<p><strong>ತುಮಕೂರು:</strong> ‘ಅರಿವು’ ಶೈಕ್ಷಣಿಕ ಸಾಲದ ಯೋಜನೆಯ ಅನುದಾನ ಬಿಡುಗಡೆ ಮಾಡುವಂತೆ ಆಗ್ರಹಿಸಿ ಕಾಂಗ್ರೆಸ್ ಅಲ್ಪಸಂಖ್ಯಾತರ ಜಿಲ್ಲಾ ಘಟಕದ ನೇತೃತ್ವದಲ್ಲಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ಅಲ್ಪಸಂಖ್ಯಾತರಸಮುದಾಯದ ಶೈಕ್ಷಣಿಕ ಪ್ರಗತಿಗೆ ನೀಡುತ್ತಿದ್ದ ಅರಿವು ಸಾಲ ಯೋಜನೆಯ ಅನುದಾನದಲ್ಲಿ ಸಾಕಷ್ಟು ಕಡಿತ ಮಾಡಲಾಗಿದೆ. ಕಡಿತ ಮಾಡಿರುವ ಅನುದಾನವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಅತೀಕ್ ಅಹಮದ್<br />ಆಗ್ರಹಿಸಿದರು.</p>.<p>ಕಳೆದ ಎರಡು ವರ್ಷಗಳಿಂದಲೂ ಅನುದಾನ ಕಡಿಮೆ ಮಾಡಲಾಗುತ್ತಿದೆ. 2018-19ರಲ್ಲಿ ₹150 ಕೋಟಿ, 2019-20ರಲ್ಲಿ ₹160 ಕೋಟಿ ನೀಡಲಾಗಿದೆ. ಆದರೆ 2020-21ರಲ್ಲಿ ಕೇವಲ ₹30 ಕೋಟಿ ಕೊಡಲಾಗಿದೆ. ಇದರಿಂದ ಈ ಹಿಂದಿನ ಸಾಲುಗಳಲ್ಲಿ ಕಲಿಯುತ್ತಿರುವ ಮಕ್ಕಳ ಶುಲ್ಕ ಕಟ್ಟಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು.</p>.<p>ಕಳೆದ ವರ್ಷದ ಬಜೆಟ್ನಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಕ್ಕೆ ₹227 ಕೋಟಿ ಅನುದಾನ ನೀಡ<br />ಲಾಗಿದ್ದು, 2020-21ರಲ್ಲಿ ₹71 ಕೋಟಿ ಕೊಡಲಾಗಿದೆ. ಹೊಸದಾಗಿ ಶೈಕ್ಷಣಿಕ ಸಾಲಕ್ಕೆ ಅರಿವು ಯೋಜನೆಯಡಿ ಅರ್ಜಿ ಸಲ್ಲಿಸಿದವರಿಗೆ ಸಾಲ ಸೌಲಭ್ಯ ಮರೀಚಿಕೆಯಾಗಿದೆ. ನವೀಕರಣದ ಅರ್ಜಿಗಳಿಗೆ ಪೂರ್ಣ ಪ್ರಮಾಣದ ಸಾಲಸೌಲಭ್ಯ ಒದಗಿಸಲು ಬಿಡುಗಡೆಯಾಗಿರುವ ಹಣ ಸಾಲದಾಗಿದೆ ಎಂದರು.</p>.<p>ಅಲ್ಯಸಂಖ್ಯಾತರ ಕಲ್ಯಾಣ ಇಲಾಖೆಗೂ ವರ್ಷದಿಂದ ವರ್ಷಕ್ಕೆ ನೀಡುತ್ತಿದ್ದ ಅನುದಾನ ಕಡಿತ ಮಾಡ<br />ಲಾಗಿದೆ. 2019–20ರಲ್ಲಿ ₹2012 ಕೋಟಿ ಇದ್ದ ಅನುದಾನ, 2020–21ರಲ್ಲಿ ₹812 ಕೋಟಿಗೆ ಇಳಿಕೆ ಮಾಡಲಾಗಿದೆ. ಇದು ಅಲ್ಪಸಂಖ್ಯಾತರನ್ನು ಅಭಿವೃದ್ಧಿಯಿಂದ ವಂಚಿಸುವ ಹುನ್ನಾರವಾಗಿದೆ ಎಂದು ದೂರಿದರು.</p>.<p>ರಾಜ್ಯ, ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದ್ದು, ಅಲ್ಪಸಂಖ್ಯಾತರ ಅಭಿವೃದ್ಧಿ ಕಡೆಗಣಿಸಿವೆ. ಕೋವಿಡ್–19 ಮಹಾಮಾರಿ ನೆಪದಲ್ಲಿ ಅಲ್ಪಸಂಖ್ಯಾತರ ಕಲ್ಯಾಣಕ್ಕೆ ನೀಡುತ್ತಿದ್ದ ಅನುದಾನ ಕಡಿತಗೊಳಿಸಿ, ಅನ್ಯಾಯ ಮಾಡಲಾಗಿದೆ. ಸಮರ್ಪಕವಾಗಿ ಅನುದಾನ ಬಿಡುಗಡೆ ಮಾಡಬೇಕು. ಇಲ್ಲವಾದರೆ ರಾಜ್ಯದಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದುಎಚ್ಚರಿಸಿದರು.</p>.