ಈ ಹಿಂದೆ ಎಸ್.ಆರ್. ಬೊಮ್ಮಾಯಿ ಅವರು ಮುಖ್ಯಮಂತ್ರಿ ಆಗಿದ್ದಾಗ 20 ಶಾಸಕರ ರಾಜೀನಾಮೆ ಕೊಡಿಸಲಾಯಿತು. ಆಗ ನಡೆದ ಅಧಿವೇಶನದಲ್ಲಿ ಯಾವ ಚರ್ಚೆಯೂ ನಡೆದಿರಲಿಲ್ಲ. ಕೇವಲ ಒಂದು ಕಾಗದವನ್ನು ರಾಜ್ಯಪಾಲರ ಕಚೇರಿಗೆ ಕಳಿಸಲಾಗಿತ್ತು. ಬೊಮ್ಮಾಯಿ ಸರ್ಕಾರ ವಜಾಗೊಂಡಿತ್ತು. ದೇವೇಗೌಡರ ನೇತೃತ್ವದಲ್ಲಿಯೇ ಪತ್ರ ಕಳಿಸಲಾಗಿತ್ತು. ಆಗ ಪ್ರಜಾಪ್ರಭುತ್ವದ ಕಗ್ಗೊಲೆ ಆಗಿರಲಿಲ್ಲ. ಈಗ ಆಗುತ್ತಿದೆ ಎಂದು ಹೇಳಲಾಗುತ್ತಿದೆ. ರಾಜಕೀಯ ಪಿತಾಮಹ ದೇವೇಗೌಡರೇ ಇದಕ್ಕೆ ಉತ್ತರಿಸಬೇಕು ಎಂದರು.