<p><strong>ತುಮಕೂರು</strong>: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ಗೆ ನಡೆಯುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಮಂಗಳವಾರ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಹಣಾಹಣಿಗೆ ವೇದಿಕೆ ಸಿದ್ಧವಾಗಿದೆ.</p>.<p>ನಾಮಪತ್ರ ಸಲ್ಲಿಸುವ ಕೆಲಸ ಮುಗಿದಿದ್ದು, ಇನ್ನೂ ಮತದಾರರಾದ ಸ್ಥಳೀಯ ಸಂಸ್ಥೆಯ ಸದಸ್ಯರನ್ನು ಓಲೈ<br />ಸುವಕೆಲಸದಲ್ಲಿ ಮೂರು ಪಕ್ಷಗಳ ಅಭ್ಯರ್ಥಿಗಳು ನಿರತರಾಗಿದ್ದಾರೆ. ಕಾಂಗ್ರೆಸ್, ಬಿಜೆಪಿಯವರು ಈಗಾಗಲೇ ಸಮಾವೇಶ ನಡೆಸಿ ಪ್ರಚಾರಕ್ಕೆ ಚಾಲನೆ ನೀಡಿದ್ದರೆ, ಮಂಗಳವಾರ ಜೆಡಿಎಸ್ನವರು ‘ಜನತಾ ಸಂಗಮ’ ಸಮಾವೇಶ ಸಂಘಟಿಸುವ ಮೂಲಕ ಪ್ರಚಾರಕ್ಕೆ ಇಳಿದಿದ್ದಾರೆ.</p>.<p>ಮಂಗಳವಾರ ನಾಮಪತ್ರ ಸಲ್ಲಿಸಲು ಅಭ್ಯರ್ಥಿಗಳುಹಿಂದುಮುಂದು ನೋಡಿದರು. ಕೊನೆ ದಿನವಾಗಿದ್ದು, ಅನಿವಾರ್ಯವಾಗಿ ಸಲ್ಲಿಸಿದರು. ಪ್ರಮುಖ ಪಕ್ಷಗಳ ಅಭ್ಯರ್ಥಿಗಳು ಇಂದೇ ನಾಮಪತ್ರ ಸಲ್ಲಿಸಿದ್ದರಿಂದ ಎಲ್ಲರೂ ‘ವಿಶ್ವಾಸ’ದಿಂದ ಕಣಕ್ಕೆ ಇಳಿದಿದ್ದಾರೆ.</p>.<p>ಈಗಾಗಲೇ ನಾಮಪತ್ರ ಸಲ್ಲಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಆರ್.ರಾಜೇಂದ್ರ ಮತ್ತೊಮ್ಮೆ ತಮ್ಮ ನಾಯಕರ ಜತೆ ಬಂದು ಬಿ ಫಾರಂ ಜತೆಗೆ ನಾಮಪತ್ರ ಸಲ್ಲಿಸಿದರು. ಶಾಸಕ ಡಾ.ಜಿ.ಪರಮೇಶ್ವರ, ಮುಖಂಡರಾದ ಟಿ.ಬಿ.ಜಯಚಂದ್ರ, ಕೆ.ಎನ್.ರಾಜಣ್ಣ, ಷಫಿಅಹಮ್ಮದ್, ರಫಿಕ್ ಅಹ್ಮದ್, ವೆಂಕಟರಮಣಪ್ಪ, ಕೆ.ಷಡಕ್ಷರಿ ಮೊದಲಾದ ಮುಖಂಡರು ಜತೆಗಿದ್ದರು.</p>.<p>ಬಿಜೆಪಿ ಅಭ್ಯರ್ಥಿ ಎನ್.ಲೋಕೇಶ್ ತಮ್ಮ ಉಮೇದುವಾರಿಕೆ ದಾಖಲಿಸಿದರು. ಸಚಿವರಾದ ಜೆ.ಸಿ.ಮಾಧುಸ್ವಾಮಿ, ಬಿ.ಸಿ.ನಾಗೇಶ್, ಶಾಸಕರಾದ ಜ್ಯೋತಿಗಣೇಶ್, ಎನ್.ರವಿಕುಮಾರ್, ಚಿದಾನಂದಗೌಡ, ಮುಖಂಡ ಬಿ.ಸುರೇಶ್ಗೌಡ ಇತರರು ಇದ್ದರು.</p>.<p>ಜೆಡಿಎಸ್ ಅಭ್ಯರ್ಥಿ ಆರ್.ಅನಿಲ್ ಕುಮಾರ್ ನಾಮಪತ್ರ ಸಲ್ಲಿಸಿದರು. ಮುಖಂಡರಾದ ಕೆ.ಎಂ.ತಿಮ್ಮರಾಯಪ್ಪ, ಸಿ.ಬಿ.ಸುರೇಶ್ಬಾಬು, ಸುಧಾಕರಲಾಲ್, ಎಂ.ವಿ.ವೀರಭದ್ರಯ್ಯ, ತಿಪ್ಪೇಸ್ವಾಮಿ ಜತೆಗಿದ್ದರು.</p>.<p>ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಯಾಗಿ ಕೆ.ಎಸ್.ಗಜೇಂದ್ರ ಕುಮಾರ್, ಪಕ್ಷೇತರ ಅಭ್ಯರ್ಥಿಯಾಗಿ ಆರ್.