ಪಾವಗಡ: ತಾಲ್ಲೂಕಿನ ನಾಗಲಮಡಿಕೆ ಗ್ರಾಮದ ಸುಬ್ರಹ್ಮಣೇಶ್ವರ ದೇಗುಲದ ಬಳಿಯ ಮೇವು ಬ್ಯಾಂಕ್ಗೆ ಸೋಮವಾರ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಭೇಟಿ ನೀಡಿ ಪರಿಶೀಲಿಸಿದರು.
ಮೇವು ಪಡೆಯಲು ಬರುವ ರೈತರಿಗೆ ಸ್ಥಳದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಬೆಂಕಿ ಅವಘಡ ಸಂಭವಿಸದಂತೆ ಎಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಪಟ್ಟಣದ ಅಗಸರ ಕುಂಟೆ ಕೆರೆಗೆ ಭೇಟಿ ನೀಡಿ ಪರಿಶೀಲಿಸಿ, ಕುಂಟೆಯ ನೀರಿನಲ್ಲಿ ಇಳಿಯದಂತೆ ಎಚ್ಚರಿಕಾ ಕ್ರಮ ತೆಗೆದುಕೊಳ್ಳಬೇಕು. ಸದ್ಯ ಶೀಘ್ರ ಕುಂಟೆ ತುಂಬಿಸಲು ನಾಗಲಮಡಿಕೆ ಡ್ಯಾಂನಿಂದ ನೀರು ಸರಬರಾಜು ಮಾಡಬೇಕು ಎಂದು ಸೂಚಿಸಿದರು.
ಪಟ್ಟಣದ ಹೊರವಲಯದಲ್ಲಿನ ತುಂಗಭದ್ರಾ ನೀರು ಸಂಗ್ರಹಣಾಗಾರವನ್ನು ಪರಿಶೀಲಿಸಿ ಪೈಪ್ಲೈನ್ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಉಪ ವಿಭಾಗಾಧಿಕಾರಿ ಗೊಟುರು ಶಿವಪ್ಪ, ತಹಶೀಲ್ದಾರ್ ಸಂತೋಷ್ ಕುಮಾರ್, ಪಾವಗಡ ಕಾರ್ಯನಿರ್ವಹಣಾಧಿಕಾರಿ ಜಾನಕಿರಾಂ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.