<p><strong>ಗುಬ್ಬಿ:</strong> ಸರ್ಕಾರದ ಭಾಗವಾಗಿರುವುದರಿಂದ ಹೇಮಾವತಿ ಲಿಂಕ್ ಕೆನಾಲ್ ವಿಚಾರದಲ್ಲಿ ಬೀದಿಗೆ ಇಳಿದು ಹೋರಾಟ ನಡೆಸಲು ಸಾಧ್ಯವಾಗುವುದಿಲ್ಲ ಎಂದು ಶಾಸಕ ಎಸ್.ಆರ್. ಶ್ರೀನಿವಾಸ್ ತಿಳಿಸಿದರು.</p>.<p>ತಾಲ್ಲೂಕಿನ ನಿಟ್ಟೂರಿನಲ್ಲಿ ಬೆಸ್ಕಾಂ ಕಚೇರಿ ನೂತನ ಕಟ್ಟಡಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.</p>.<p>‘ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿಗೆ ನನ್ನ ವಿರೋಧವಿದೆ. ಬೀದಿಗೆ ಇಳಿದು ಹೋರಾಡುವುದಕ್ಕೆ ಬದಲಾಗಿ ಶಾಸನಸಭೆಯಲ್ಲಿ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಬಳಿ ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುವುದು. ಯಾರು ಎಷ್ಟೇ ಬೊಬ್ಬೆ ಹೊಡೆಯಲಿ, ತಾಲ್ಲೂಕಿನ ಜನತೆಯ ಪರವಾಗಿ ನಾನು ನಿಲ್ಲುತ್ತೇನೆ’ ಎಂದರು.</p>.<p>‘ನನಗೆ ಅಧಿಕಾರಕ್ಕಿಂತ ತಾಲ್ಲೂಕಿನ ಅಭಿವೃದ್ಧಿ ಮುಖ್ಯ. ತಾಲ್ಲೂಕಿನ ಜನರ ಹಿತವನ್ನು ಎಂದಿಗೂ ಕಡೆಗಣಿಸುವುದಿಲ್ಲ. ತಾಲ್ಲೂಕಿನ ಜನತೆ ಯಾವುದೇ ಗಾಳಿ ಮಾತಿಗೂ ಕಿವಿಗೊಡಲು ಅವಕಾಶ ಕೊಡಬಾರದು’ ಎಂದು ತಿಳಿಸಿದರು.</p>.<p>ಸರ್ಕಾರವು ಇದೀಗ ಅನುದಾನ ಬಿಡುಗಡೆಗೊಳಿಸುತ್ತಿರುವುದರಿಂದ, ಅಭಿವೃದ್ಧಿ ಕೆಲಸಗಳನ್ನು ಮಾಡಲು ಆದ್ಯತೆ ನೀಡಲಾಗುತ್ತಿದೆ. ತಾಲ್ಲೂಕಿನ ನೀರಾವರಿ ಯೋಜನೆ, ರಸ್ತೆ ಅಭಿವೃದ್ಧಿ ಹಾಗೂ ಮೂಲ ಸೌಕರ್ಯಗಳಿಗಾಗಿ ಹೆಚ್ಚಿನ ಅನುದಾನ ಒದಗಿಸುವಂತೆ ಬೆಳಗಾವಿ ಅಧಿವೇಶನದಲ್ಲಿ ಚರ್ಚೆ ನಡೆಸಲಾಗುವುದು’ ಎಂದರು.</p>.<p>ನಿಟ್ಟೂರಿಗೆ ಬಸ್ ನಿಲ್ದಾಣದ ಅಗತ್ಯವಿದ್ದು, ಸದ್ಯ ಜಾಗ ದೊರೆಯದ ಕಾರಣ ಏನೂ ಮಾಡಲಾಗುತ್ತಿಲ್ಲ. ಸೂಕ್ತವಾದ ಜಾಗ ದೊರೆತಲ್ಲಿ ಹೈಟೆಕ್ ಬಸ್ ನಿಲ್ದಾಣ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.</p>.<p>ತುಮಕೂರು ಬೆಸ್ಕಾಂ ಇಲಾಖೆಯ ಇಇ ಪ್ರಶಾಂತ್ ಕೂಡ್ಲಿಗಿ, ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರು, ಬೆಸ್ಕಾಂ ಇಲಾಖೆಯ ರಾಜೇಶ್, ಕಾಂತರಾಜು, ಗವಿ ಸಿದ್ದಪ್ಪ, ನಟರಾಜು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಬ್ಬಿ:</strong> ಸರ್ಕಾರದ ಭಾಗವಾಗಿರುವುದರಿಂದ ಹೇಮಾವತಿ ಲಿಂಕ್ ಕೆನಾಲ್ ವಿಚಾರದಲ್ಲಿ ಬೀದಿಗೆ ಇಳಿದು ಹೋರಾಟ ನಡೆಸಲು ಸಾಧ್ಯವಾಗುವುದಿಲ್ಲ ಎಂದು ಶಾಸಕ ಎಸ್.