ರೈತರಾದ ಶಿವಪ್ರಸಾದ್ ಹಾಗೂ ಮಲ್ಲಿಕಾರ್ಜುನಯ್ಯ ಎಂಬುವವರಿಗೆ ಸೇರಿದ್ದ ಸರ್ವೆ ನಂ.49 ಹಾಗೂ 50ರಲ್ಲಿದ್ದ 250ಕ್ಕೂ ಹೆಚ್ಚು ತೆಂಗಿನ ಮರಗಳು, ಮಾವಿನ ಮರಗಳು, ಜೀವಂತ ಬೇಲಿ ಹಾಗೂ ಬಿದುರು ಮೆಳೆಗಳು ಬೆಂಕಿಯಲ್ಲಿ ಭಸ್ಮವಾಗಿವೆ. ಶಿವಪ್ರಸಾದ್ ಅವರಿಗೆ ₹ 10 ಲಕ್ಷ ಹಾಗೂ ಮಲ್ಲಿಕಾರ್ಜುನಯ್ಯ ಅವರಿಗೆ ₹ 4 ಲಕ್ಷ ಹಾನಿ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಪಟ್ಟಣದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.