ಎಐಡಿಎಸ್ಒ ಜಿಲ್ಲಾ ಘಟಕದ ಕಾರ್ಯದರ್ಶಿ ಲಕ್ಕಪ್ಪ ಮಾತನಾಡಿ, ಈ ವರ್ಷದ ಸರ್ಕಾರಿ ಕೋಟಾದಡಿ ಎಂಜಿನಿಯರಿಂಗ್ ಪ್ರವೇಶಾತಿ ಪಡೆಯುವ ವಿದ್ಯಾರ್ಥಿಗಳಿಗೆ ₹10 ಸಾವಿರದವರೆಗೆ ಶುಲ್ಕ ಏರಿಕೆ ಮಾಡಿರುವ ನಿರ್ಧಾರ ರಾಜ್ಯದ ವಿದ್ಯಾರ್ಥಿಗಳನ್ನು ಆತಂಕಕ್ಕೆ ತಳ್ಳಿದೆ. ಈಗಾಗಲೇ ದಾಖಲೆ ಪರಿಶೀಲನೆ ಪ್ರಕ್ರಿಯೆ ಮುಗಿದು, ಮೊದಲ ಸುತ್ತಿನ ಸೀಟು ಹಂಚಿಕೆ ಆಗಿದೆ. ಈಗ ಧಿಡೀರನೆ ಶುಲ್ಕ ಏರಿಕೆ ಮಾಡಿರುವುದು ವಿದ್ಯಾರ್ಥಿ ವಿರೋಧಿ ಮಾತ್ರವಲ್ಲ ಕಾನೂನು ಬಾಹಿರ ನಡೆ’ ಎಂದರು.