<p><strong>ತುರುವೇಕೆರೆ</strong>: ‘ಆಪರೇಷನ್ ಸಿಂಧೂರ್’ನ ಯಶಸ್ಸನ್ನು ಪ್ರಧಾನಿಗೆ ನೀಡದೆ ಸೈನಿಕರಿಗೆ ನೀಡಬೇಕು ಎನ್ನುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿಲುವು ಖಂಡನೀಯ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಹೇಳಿದರು.</p>.<p>ಪಟ್ಟಣದ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾಕಿಸ್ತಾನದೊಂದಿಗೆ ಯುದ್ಧ ನಡೆಸುವ ಮಹತ್ವದ ತೀರ್ಮಾನ ತೆಗೆದುಕೊಂಡಿದ್ದು ಪ್ರಧಾನಿ ನರೇಂದ್ರ ಮೋದಿ ಮತ್ತವರ ಕ್ಯಾಬಿನೆಟ್. ಇವರಿಗೆ ಈ ಸಂಘರ್ಷದ ಗೆಲುವಿನ ಕ್ರೆಡಿಟ್ ಕೊಡಬೇಕು ಎಂದು ಪ್ರತಿಪಾದಿಸಿದರು.</p>.<p>ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಪ್ರತಿದಿನ ಈ ಬಗ್ಗೆ ಜಾಹೀರಾತು ಕೂಡ ನೀಡುತ್ತಿದ್ದಾರೆ. ರಾಜ್ಯದ ತೆರಿಗೆದಾರರ ಹಣದಿಂದಲೇ ಈ ಯೋಜನೆಗಳು ನಡೆಯುತ್ತಿವೆಯೇ ಹೊರೆತು ಮುಖ್ಯಮಂತ್ರಿ ಅಥವಾ ಕಾಂಗ್ರೆಸ್ ಪಕ್ಷದ ಫಂಡ್ನಿಂದಲ್ಲ. ಹೀಗಿರುವಾಗ ಗ್ಯಾರಂಟಿಗಳ ಯಶಸ್ಸಿನ ಕೊಡುಗೆಯನ್ನು ರಾಜ್ಯದ ತೆರಿಗೆದಾರರಿಗೆ ನೀಡಬೇಕೆ ಹೊರತು ಸಿದ್ದರಾಮಯ್ಯ ಅವರಿಗಲ್ಲ ಎಂದರು.</p>.<p>‘ಮೇ 20ರಂದು ಹೊಸಪೇಟೆಯಲ್ಲಿ ನಡೆಯುವ ಸಮರ್ಪಣೆ ಸಂಕಲ್ಪ ಕಾರ್ಯಕ್ರಮಕ್ಕೆ ಜನರಿಗೆ ಹಣ ಕೊಟ್ಟು ಕರೆದುಕೊಂಡು ಹೋಗುತ್ತಿರುವುದು ನಾಚಿಕೆಗೇಡು’ ಎಂದರು.</p>.<p>ಪಟ್ಟಣದ ಪಿಎಲ್ಡಿ ಬ್ಯಾಂಕ್ ಚುನಾವಣೆ ಸಮೀಪಿಸುತ್ತಿರುವಾಗಲೇ ಸ್ಪಷ್ಟ ಕಾರಣ ನೀಡದೇ 8,200 ಮತದಾರರನ್ನು ವಜಾಮಾಡಿದ್ದು, ಇದು ಕಾನೂನುಬಾಹಿರ. ಈ ಬಗ್ಗೆ ಡಿಸ್ಟಿಕ್ ರಿಜಿಸ್ಟಾರ್ ಆಫ್ ಕೊ ಆಪರೇಟೀವ್ ಸೊಸೈಟಿ ಅಧಿಕಾರಿಗಳಿಗೆ ಪತ್ರ ಬರೆದು, ಸಮಗ್ರ ತನಿಖೆಗೆ ಒತ್ತಾಯಿಸುತ್ತೇನೆ ಎಂದರು.</p>.