ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೋಬಳಿ ಮಟ್ಟದಲ್ಲಿ ಮತದಾನಕ್ಕೆ ಅವಕಾಶ: ಕಾಂಗ್ರೆಸ್‌ ಮುಖಂಡ ಕೆ.ಎನ್.ರಾಜಣ್ಣ ಮಾಹಿತಿ

Last Updated 22 ಅಕ್ಟೋಬರ್ 2020, 4:07 IST
ಅಕ್ಷರ ಗಾತ್ರ

ಮಧುಗಿರಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಮೇಶಬಾಬು ಅವರಿಗೆ ಮತ ನೀಡುವಂತೆ ಕಾಂಗ್ರೆಸ್‌ ಮುಖಂಡ ಕೆ.ಎನ್.ರಾಜಣ್ಣ ಮನವಿ ಮಾಡಿದರು.

ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಈ ಬಾರಿ ಹೋಬಳಿ ಮಟ್ಟದಲ್ಲಿ ಮತದಾನ ಮಾಡಲು ಅವಕಾಶ ನೀಡಿದ್ದು, ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದು, ರಮೇಶಬಾಬು ಅವರ ಗೆಲುವಿಗೆ ಶ್ರಮಿಸಬೇಕು ಎಂದರು. ‌

ಕಾಂಗ್ರೆಸ್ ಅಭ್ಯರ್ಥಿ ರಮೇಶ್ ಬಾಬು ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪದವೀಧರರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡುತ್ತಿಲ್ಲ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೌಶಲಾಭಿವೃದ್ಧಿ ನಿಗಮ ಸ್ಥಾಪಿಸಿ, ಯುವಜನರಿಗೆ ಸ್ವಯಂ ಉದ್ದಿಮೆ, ಉದ್ಯೋಗ ಪ್ರಾರಂಭಿಸಲು ಒತ್ತು ನೀಡಿದ್ದರು. ಸರ್ಕಾರಿ ನೌಕರರ 45 ಬೇಡಿಕೆಗಳಲ್ಲಿ 37 ಬೇಡಿಕೆಗಳನ್ನು ಈಡೇರಿಸಿದ್ದಾರೆ ಎಂದರು.

ರಾಜ್ಯ ಸಹಕಾರಿ ಮಹಾಮಂಡಳದ ಅಧ್ಯಕ್ಷ ಎನ್.ಗಂಗಣ್ಣ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಇಂದಿರಾ ದೇನಾನಾಯ್ಕ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನಯ್ಯ, ಎಸ್.ಆರ್.ರಾಜಗೋಪಾಲ್, ಪುರಸಭೆ ಮಾಜಿ ಅಧ್ಯಕ್ಷ ನಂಜುಂಡಯ್ಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT