<p><strong>ಕೊರಟಗೆರೆ:</strong> ತಾಲ್ಲೂಕಿನ ಹೊಳವನಹಳ್ಳಿ ಹೋಬಳಿ ಕ್ಯಾಮೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಂಪುಗಾನಹಳ್ಳಿಯಲ್ಲಿ ಶುಕ್ರವಾರ ಆಕಸ್ಮಿಕ ಬೆಂಕಿ ತಗುಲಿ 9 ಗುಡಿಸಲುಗಳು ಭಸ್ಮವಾಗಿದೆ.</p>.<p>10 ಹಂದಿ ಜೋಗಿ ಕುಟುಂಬಗಳು ಸೂರು ಕಳೆದುಕೊಂಡಿವೆ.</p>.<p>ಗುಡಿಸಲಲ್ಲಿ ಕಟ್ಟಿದ್ದ ಐದು ಕುರಿ ಮರಿಗಳು ಸುಟ್ಟು ಕರಕಲಾಗಿವೆ. ಹತ್ತಕ್ಕೂ ಹೆಚ್ಚು ಮೇಕೆಗಳು ಗಾಯಗೊಂಡಿವೆ. ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿಗಳು ಘಟನಾ ಸ್ಥಳಕ್ಕೆ ದೌಡಾಯಿಸಿದರು. ಗುಡಿಸಲಲ್ಲಿದ್ದ ಐದು ಮನೆ ಬಳಕೆ ಗ್ಯಾಸ್ ಸಿಲಿಂಡರ್ ಸ್ಫೋಟವಾಗದೆ ಇದ್ದಿದ್ದರಿಂದ ಭಾರಿ ಅನಾಹುತ ತಪ್ಪಿದೆ.</p>.<p>ಗುಡಿಸಲು ವಾಸಿಗಳು ಮತದಾನಕ್ಕೆಂದು ಮತಗಟ್ಟೆಗೆ ತೆರಳಿದ್ದಾಗ ಬೆಂಕಿ ಬಿದ್ದಿದೆ. ಗುಡಿಸಲಲ್ಲಿ ಇಟ್ಟಿದ್ದ ದವಸ ಧಾನ್ಯ ಸೇರಿದಂತೆ ದಿನ ಬಳಕೆ ವಸ್ತುಗಳು ಸುಟ್ಟು, ನಷ್ಟ ಉಂಟಾಗಿದೆ.</p>.<p>ಚಿಂಪುಗಾನಹಳ್ಳಿ ಗ್ರಾಮದ ಹೊರವಲಯದಲ್ಲಿರುವ ಗುಡಿಸಲುಗಳಲ್ಲಿ ಪದೇ ಪದೇ ಬೆಂಕಿ ಅವಘಡ ನಡೆಯುತ್ತಿದ್ದು, ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ನಿವೇಶನ ಹಂಚಿಕೆ ಮಾಡಿ, ಮನೆ ಕಟ್ಟಿಸಿ ಕೊಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊರಟಗೆರೆ:</strong> ತಾಲ್ಲೂಕಿನ ಹೊಳವನಹಳ್ಳಿ ಹೋಬಳಿ ಕ್ಯಾಮೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಂಪುಗಾನಹಳ್ಳಿಯಲ್ಲಿ ಶುಕ್ರವಾರ ಆಕಸ್ಮಿಕ ಬೆಂಕಿ ತಗುಲಿ 9 ಗುಡಿಸಲುಗಳು ಭಸ್ಮವಾಗಿದೆ.</p>.<p>10 ಹಂದಿ ಜೋಗಿ ಕುಟುಂಬಗಳು ಸೂರು ಕಳೆದುಕೊಂಡಿವೆ.</p>.<p>ಗುಡಿಸಲಲ್ಲಿ ಕಟ್ಟಿದ್ದ ಐದು ಕುರಿ ಮರಿಗಳು ಸುಟ್ಟು ಕರಕಲಾಗಿವೆ. ಹತ್ತಕ್ಕೂ ಹೆಚ್ಚು ಮೇಕೆಗಳು ಗಾಯಗೊಂಡಿವೆ. ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿಗಳು ಘಟನಾ ಸ್ಥಳಕ್ಕೆ ದೌಡಾಯಿಸಿದರು. ಗುಡಿಸಲಲ್ಲಿದ್ದ ಐದು ಮನೆ ಬಳಕೆ ಗ್ಯಾಸ್ ಸಿಲಿಂಡರ್ ಸ್ಫೋಟವಾಗದೆ ಇದ್ದಿದ್ದರಿಂದ ಭಾರಿ ಅನಾಹುತ ತಪ್ಪಿದೆ.</p>.<p>ಗುಡಿಸಲು ವಾಸಿಗಳು ಮತದಾನಕ್ಕೆಂದು ಮತಗಟ್ಟೆಗೆ ತೆರಳಿದ್ದಾಗ ಬೆಂಕಿ ಬಿದ್ದಿದೆ. ಗುಡಿಸಲಲ್ಲಿ ಇಟ್ಟಿದ್ದ ದವಸ ಧಾನ್ಯ ಸೇರಿದಂತೆ ದಿನ ಬಳಕೆ ವಸ್ತುಗಳು ಸುಟ್ಟು, ನಷ್ಟ ಉಂಟಾಗಿದೆ.</p>.<p>ಚಿಂಪುಗಾನಹಳ್ಳಿ ಗ್ರಾಮದ ಹೊರವಲಯದಲ್ಲಿರುವ ಗುಡಿಸಲುಗಳಲ್ಲಿ ಪದೇ ಪದೇ ಬೆಂಕಿ ಅವಘಡ ನಡೆಯುತ್ತಿದ್ದು, ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ನಿವೇಶನ ಹಂಚಿಕೆ ಮಾಡಿ, ಮನೆ ಕಟ್ಟಿಸಿ ಕೊಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>