ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ನಿರಂತರವಾಗಿ ಶ್ರಮಿಸುತ್ತಿರುವ ಪೌರಕಾರ್ಮಿಕರಿಗೆ ಅಗತ್ಯ ಸುರಕ್ಷತಾ ಸಾಮಗ್ರಿಗಳನ್ನು ನೀಡಬೇಕಾದ್ದು ಪುರಸಭೆಯ ಜವಾಬ್ದಾರಿ. ಪುರಸಭೆಯಲ್ಲಿ ಜನಪ್ರತಿನಿಧಿಗಳ ಆಡಳಿತವಿಲ್ಲ, ಉಪ ವಿಭಾಗಾಧಿಕಾರಿಗಳು ಆಡಳಿತಾಧಿ ಕಾರಿಯಾಗಿದ್ದಾರೆ. ಪೌರಕಾರ್ಮಿಕರ ಕೆಲಸ ಮೇಲ್ವಿಚಾರಣೆಗೆ ಮೇಸ್ತ್ರಿ, ಆರೋಗ್ಯ ನಿರೀಕ್ಷಕರು ಮತ್ತು ಮುಖ್ಯಾಧಿಕಾರಿ ಇದ್ದಾರೆ. ಆದರೂ, ಈ ಬಗ್ಗೆ ಗಮನ ಹರಿಸದಿರುವುದು ಖಂಡನೀಯ ಎಂದು ಸೇವಾ ಭಾಗ್ಯ ಫೌಂಡೇಷನ್ ಕಾರ್ಯದರ್ಶಿ ವಿನೋದ್ ಗೌಡ, ಕರವೇ ಅಧ್ಯಕ್ಷ ಮಂಜುನಾಥ್ ತಿಳಿಸಿದರು.