<p><strong>ಹೆಬ್ಬೂರು:</strong> ಶತಮಾನ ಕಂಡ ಹೆಬ್ಬೂರು ಶಾಲೆಗೆ ₹1.68 ಕೋಟಿ ಸಿಎಸ್ಆರ್ ಅನುದಾನದಲ್ಲಿ ಸುಸಜ್ಜಿತ ಕೊಠಡಿ, ಶೌಚಾಲಯ, ಗ್ರಂಥಾಲಯ ಸೇರಿ ಅಗತ್ಯ ಸೌಲಭ್ಯ ಕಲ್ಪಿಸಲಾಗುವುದು ಎಂದು ಶಾಸಕ ಬಿ.ಸುರೇಶ್ಗೌಡ ಹೇಳಿದರು.</p>.<p>ಹೆಬ್ಬೂರಿನಲ್ಲಿ ಸೋಮವಾರ ಶಾಲಾ ಕೊಠಡಿ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.</p>.<p>‘ಬಿಡದಿಯ ಬಾಷ್ ಇಂಟರ್ನ್ಯಾಷನಲ್ ಕಂಪನಿಯ ಸಿಎಸ್ಆರ್ ಅನುದಾನದಲ್ಲಿ ಶಾಲೆ ಅಭಿವೃದ್ಧಿ ಪಡಿಸಲಾಗುತ್ತಿದೆ. ₹1.68 ಕೋಟಿಯನ್ನು ಕಂಪನಿ ನೀಡಿದೆ. ನಾಗವಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಸರ್ಕಾರ ನೀಡಿದ ಹಣ ವಾಪಸ್ ಹೋಗಿತ್ತು. ಈ ಕುರಿತು ಸದನದಲ್ಲಿ ಮಾತನಾಡಿ ಮತ್ತೆ ₹1.48 ಕೋಟಿ ಬಿಡುಗಡೆ ಮಾಡಿಸಿದ್ದೇನೆ. ಸರ್ಕಾರದ ಹಣ ತರುವುದು ಅಷ್ಟು ಕಷ್ಟ ಇದೆ’ ಎಂದರು.</p>.<p>ಮುಂದಿನ ನೂರು ವರ್ಷ ಬಾಳಿಕೆ ಬರುವಂತಹ ಕಟ್ಟಡ ನಿರ್ಮಿಸಲಾಗುವುದು. ಪೋಷಕರು ಇಂಗ್ಲಿಷ್ ವ್ಯಾಮೋಹದಿಂದ ಹೊರ ಬರಬೇಕು. ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಬೇಕು. ಶಾಲಾ–ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಬೇಕು ಎಂದು ಸಲಹೆ ಮಾಡಿದರು.</p>.<p>ಬಾಷ್ ಕಂಪನಿಯ ಸಕಿನ ಬೇಕರ್, ‘ಸರ್ಕಾರಿ ಶಾಲೆ ನಿರ್ಮಾಣ ನಮ್ಮ ಸಂಸ್ಥೆಯ ಉದ್ದೇಶ. ಮುಂದಿನ ದಿನಗಳಲ್ಲಿ ಮತ್ತಷ್ಟು ಅನುದಾನ ಒದಗಿಸಲಾಗುವುದು’ ಎಂದು ಭರವಸೆ ನೀಡಿದರು.</p>.<p>ಮುಖಂಡರಾದ ಬಾಬು, ಶಿವಕುಮಾರ್, ಪ್ರದೀಪ್, ಸಿದ್ದೇಗೌಡ, ಚಿಕ್ಕಸ್ವಾಮಿ, ವೆಂಕಟೇಶ್, ಅನುಗೌಡ, ಕೇಶವಮೂರ್ತಿ, ಮಂಜುಳಾ, ತೇಜಸ್, ಅಕ್ಕಮ್ಮ, ಮಾಸ್ತಿಗೌಡ, ಮೋಹನಕುಮಾರ್, ನರಸಿಂಹಮೂರ್ತಿ, ರಾಜಶೇಖರ್, ಪ್ರಭಾಕರ್ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೆಬ್ಬೂರು:</strong> ಶತಮಾನ ಕಂಡ ಹೆಬ್ಬೂರು ಶಾಲೆಗೆ ₹1.68 ಕೋಟಿ ಸಿಎಸ್ಆರ್ ಅನುದಾನದಲ್ಲಿ ಸುಸಜ್ಜಿತ ಕೊಠಡಿ, ಶೌಚಾಲಯ, ಗ್ರಂಥಾಲಯ ಸೇರಿ ಅಗತ್ಯ ಸೌಲಭ್ಯ ಕಲ್ಪಿಸಲಾಗುವುದು ಎಂದು ಶಾಸಕ ಬಿ.