ಶಿರಾದಲ್ಲಿ ಸೂಕ್ತ ಹೂವಿನ ಮಾರುಕಟ್ಟೆ ಇಲ್ಲದೆ ರಸ್ತೆ ಬದಿಯಲ್ಲಿ ಹೂವಿನ ವ್ಯಾಪಾರ ನಡೆಯುತ್ತಿದ್ದು ಈ ಮಾರುಕಟ್ಟೆಯನ್ನು ಚಿಕ್ಕನಹಳ್ಳಿಗೆ ಸ್ಥಳಾಂತರ ಮಾಡಿದರೆ ಮಾರುಕಟ್ಟೆಗೆ ಹೊಸ ಕಳೆ ಬಂದು ರೈತರಿಗೆ ಅನುಕೂಲವಾಗುವುದು ಎಂದು ವರದಿ ಮಾಡಲಾಗಿತ್ತು. ಪ್ರಜಾವಾಣಿ ವರದಿ ಪರಿಣಾಮವಾಗಿ ನಗರಸಭೆ ಅಧಿಕಾರಿಗಳು, ಚಿಕ್ಕನಹಳ್ಳಿ ಪುಷ್ಪ ಹರಾಜು ಮಾರುಕಟ್ಟೆ ಕೇಂದ್ರದ ಸಹಾಯಕ ನಿರ್ದೇಶಕರು, ಪೊಲೀಸ್ ಇಲಾಖೆ ಶಾಸಕ ಟಿ.ಬಿ.ಜಯಚಂದ್ರ ಅವರ ಜತೆ ಚರ್ಚೆ ನಡೆಸಿ ಮಾರುಕಟ್ಟೆ ಸ್ಥಳಾಂತರಕ್ಕೆ ನಿರ್ಧಾರ ಮಾಡಿದ್ದಾರೆ.