<p><strong>ಬೆಂಗಳೂರು: </strong>ಅನ್ನ ದಾಸೋಹ ಯೋಜನೆಯಲ್ಲಿ (ಕಲ್ಯಾಣ ಸಂಸ್ಥೆ ಯೋಜನೆ) ಸಂಘ, ಸಂಸ್ಥೆಗಳಿಗೆ ಉಚಿತವಾಗಿ ನೀಡುತ್ತಿದ್ದ ಅಕ್ಕಿ, ಗೋಧಿಯನ್ನು ರಾಜ್ಯ ಸರ್ಕಾರ ಸ್ಥಗಿತಗೊಳಿಸಿದ್ದು, ತುಮಕೂರು ಸಿದ್ಧಗಂಗಾ ಮಠಕ್ಕೂ ಅಕ್ಕಿ ವಿತರಣೆ ನಿಲ್ಲಿಸಲಾಗಿದೆ.</p>.<p>ನಾರಿನಿಕೇತನ, ಅಂಗವಿಕಲ, ಬುದ್ಧಿಮಾಂದ್ಯ, ವೃದ್ಧಾಶ್ರಮಗಳು ಸೇರಿದಂತೆ ವಸತಿ, ಶಿಕ್ಷಣ ನೀಡುತ್ತಿರುವ ಸಂಸ್ಥೆಗಳಿಗೆ ಆಹಾರ ಧಾನ್ಯ ನೀಡಲಾಗುತ್ತಿತ್ತು. ಸಂಸ್ಥೆಯ ಪ್ರತಿಯೊಬ್ಬರಿಗೆ ತಲಾ 10 ಕೆ.ಜಿ ಅಕ್ಕಿ, 5 ಕೆ.ಜಿ ಗೋಧಿಯನ್ನು ಪ್ರತಿ ತಿಂಗಳು ಕೊಡಲಾಗುತ್ತಿತ್ತು. ಆದರೆ ಈಗ ಬಿಜೆಪಿ ಸರ್ಕಾರ ಕಳೆದ ಮೂರು ತಿಂಗಳಿಂದ ವಿತರಣೆ ಸ್ಥಗಿತಗೊಳಿಸಿದೆ ಎಂದು ಶಾಸಕ ಯು.ಟಿ.ಖಾದರ್ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>ರಾಜ್ಯದ 454 ಸಂಸ್ಥೆಗಳ 6ರಿಂದ 7 ಸಾವಿರ ಮಂದಿಗೆ ಅನುಕೂಲವಾಗಿತ್ತು. ಸಿದ್ಧಗಂಗಾ ಮಠದ 7,359 ವಿದ್ಯಾರ್ಥಿಗಳಿಗೆ ಈ ಯೋಜನೆ ಸಹಕಾರಿಯಾಗಿತ್ತು. ಜನಸಾಮಾನ್ಯರ ಕಾರ್ಯಕ್ರಮಗಳನ್ನು ಬಿಜೆಪಿ ಸರ್ಕಾರ ಸ್ಥಗಿತಗೊಳಿಸುವ ಮೂಲಕ ಬಡವರ ಹೊಟ್ಟೆ ಮೇಲೆ ಬರೆ ಎಳೆದಿದೆ ಎಂದು ಖಾದರ್, ಮುಖಂಡ ವಿ.ಎಸ್.ಉಗ್ರಪ್ಪ ಆರೋಪಿಸಿದರು.</p>.<p>ಒಂದು ವೇಳೆ ಕೇಂದ್ರ ಸರ್ಕಾರ ಈ ಯೋಜನೆಗೆ ನೆರವು ನೀಡದಿದ್ದರೆ ರಾಜ್ಯ ಸರ್ಕಾರವೇ ಹಣ ಒದಗಿಸುವ ಮೂಲಕ ಬಡವರಿಗೆ ಅನ್ನ ನೀಡುವ ಕೆಲಸವನ್ನು ಮುಂದುವರಿಸಬೇಕು. ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದ ಪ್ರತಿ ವ್ಯಕ್ತಿಗೆ ನೀಡುತ್ತಿರುವ ಅಕ್ಕಿಯನ್ನು 7 ಕೆ.ಜಿ.ಯಿಂದ 5 ಕೆ.ಜಿ.ಗೆ ಇಳಿಸುವ ಪ್ರಯತ್ನವನ್ನು ಕೈಬಿಡಬೇಕು ಎಂದು ಅವರು ಆಗ್ರಹಿಸಿದರು.</p>.<p>ದೊಡ್ಡವರು, ಶ್ರೀಮಂತರ ಯೋಜನೆಗಳಿಗೆ ಕಡಿವಾಣ ಹಾಕದೆ ಅನುದಾನ ಮುಂದುವರಿಸಲಾಗಿದೆ. ಆದರೆ ಬಡವರ ಕಾರ್ಯಕ್ರಮಗಳಿಗೆ ಹಣ ನೀಡಲು ಬಿಜೆಪಿ ಸರ್ಕಾರ ಹಿಂಜರಿಯುತ್ತಿದೆ. ಈ ಸರ್ಕಾರದಲ್ಲಿ ಮಾನವೀಯತೆ ಮರೆಯಾಗಿದ್ದು, ರಾಜಕಾರಣ ಬಿಟ್ಟು ಸಾಮಾನ್ಯರ ಬಗ್ಗೆ ಕಾಳಜಿ ವಹಿಸಬೇಕು ಎಂದು ಒತ್ತಾಯಿಸಿದರು.