ಕೊರಟಗೆರೆ ತಾಲ್ಲೂಕಿನ ಬೈರಗೊಂಡ್ಲು ಬಳಿ ಎತ್ತಿನಹೊಳೆ ಯೋಜನೆ ಬಫರ್ ಡ್ಯಾಂ ನಿರ್ಮಿಸಲು ಉದ್ದೇಶಿಸಿರುವ ಸ್ಥಳಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿ ಪರಿಶೀಲಿಸಿದರು
ಕೊರಟಗೆರೆ ರೈತರು ಜಲಾಶಯಕ್ಕೆ ಸೂಚಿಸಿರುವ ಪರ್ಯಾಯ ಜಾಗವನ್ನು ಪರಿಶೀಲಿಸಲಾಗುವುದು. ಸಚಿವ ಸಂಪುಟ ಸಭೆಯಲ್ಲಿ ವರದಿ ಪ್ರಸ್ತಾಪಿಸಿ ತೀರ್ಮಾನ ಕೈಗೊಳ್ಳಲಾವುದು. ಆದಷ್ಟು ನಷ್ಟ ಕಡಿಮೆ ಮಾಡಿ ಯೋಜನೆ ಜಾರಿ ಮಾಡುತ್ತೇವೆ
ಡಿ.ಕೆ. ಶಿವಕುಮಾರ್ ಉಪಮುಖ್ಯಮಂತ್ರಿ
ಪುಕ್ಕಟೆಯಾಗಿ ಕಿತ್ತುಕೊಳ್ಳಲ್ಲ
ಈ ಯೋಜನೆಗಾಗಿ ₹17 ಸಾವಿರ ಕೋಟಿ ಬಂಡವಾಳ ಹಾಕಿದ್ದೇವೆ. ಬಹುತೇಕ ಕಡೆಗಳಲ್ಲಿ ಕಾಮಗಾರಿ ಮುಗಿದಿವೆ. ಹೀಗಾಗಿ ಈ ಯೋಜನೆ ಜಾರಿ ಮಾಡಲೇಬೇಕು. ನೀವು ಬೈದರೂ ಸರಿ ಸಲಹೆ ನೀಡಿದರೂ ಸರಿ. ನಿಮ್ಮ ಮಾತನ್ನು ಆಲಿಸಿ ಸಲಹೆ ಸ್ವೀಕರಿಸಲು ಬಂದಿದ್ದೇನೆ. ಇಲ್ಲಿ ಯಾರಿಂದಲೂ ಜಮೀನನ್ನು ಪುಕ್ಕಟೆಯಾಗಿ ಕಿತ್ತುಕೊಳ್ಳಲು ಬಂದಿಲ್ಲ. ಬಲವಂತವಾಗಿ ಒಕ್ಕಲು ಎಬ್ಬಿಸುವುದಿಲ್ಲ ಎಂದು ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದರು.