಂಸ್ಥೆಯ ಆವರಣ, ಹಾಸ್ಟೆಲ್ಗಳಲ್ಲಿ ಶಿಸ್ತಿನ ಚೌಕಟ್ಟು ಮೀರದಂತೆ ನೋಡಿಕೊಳ್ಳಬೇಕು. ಸವಾರರು ವ್ಹೀಲಿಂಗ್ ಮತ್ತು ಅಡ್ಡಾದಿಡ್ಡಿಯಾಗಿ ವಾಹನ ಚಲಾಯಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>