</p>.<p><strong>ಬೀದರ್ನಲ್ಲಿ ಮಕ್ಕಳ ವಿರುದ್ಧ ಕ್ರಮ: ಖಂಡನೆ</strong></p>.<p>ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಾಟಕ ಪ್ರದರ್ಶಿಸಿದ ಬೀದರ್ನ ಶಾಹೀನ್ ಶಿಕ್ಷಣ ಸಂಸ್ಥೆ ಮಕ್ಕಳ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡು, ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದಾರೆ. ಮಕ್ಕಳ ವಿರುದ್ಧ ಕ್ರಮ ಕೈಗೊಂಡಿರುವುದು ಅಮಾನವೀಯ ಎಂದು ಖಾದರ್ ಆರೋಪಿಸಿದರು.</p>.<p>ಮಕ್ಕಳ ಮೇಲೆ ದೂರು ದಾಖಲಿಸಿದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು. ಈ ಪ್ರಕರಣ ಸಂಬಂಧ ಐಎಎಸ್ ಅಧಿಕಾರಿಯಿಂದ ಸ್ವತಂತ್ರ ತನಿಖೆ ನಡೆಸಿ, ವರದಿ ಪಡೆದುಕೊಂಡ ನಂತರ ಮುಂದಿನ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಅನ್ನ ದಾಸೋಹ ಯೋಜನೆಯಲ್ಲಿ (ಕಲ್ಯಾಣ ಸಂಸ್ಥೆ ಯೋಜನೆ) ಸಂಘ, ಸಂಸ್ಥೆಗಳಿಗೆ ಉಚಿತವಾಗಿ ನೀಡುತ್ತಿದ್ದ ಅಕ್ಕಿ, ಗೋಧಿಯನ್ನು ರಾಜ್ಯ ಸರ್ಕಾರ ಸ್ಥಗಿತಗೊಳಿಸಿದ್ದು, ತುಮಕೂರು ಸಿದ್ಧಗಂಗಾ ಮಠಕ್ಕೂ ಅಕ್ಕಿ ವಿತರಣೆ ನಿಲ್ಲಿಸಲಾಗಿದೆ.</p>.<p>ನಾರಿನಿಕೇತನ, ಅಂಗವಿಕಲ, ಬುದ್ಧಿಮಾಂದ್ಯ, ವೃದ್ಧಾಶ್ರಮಗಳು ಸೇರಿದಂತೆ ವಸತಿ, ಶಿಕ್ಷಣ ನೀಡುತ್ತಿರುವ ಸಂಸ್ಥೆಗಳಿಗೆ ಆಹಾರ ಧಾನ್ಯ ನೀಡಲಾಗುತ್ತಿತ್ತು. ಸಂಸ್ಥೆಯ ಪ್ರತಿಯೊಬ್ಬರಿಗೆ ತಲಾ 10 ಕೆ.ಜಿ ಅಕ್ಕಿ, 5 ಕೆ.ಜಿ ಗೋಧಿಯನ್ನು ಪ್ರತಿ ತಿಂಗಳು ಕೊಡಲಾಗುತ್ತಿತ್ತು. ಆದರೆ ಈಗ ಬಿಜೆಪಿ ಸರ್ಕಾರ ಕಳೆದ ಮೂರು ತಿಂಗಳಿಂದ ವಿತರಣೆ ಸ್ಥಗಿತಗೊಳಿಸಿದೆ ಎಂದು ಶಾಸಕ ಯು.ಟಿ.