ಆರ್. ಶ್ರೀನಿವಾಸ್ ತಿಳಿಸಿದರು.</p>.<p>ತಾಲ್ಲೂಕಿನ ನಿಟ್ಟೂರಿನಲ್ಲಿ ಬೆಸ್ಕಾಂ ಕಚೇರಿ ನೂತನ ಕಟ್ಟಡಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.</p>.<p>‘ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿಗೆ ನನ್ನ ವಿರೋಧವಿದೆ. ಬೀದಿಗೆ ಇಳಿದು ಹೋರಾಡುವುದಕ್ಕೆ ಬದಲಾಗಿ ಶಾಸನಸಭೆಯಲ್ಲಿ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಬಳಿ ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುವುದು. ಯಾರು ಎಷ್ಟೇ ಬೊಬ್ಬೆ ಹೊಡೆಯಲಿ, ತಾಲ್ಲೂಕಿನ ಜನತೆಯ ಪರವಾಗಿ ನಾನು ನಿಲ್ಲುತ್ತೇನೆ’ ಎಂದರು.</p>.<p>‘ನನಗೆ ಅಧಿಕಾರಕ್ಕಿಂತ ತಾಲ್ಲೂಕಿನ ಅಭಿವೃದ್ಧಿ ಮುಖ್ಯ. ತಾಲ್ಲೂಕಿನ ಜನರ ಹಿತವನ್ನು ಎಂದಿಗೂ ಕಡೆಗಣಿಸುವುದಿಲ್ಲ. ತಾಲ್ಲೂಕಿನ ಜನತೆ ಯಾವುದೇ ಗಾಳಿ ಮಾತಿಗೂ ಕಿವಿಗೊಡಲು ಅವಕಾಶ ಕೊಡಬಾರದು’ ಎಂದು ತಿಳಿಸಿದರು.</p>.<p>ಸರ್ಕಾರವು ಇದೀಗ ಅನುದಾನ ಬಿಡುಗಡೆಗೊಳಿಸುತ್ತಿರುವುದರಿಂದ, ಅಭಿವೃದ್ಧಿ ಕೆಲಸಗಳನ್ನು ಮಾಡಲು ಆದ್ಯತೆ ನೀಡಲಾಗುತ್ತಿದೆ. ತಾಲ್ಲೂಕಿನ ನೀರಾವರಿ ಯೋಜನೆ, ರಸ್ತೆ ಅಭಿವೃದ್ಧಿ ಹಾಗೂ ಮೂಲ ಸೌಕರ್ಯಗಳಿಗಾಗಿ ಹೆಚ್ಚಿನ ಅನುದಾನ ಒದಗಿಸುವಂತೆ ಬೆಳಗಾವಿ ಅಧಿವೇಶನದಲ್ಲಿ ಚರ್ಚೆ ನಡೆಸಲಾಗುವುದು’ ಎಂದರು.</p>.<p>ನಿಟ್ಟೂರಿಗೆ ಬಸ್ ನಿಲ್ದಾಣದ ಅಗತ್ಯವಿದ್ದು, ಸದ್ಯ ಜಾಗ ದೊರೆಯದ ಕಾರಣ ಏನೂ ಮಾಡಲಾಗುತ್ತಿಲ್ಲ. ಸೂಕ್ತವಾದ ಜಾಗ ದೊರೆತಲ್ಲಿ ಹೈಟೆಕ್ ಬಸ್ ನಿಲ್ದಾಣ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.</p>.<p>ತುಮಕೂರು ಬೆಸ್ಕಾಂ ಇಲಾಖೆಯ ಇಇ ಪ್ರಶಾಂತ್ ಕೂಡ್ಲಿಗಿ, ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರು, ಬೆಸ್ಕಾಂ ಇಲಾಖೆಯ ರಾಜೇಶ್, ಕಾಂತರಾಜು, ಗವಿ ಸಿದ್ದಪ್ಪ, ನಟರಾಜು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>