ಜಯರಾಮಯ್ಯ ನಾಮಪತ್ರ ಸಲ್ಲಿಸಿದರು. ಕೊನೆಯ ದಿನ ಒಟ್ಟು 5 ಮಂದಿ 8 ನಾಮಪತ್ರ ಸಲ್ಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ಗೆ ನಡೆಯುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಮಂಗಳವಾರ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಹಣಾಹಣಿಗೆ ವೇದಿಕೆ ಸಿದ್ಧವಾಗಿದೆ.</p>.<p>ನಾಮಪತ್ರ ಸಲ್ಲಿಸುವ ಕೆಲಸ ಮುಗಿದಿದ್ದು, ಇನ್ನೂ ಮತದಾರರಾದ ಸ್ಥಳೀಯ ಸಂಸ್ಥೆಯ ಸದಸ್ಯರನ್ನು ಓಲೈ<br />ಸುವಕೆಲಸದಲ್ಲಿ ಮೂರು ಪಕ್ಷಗಳ ಅಭ್ಯರ್ಥಿಗಳು ನಿರತರಾಗಿದ್ದಾರೆ. ಕಾಂಗ್ರೆಸ್, ಬಿಜೆಪಿಯವರು ಈಗಾಗಲೇ ಸಮಾವೇಶ ನಡೆಸಿ ಪ್ರಚಾರಕ್ಕೆ ಚಾಲನೆ ನೀಡಿದ್ದರೆ, ಮಂಗಳವಾರ ಜೆಡಿಎಸ್ನವರು ‘ಜನತಾ ಸಂಗಮ’ ಸಮಾವೇಶ ಸಂಘಟಿಸುವ ಮೂಲಕ ಪ್ರಚಾರಕ್ಕೆ ಇಳಿದಿದ್ದಾರೆ.</p>.<p>ಮಂಗಳವಾರ ನಾಮಪತ್ರ ಸಲ್ಲಿಸಲು ಅಭ್ಯರ್ಥಿಗಳುಹಿಂದುಮುಂದು ನೋಡಿದರು. ಕೊನೆ ದಿನವಾಗಿದ್ದು, ಅನಿವಾರ್ಯವಾಗಿ ಸಲ್ಲಿಸಿದರು. ಪ್ರಮುಖ ಪಕ್ಷಗಳ ಅಭ್ಯರ್ಥಿಗಳು ಇಂದೇ ನಾಮಪತ್ರ ಸಲ್ಲಿಸಿದ್ದರಿಂದ ಎಲ್ಲರೂ ‘ವಿಶ್ವಾಸ’ದಿಂದ ಕಣಕ್ಕೆ ಇಳಿದಿದ್ದಾರೆ.</p>.<p>ಈಗಾಗಲೇ ನಾಮಪತ್ರ ಸಲ್ಲಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಆರ್.ರಾಜೇಂದ್ರ ಮತ್ತೊಮ್ಮೆ ತಮ್ಮ ನಾಯಕರ ಜತೆ ಬಂದು ಬಿ ಫಾರಂ ಜತೆಗೆ ನಾಮಪತ್ರ ಸಲ್ಲಿಸಿದರು. ಶಾಸಕ ಡಾ.ಜಿ.ಪರಮೇಶ್ವರ, ಮುಖಂಡರಾದ ಟಿ.ಬಿ.ಜಯಚಂದ್ರ, ಕೆ.ಎನ್.ರಾಜಣ್ಣ, ಷಫಿಅಹಮ್ಮದ್, ರಫಿಕ್ ಅಹ್ಮದ್, ವೆಂಕಟರಮಣಪ್ಪ, ಕೆ.ಷಡಕ್ಷರಿ ಮೊದಲಾದ ಮುಖಂಡರು ಜತೆಗಿದ್ದರು.</p>.<p>ಬಿಜೆಪಿ ಅಭ್ಯರ್ಥಿ ಎನ್.ಲೋಕೇಶ್ ತಮ್ಮ ಉಮೇದುವಾರಿಕೆ ದಾಖಲಿಸಿದರು. ಸಚಿವರಾದ ಜೆ.ಸಿ.ಮಾಧುಸ್ವಾಮಿ, ಬಿ.ಸಿ.ನಾಗೇಶ್, ಶಾಸಕರಾದ ಜ್ಯೋತಿಗಣೇಶ್, ಎನ್.ರವಿಕುಮಾರ್, ಚಿದಾನಂದಗೌಡ, ಮುಖಂಡ ಬಿ.ಸುರೇಶ್ಗೌಡ ಇತರರು ಇದ್ದರು.</p>.<p>ಜೆಡಿಎಸ್ ಅಭ್ಯರ್ಥಿ ಆರ್.ಅನಿಲ್ ಕುಮಾರ್ ನಾಮಪತ್ರ ಸಲ್ಲಿಸಿದರು. ಮುಖಂಡರಾದ ಕೆ.ಎಂ.ತಿಮ್ಮರಾಯಪ್ಪ, ಸಿ.ಬಿ.ಸುರೇಶ್ಬಾಬು, ಸುಧಾಕರಲಾಲ್, ಎಂ.ವಿ.ವೀರಭದ್ರಯ್ಯ, ತಿಪ್ಪೇಸ್ವಾಮಿ ಜತೆಗಿದ್ದರು.</p>.<p>ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಯಾಗಿ ಕೆ.ಎಸ್.ಗಜೇಂದ್ರ ಕುಮಾರ್, ಪಕ್ಷೇತರ ಅಭ್ಯರ್ಥಿಯಾಗಿ ಆರ್.ಜಯರಾಮಯ್ಯ ನಾಮಪತ್ರ ಸಲ್ಲಿಸಿದರು. ಕೊನೆಯ ದಿನ ಒಟ್ಟು 5 ಮಂದಿ 8 ನಾಮಪತ್ರ ಸಲ್ಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>