ಮಾಧ್ಯಮದವರೊಂದಿಗೆ ಮಾತನಾಡಿ, 'ಗುರುವಾರ ಕೆಪಿಸಿಸಿ ಸಭೆಗೆ ಗೈರಾಗಿದ್ದಕ್ಕೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ. ಸಭೆ 11.30 ಕ್ಕೆ ನಿಗದಿಯಾಗಿತ್ತು. ನಾನು ಚಿಕ್ಕಮಗಳೂರಿಗೆ ತೆರಳಿದ್ದರಿಂದ ಬರುವುದು ತಡವಾಗುತ್ತದೆ ಎಂದು ಅಧ್ಯಕ್ಷರಿಗೆ ಹೇಳಿದ್ದೆ. ಬೆಳಿಗ್ಗೆ 6 ಗಂಟೆಗೆ ಚಿಕ್ಕಮಗಳೂರಿಂದ ಹೊರಟಿದ್ದರೂ ಸಭೆಯಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿರಲಿಲ್ಲ’ ಎಂದರು.