ಖಾದರ್ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>ರಾಜ್ಯದ 454 ಸಂಸ್ಥೆಗಳ 6ರಿಂದ 7 ಸಾವಿರ ಮಂದಿಗೆ ಅನುಕೂಲವಾಗಿತ್ತು. ಸಿದ್ಧಗಂಗಾ ಮಠದ 7,359 ವಿದ್ಯಾರ್ಥಿಗಳಿಗೆ ಈ ಯೋಜನೆ ಸಹಕಾರಿಯಾಗಿತ್ತು. ಜನಸಾಮಾನ್ಯರ ಕಾರ್ಯಕ್ರಮಗಳನ್ನು ಬಿಜೆಪಿ ಸರ್ಕಾರ ಸ್ಥಗಿತಗೊಳಿಸುವ ಮೂಲಕ ಬಡವರ ಹೊಟ್ಟೆ ಮೇಲೆ ಬರೆ ಎಳೆದಿದೆ ಎಂದು ಖಾದರ್, ಮುಖಂಡ ವಿ.ಎಸ್.ಉಗ್ರಪ್ಪ ಆರೋಪಿಸಿದರು.</p>.<p>ಒಂದು ವೇಳೆ ಕೇಂದ್ರ ಸರ್ಕಾರ ಈ ಯೋಜನೆಗೆ ನೆರವು ನೀಡದಿದ್ದರೆ ರಾಜ್ಯ ಸರ್ಕಾರವೇ ಹಣ ಒದಗಿಸುವ ಮೂಲಕ ಬಡವರಿಗೆ ಅನ್ನ ನೀಡುವ ಕೆಲಸವನ್ನು ಮುಂದುವರಿಸಬೇಕು. ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದ ಪ್ರತಿ ವ್ಯಕ್ತಿಗೆ ನೀಡುತ್ತಿರುವ ಅಕ್ಕಿಯನ್ನು 7 ಕೆ.ಜಿ.ಯಿಂದ 5 ಕೆ.ಜಿ.ಗೆ ಇಳಿಸುವ ಪ್ರಯತ್ನವನ್ನು ಕೈಬಿಡಬೇಕು ಎಂದು ಅವರು ಆಗ್ರಹಿಸಿದರು.</p>.<p>ದೊಡ್ಡವರು, ಶ್ರೀಮಂತರ ಯೋಜನೆಗಳಿಗೆ ಕಡಿವಾಣ ಹಾಕದೆ ಅನುದಾನ ಮುಂದುವರಿಸಲಾಗಿದೆ. ಆದರೆ ಬಡವರ ಕಾರ್ಯಕ್ರಮಗಳಿಗೆ ಹಣ ನೀಡಲು ಬಿಜೆಪಿ ಸರ್ಕಾರ ಹಿಂಜರಿಯುತ್ತಿದೆ. ಈ ಸರ್ಕಾರದಲ್ಲಿ ಮಾನವೀಯತೆ ಮರೆಯಾಗಿದ್ದು, ರಾಜಕಾರಣ ಬಿಟ್ಟು ಸಾಮಾನ್ಯರ ಬಗ್ಗೆ ಕಾಳಜಿ ವಹಿಸಬೇಕು ಎಂದು ಒತ್ತಾಯಿಸಿದರು.</p>.<p><strong>ಬೀದರ್ನಲ್ಲಿ ಮಕ್ಕಳ ವಿರುದ್ಧ ಕ್ರಮ: ಖಂಡನೆ</strong></p>.<p>ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಾಟಕ ಪ್ರದರ್ಶಿಸಿದ ಬೀದರ್ನ ಶಾಹೀನ್ ಶಿಕ್ಷಣ ಸಂಸ್ಥೆ ಮಕ್ಕಳ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡು, ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದಾರೆ. ಮಕ್ಕಳ ವಿರುದ್ಧ ಕ್ರಮ ಕೈಗೊಂಡಿರುವುದು ಅಮಾನವೀಯ ಎಂದು ಖಾದರ್ ಆರೋಪಿಸಿದರು.</p>.<p>ಮಕ್ಕಳ ಮೇಲೆ ದೂರು ದಾಖಲಿಸಿದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು. ಈ ಪ್ರಕರಣ ಸಂಬಂಧ ಐಎಎಸ್ ಅಧಿಕಾರಿಯಿಂದ ಸ್ವತಂತ್ರ ತನಿಖೆ ನಡೆಸಿ, ವರದಿ ಪಡೆದುಕೊಂಡ ನಂತರ ಮುಂದಿನ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>