<p>ಗೋಷ್ಠಿಯಲ್ಲಿ ವೆಂಕಟಾಪುರ ಯೋಗೀಶ್, ಮಂಗಿಕುಪ್ಪೆ ಬಸವರಾಜು, ದೇವರಾಜು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುರುವೇಕೆರೆ</strong>: ‘ಆಪರೇಷನ್ ಸಿಂಧೂರ್’ನ ಯಶಸ್ಸನ್ನು ಪ್ರಧಾನಿಗೆ ನೀಡದೆ ಸೈನಿಕರಿಗೆ ನೀಡಬೇಕು ಎನ್ನುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿಲುವು ಖಂಡನೀಯ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಹೇಳಿದರು.</p>.<p>ಪಟ್ಟಣದ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾಕಿಸ್ತಾನದೊಂದಿಗೆ ಯುದ್ಧ ನಡೆಸುವ ಮಹತ್ವದ ತೀರ್ಮಾನ ತೆಗೆದುಕೊಂಡಿದ್ದು ಪ್ರಧಾನಿ ನರೇಂದ್ರ ಮೋದಿ ಮತ್ತವರ ಕ್ಯಾಬಿನೆಟ್. ಇವರಿಗೆ ಈ ಸಂಘರ್ಷದ ಗೆಲುವಿನ ಕ್ರೆಡಿಟ್ ಕೊಡಬೇಕು ಎಂದು ಪ್ರತಿಪಾದಿಸಿದರು.</p>.<p>ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಪ್ರತಿದಿನ ಈ ಬಗ್ಗೆ ಜಾಹೀರಾತು ಕೂಡ ನೀಡುತ್ತಿದ್ದಾರೆ. ರಾಜ್ಯದ ತೆರಿಗೆದಾರರ ಹಣದಿಂದಲೇ ಈ ಯೋಜನೆಗಳು ನಡೆಯುತ್ತಿವೆಯೇ ಹೊರೆತು ಮುಖ್ಯಮಂತ್ರಿ ಅಥವಾ ಕಾಂಗ್ರೆಸ್ ಪಕ್ಷದ ಫಂಡ್ನಿಂದಲ್ಲ. ಹೀಗಿರುವಾಗ ಗ್ಯಾರಂಟಿಗಳ ಯಶಸ್ಸಿನ ಕೊಡುಗೆಯನ್ನು ರಾಜ್ಯದ ತೆರಿಗೆದಾರರಿಗೆ ನೀಡಬೇಕೆ ಹೊರತು ಸಿದ್ದರಾಮಯ್ಯ ಅವರಿಗಲ್ಲ ಎಂದರು.</p>.<p>‘ಮೇ 20ರಂದು ಹೊಸಪೇಟೆಯಲ್ಲಿ ನಡೆಯುವ ಸಮರ್ಪಣೆ ಸಂಕಲ್ಪ ಕಾರ್ಯಕ್ರಮಕ್ಕೆ ಜನರಿಗೆ ಹಣ ಕೊಟ್ಟು ಕರೆದುಕೊಂಡು ಹೋಗುತ್ತಿರುವುದು ನಾಚಿಕೆಗೇಡು’ ಎಂದರು.</p>.<p>ಪಟ್ಟಣದ ಪಿಎಲ್ಡಿ ಬ್ಯಾಂಕ್ ಚುನಾವಣೆ ಸಮೀಪಿಸುತ್ತಿರುವಾಗಲೇ ಸ್ಪಷ್ಟ ಕಾರಣ ನೀಡದೇ 8,200 ಮತದಾರರನ್ನು ವಜಾಮಾಡಿದ್ದು, ಇದು ಕಾನೂನುಬಾಹಿರ. ಈ ಬಗ್ಗೆ ಡಿಸ್ಟಿಕ್ ರಿಜಿಸ್ಟಾರ್ ಆಫ್ ಕೊ ಆಪರೇಟೀವ್ ಸೊಸೈಟಿ ಅಧಿಕಾರಿಗಳಿಗೆ ಪತ್ರ ಬರೆದು, ಸಮಗ್ರ ತನಿಖೆಗೆ ಒತ್ತಾಯಿಸುತ್ತೇನೆ ಎಂದರು.</p>.<p>ಗೋಷ್ಠಿಯಲ್ಲಿ ವೆಂಕಟಾಪುರ ಯೋಗೀಶ್, ಮಂಗಿಕುಪ್ಪೆ ಬಸವರಾಜು, ದೇವರಾಜು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>