ವಾಲ್ಮೀಕಿ ನಾಯಕ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ರಂಗನಾಥ್, ‘ಕೋವಿಡ್ ಇರುವುದರಿಂದ ವಿಡಿಯೊ ಸಂವಾದದ ಮೂಲಕ ಸಭೆ ನಡೆಸುವುದಾಗಿ ಉಪವಿಭಾಗಾಧಿಕಾರಿ ಹೇಳುತ್ತಾರೆ. ಆದರೆ ಮುಖಾಮುಖಿ ಸಭೆ ನಡೆಸಿದರೂ ನಮ್ಮ ಸಮಸ್ಯೆಗಳು ಬಗೆಹರಿಯುವುದಿಲ್ಲ. ಇನ್ನು ವಿಡಿಯೊ ಸಂವಾದದ ಮೂಲಕ ನಡೆಸುವ ಸಭೆ ಯಲ್ಲಿ ಎಷ್ಟರ ಮಟ್ಟಿಗೆ ಸಮಸ್ಯೆ ಗಳನ್ನು ಬಗೆಹರಿಸುತ್ತಾರೆ’ ಎಂದು ಪ್ರಶ್ನಿಸಿದರು.