ಶಿರಾ– ಮದಲೂರು ನಾಲೆ ಮಧ್ಯದಲ್ಲಿ ಸಾಕಷ್ಟು ಬ್ಯಾರೇಜ್ಗಳನ್ನು ಜಯಚಂದ್ರ ನಿರ್ಮಿಸಿದ್ದಾರೆ. ಈ ಬ್ಯಾರೇಜ್ಗಳನ್ನು ತುಂಬಿಸಿ ಮುಂದಕ್ಕೆ ನೀರು ತೆಗೆದುಕೊಂಡು ಹೋಗಲು ಸಾಧ್ಯವೇ ಇಲ್ಲ. ಬ್ಯಾರೇಜ್ಗಳನ್ನು ತೆರವುಮಾಡಿ, ಪೈಪ್ಲೈನ್ ನಿರ್ಮಿಸಿದರೆ ಈಗಲೂ ನೀರು ಬಿಡಲು ಸಿದ್ಧ. ಆಗ ಬೇಕಾದರೆ ರಾಜಿಮಾಡಿಕೊಳ್ಳುತ್ತೇನೆ. ಈಗ ಪೈಪ್ಲೈನ್ ನಿರ್ಮಿಸಿ, ನೀರು ಬಿಡುವುದು ಅಸಾಧ್ಯದ ಕೆಲಸ. ಅವರು ಮಾಡಿದ ಅವಾಂತರದಿಂದ ಇಷ್ಟೆಲ್ಲ ಸಮಸ್ಯೆಗಳಾಗಿವೆ ಎಂದು ಹೇಳಿದರು.