ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ‘ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಮೀಸಲಿಟ್ಟಿರುವ ಅನುದಾನವನ್ನು ಇತರೆ ವರ್ಗಕ್ಕೆ ಬಳಸಿಕೊಳ್ಳಲು ಅವಕಾಶವಿಲ್ಲ. ಈ ಬಗ್ಗೆ ಪಾಲಿಕೆಯ ಆಯುಕ್ತರು, ನಗರ ಯೋಜನಾ ನಿರ್ದೇಶಕರು, ಪಾಲಿಕೆಯ ಮುಖ್ಯ ಲೆಕ್ಕಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಸಮಾಜ ಕಲ್ಯಾಣ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಂಡ ಈ ಬಗ್ಗೆ ಪರಿಶೀಲನೆ ನಡೆಸಬೇಕು. ಮುಂದಿನ 10 ದಿನಗಳೊಳಗೆ ನನಗೆ ವರದಿ ಸಲ್ಲಿಸಬೇಕು’ ಎಂದು ಸೂಚಿಸಿದರು.