ಸುರೇಶ್ಗೌಡ ಹೇಳಿದರು.</p>.<p>ಹೆಬ್ಬೂರಿನಲ್ಲಿ ಸೋಮವಾರ ಶಾಲಾ ಕೊಠಡಿ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.</p>.<p>‘ಬಿಡದಿಯ ಬಾಷ್ ಇಂಟರ್ನ್ಯಾಷನಲ್ ಕಂಪನಿಯ ಸಿಎಸ್ಆರ್ ಅನುದಾನದಲ್ಲಿ ಶಾಲೆ ಅಭಿವೃದ್ಧಿ ಪಡಿಸಲಾಗುತ್ತಿದೆ. ₹1.68 ಕೋಟಿಯನ್ನು ಕಂಪನಿ ನೀಡಿದೆ. ನಾಗವಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಸರ್ಕಾರ ನೀಡಿದ ಹಣ ವಾಪಸ್ ಹೋಗಿತ್ತು. ಈ ಕುರಿತು ಸದನದಲ್ಲಿ ಮಾತನಾಡಿ ಮತ್ತೆ ₹1.48 ಕೋಟಿ ಬಿಡುಗಡೆ ಮಾಡಿಸಿದ್ದೇನೆ. ಸರ್ಕಾರದ ಹಣ ತರುವುದು ಅಷ್ಟು ಕಷ್ಟ ಇದೆ’ ಎಂದರು.</p>.<p>ಮುಂದಿನ ನೂರು ವರ್ಷ ಬಾಳಿಕೆ ಬರುವಂತಹ ಕಟ್ಟಡ ನಿರ್ಮಿಸಲಾಗುವುದು. ಪೋಷಕರು ಇಂಗ್ಲಿಷ್ ವ್ಯಾಮೋಹದಿಂದ ಹೊರ ಬರಬೇಕು. ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಬೇಕು. ಶಾಲಾ–ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಬೇಕು ಎಂದು ಸಲಹೆ ಮಾಡಿದರು.</p>.<p>ಬಾಷ್ ಕಂಪನಿಯ ಸಕಿನ ಬೇಕರ್, ‘ಸರ್ಕಾರಿ ಶಾಲೆ ನಿರ್ಮಾಣ ನಮ್ಮ ಸಂಸ್ಥೆಯ ಉದ್ದೇಶ. ಮುಂದಿನ ದಿನಗಳಲ್ಲಿ ಮತ್ತಷ್ಟು ಅನುದಾನ ಒದಗಿಸಲಾಗುವುದು’ ಎಂದು ಭರವಸೆ ನೀಡಿದರು.</p>.<p>ಮುಖಂಡರಾದ ಬಾಬು, ಶಿವಕುಮಾರ್, ಪ್ರದೀಪ್, ಸಿದ್ದೇಗೌಡ, ಚಿಕ್ಕಸ್ವಾಮಿ, ವೆಂಕಟೇಶ್, ಅನುಗೌಡ, ಕೇಶವಮೂರ್ತಿ, ಮಂಜುಳಾ, ತೇಜಸ್, ಅಕ್ಕಮ್ಮ, ಮಾಸ್ತಿಗೌಡ, ಮೋಹನಕುಮಾರ್, ನರಸಿಂಹಮೂರ್ತಿ, ರಾಜಶೇಖರ್, ಪ್ರಭಾಕರ್ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>