<p><strong>ಕುಣಿಗಲ್:</strong> ಪೌರ ಕಾರ್ಮಿಕರು ಸುರಕ್ಷತಾ ಸಾಮಗ್ರಿಗಳಿಲ್ಲದೆ ಕಾರ್ಯ ನಿರ್ವಹಿಸುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಬೇಕಾಗಿದೆ ಎಂದು ಕೆಲ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.</p>.<p>ಪುರಸಭೆಯಲ್ಲಿ ನೂರಕ್ಕೂ ಹೆಚ್ಚು ಕಾರ್ಮಿಕರು ನಿತ್ಯ ಕಾರ್ಯ ನಿರ್ವಹಿಸುತ್ತಿದ್ದು, ಅವರಲ್ಲಿ ಶೇ 50ಕ್ಕೂ ಹೆಚ್ಚು ಮಹಿಳೆಯರಿದ್ದಾರೆ. ಪಟ್ಟಣದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಸಹ ಹೆಚ್ಚಾಗುತ್ತಿದ್ದು, ಸುಮಾರು 80ಕ್ಕೂ ಹೆಚ್ಚು ಗಲ್ಲಿಗಳನ್ನು ಸೀಲ್ಡೌನ್ ಮಾಡಲಾಗಿದೆ.</p>.<p>ಈ ಹಂತದಲ್ಲಿ ನೈರ್ಮಲ್ಯ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು ಕೈ, ಮುಖ ಗವಸು, ಕಾಲಿಗೆ ಶೂ ಧರಿಸದೆ ಕಾರ್ಯ ನಿರ್ವಹಿಸುತ್ತಿದ್ದಾರೆ.</p>.<p>ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ನಿರಂತರವಾಗಿ ಶ್ರಮಿಸುತ್ತಿರುವ ಪೌರಕಾರ್ಮಿಕರಿಗೆ ಅಗತ್ಯ ಸುರಕ್ಷತಾ ಸಾಮಗ್ರಿಗಳನ್ನು ನೀಡಬೇಕಾದ್ದು ಪುರಸಭೆಯ ಜವಾಬ್ದಾರಿ. ಪುರಸಭೆಯಲ್ಲಿ ಜನಪ್ರತಿನಿಧಿಗಳ ಆಡಳಿತವಿಲ್ಲ, ಉಪ ವಿಭಾಗಾಧಿಕಾರಿಗಳು ಆಡಳಿತಾಧಿ ಕಾರಿಯಾಗಿದ್ದಾರೆ. ಪೌರಕಾರ್ಮಿಕರ ಕೆಲಸ ಮೇಲ್ವಿಚಾರಣೆಗೆ ಮೇಸ್ತ್ರಿ, ಆರೋಗ್ಯ ನಿರೀಕ್ಷಕರು ಮತ್ತು ಮುಖ್ಯಾಧಿಕಾರಿ ಇದ್ದಾರೆ. ಆದರೂ, ಈ ಬಗ್ಗೆ ಗಮನ ಹರಿಸದಿರುವುದು ಖಂಡನೀಯ ಎಂದು ಸೇವಾ ಭಾಗ್ಯ ಫೌಂಡೇಷನ್ ಕಾರ್ಯದರ್ಶಿ ವಿನೋದ್ ಗೌಡ, ಕರವೇ ಅಧ್ಯಕ್ಷ ಮಂಜುನಾಥ್ ತಿಳಿಸಿದರು.</p>.<p>ಜತೆಗೆ ಸುರಕ್ಷತಾ ಸಾಮಗ್ರಿಗಳನ್ನು ವಿತರಿಸಿದ್ದರೂ ಬಳಸದೆ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರ ಮೇಲೆ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಣಿಗಲ್:</strong> ಪೌರ ಕಾರ್ಮಿಕರು ಸುರಕ್ಷತಾ ಸಾಮಗ್ರಿಗಳಿಲ್ಲದೆ ಕಾರ್ಯ ನಿರ್ವಹಿಸುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಬೇಕಾಗಿದೆ ಎಂದು ಕೆಲ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.</p>.<p>ಪುರಸಭೆಯಲ್ಲಿ ನೂರಕ್ಕೂ ಹೆಚ್ಚು ಕಾರ್ಮಿಕರು ನಿತ್ಯ ಕಾರ್ಯ ನಿರ್ವಹಿಸುತ್ತಿದ್ದು, ಅವರಲ್ಲಿ ಶೇ 50ಕ್ಕೂ ಹೆಚ್ಚು ಮಹಿಳೆಯರಿದ್ದಾರೆ. ಪಟ್ಟಣದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಸಹ ಹೆಚ್ಚಾಗುತ್ತಿದ್ದು, ಸುಮಾರು 80ಕ್ಕೂ ಹೆಚ್ಚು ಗಲ್ಲಿಗಳನ್ನು ಸೀಲ್ಡೌನ್ ಮಾಡಲಾಗಿದೆ.</p>.<p>ಈ ಹಂತದಲ್ಲಿ ನೈರ್ಮಲ್ಯ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು ಕೈ, ಮುಖ ಗವಸು, ಕಾಲಿಗೆ ಶೂ ಧರಿಸದೆ ಕಾರ್ಯ ನಿರ್ವಹಿಸುತ್ತಿದ್ದಾರೆ.</p>.<p>ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ನಿರಂತರವಾಗಿ ಶ್ರಮಿಸುತ್ತಿರುವ ಪೌರಕಾರ್ಮಿಕರಿಗೆ ಅಗತ್ಯ ಸುರಕ್ಷತಾ ಸಾಮಗ್ರಿಗಳನ್ನು ನೀಡಬೇಕಾದ್ದು ಪುರಸಭೆಯ ಜವಾಬ್ದಾರಿ. ಪುರಸಭೆಯಲ್ಲಿ ಜನಪ್ರತಿನಿಧಿಗಳ ಆಡಳಿತವಿಲ್ಲ, ಉಪ ವಿಭಾಗಾಧಿಕಾರಿಗಳು ಆಡಳಿತಾಧಿ ಕಾರಿಯಾಗಿದ್ದಾರೆ. ಪೌರಕಾರ್ಮಿಕರ ಕೆಲಸ ಮೇಲ್ವಿಚಾರಣೆಗೆ ಮೇಸ್ತ್ರಿ, ಆರೋಗ್ಯ ನಿರೀಕ್ಷಕರು ಮತ್ತು ಮುಖ್ಯಾಧಿಕಾರಿ ಇದ್ದಾರೆ. ಆದರೂ, ಈ ಬಗ್ಗೆ ಗಮನ ಹರಿಸದಿರುವುದು ಖಂಡನೀಯ ಎಂದು ಸೇವಾ ಭಾಗ್ಯ ಫೌಂಡೇಷನ್ ಕಾರ್ಯದರ್ಶಿ ವಿನೋದ್ ಗೌಡ, ಕರವೇ ಅಧ್ಯಕ್ಷ ಮಂಜುನಾಥ್ ತಿಳಿಸಿದರು.</p>.<p>ಜತೆಗೆ ಸುರಕ್ಷತಾ ಸಾಮಗ್ರಿಗಳನ್ನು ವಿತರಿಸಿದ್ದರೂ ಬಳಸದೆ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರ ಮೇಲೆ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>