<p>ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಸಂಜೀವ್ ಕುಮಾರ್, ಮುಬಾರಕ್ ಪಾಷ, ನೀಷಾ, ಥಾಮ್ಸನ್, ಜಾಜ್, ವಿಜಯಕುಮಾರ್, ದಾದಾಪೀರ್, ಪ್ರಕಾಶ್, ಶಿವಾಜಿ, ಅಬ್ದುಲ್ ರಹೀಂ ಭಾಗವಹಿಸಿದ್ದರು.</p>.<p>ಉಪವಿಭಾಗಾಧಿಕಾರಿ ಅಜೇಯ್ ಅವರಿಗೆ ಮನವಿ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ‘ಅರಿವು’ ಶೈಕ್ಷಣಿಕ ಸಾಲದ ಯೋಜನೆಯ ಅನುದಾನ ಬಿಡುಗಡೆ ಮಾಡುವಂತೆ ಆಗ್ರಹಿಸಿ ಕಾಂಗ್ರೆಸ್ ಅಲ್ಪಸಂಖ್ಯಾತರ ಜಿಲ್ಲಾ ಘಟಕದ ನೇತೃತ್ವದಲ್ಲಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ಅಲ್ಪಸಂಖ್ಯಾತರಸಮುದಾಯದ ಶೈಕ್ಷಣಿಕ ಪ್ರಗತಿಗೆ ನೀಡುತ್ತಿದ್ದ ಅರಿವು ಸಾಲ ಯೋಜನೆಯ ಅನುದಾನದಲ್ಲಿ ಸಾಕಷ್ಟು ಕಡಿತ ಮಾಡಲಾಗಿದೆ. ಕಡಿತ ಮಾಡಿರುವ ಅನುದಾನವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಅತೀಕ್ ಅಹಮದ್<br />ಆಗ್ರಹಿಸಿದರು.</p>.<p>ಕಳೆದ ಎರಡು ವರ್ಷಗಳಿಂದಲೂ ಅನುದಾನ ಕಡಿಮೆ ಮಾಡಲಾಗುತ್ತಿದೆ. 2018-19ರಲ್ಲಿ ₹150 ಕೋಟಿ, 2019-20ರಲ್ಲಿ ₹160 ಕೋಟಿ ನೀಡಲಾಗಿದೆ. ಆದರೆ 2020-21ರಲ್ಲಿ ಕೇವಲ ₹30 ಕೋಟಿ ಕೊಡಲಾಗಿದೆ. ಇದರಿಂದ ಈ ಹಿಂದಿನ ಸಾಲುಗಳಲ್ಲಿ ಕಲಿಯುತ್ತಿರುವ ಮಕ್ಕಳ ಶುಲ್ಕ ಕಟ್ಟಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು.</p>.<p>ಕಳೆದ ವರ್ಷದ ಬಜೆಟ್ನಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಕ್ಕೆ ₹227 ಕೋಟಿ ಅನುದಾನ ನೀಡ<br />ಲಾಗಿದ್ದು, 2020-21ರಲ್ಲಿ ₹71 ಕೋಟಿ ಕೊಡಲಾಗಿದೆ. ಹೊಸದಾಗಿ ಶೈಕ್ಷಣಿಕ ಸಾಲಕ್ಕೆ ಅರಿವು ಯೋಜನೆಯಡಿ ಅರ್ಜಿ ಸಲ್ಲಿಸಿದವರಿಗೆ ಸಾಲ ಸೌಲಭ್ಯ ಮರೀಚಿಕೆಯಾಗಿದೆ. ನವೀಕರಣದ ಅರ್ಜಿಗಳಿಗೆ ಪೂರ್ಣ ಪ್ರಮಾಣದ ಸಾಲಸೌಲಭ್ಯ ಒದಗಿಸಲು ಬಿಡುಗಡೆಯಾಗಿರುವ ಹಣ ಸಾಲದಾಗಿದೆ ಎಂದರು.</p>.<p>ಅಲ್ಯಸಂಖ್ಯಾತರ ಕಲ್ಯಾಣ ಇಲಾಖೆಗೂ ವರ್ಷದಿಂದ ವರ್ಷಕ್ಕೆ ನೀಡುತ್ತಿದ್ದ ಅನುದಾನ ಕಡಿತ ಮಾಡ<br />ಲಾಗಿದೆ. 2019–20ರಲ್ಲಿ ₹2012 ಕೋಟಿ ಇದ್ದ ಅನುದಾನ, 2020–21ರಲ್ಲಿ ₹812 ಕೋಟಿಗೆ ಇಳಿಕೆ ಮಾಡಲಾಗಿದೆ. ಇದು ಅಲ್ಪಸಂಖ್ಯಾತರನ್ನು ಅಭಿವೃದ್ಧಿಯಿಂದ ವಂಚಿಸುವ ಹುನ್ನಾರವಾಗಿದೆ ಎಂದು ದೂರಿದರು.</p>.<p>ರಾಜ್ಯ, ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದ್ದು, ಅಲ್ಪಸಂಖ್ಯಾತರ ಅಭಿವೃದ್ಧಿ ಕಡೆಗಣಿಸಿವೆ. ಕೋವಿಡ್–19 ಮಹಾಮಾರಿ ನೆಪದಲ್ಲಿ ಅಲ್ಪಸಂಖ್ಯಾತರ ಕಲ್ಯಾಣಕ್ಕೆ ನೀಡುತ್ತಿದ್ದ ಅನುದಾನ ಕಡಿತಗೊಳಿಸಿ, ಅನ್ಯಾಯ ಮಾಡಲಾಗಿದೆ. ಸಮರ್ಪಕವಾಗಿ ಅನುದಾನ ಬಿಡುಗಡೆ ಮಾಡಬೇಕು. ಇಲ್ಲವಾದರೆ ರಾಜ್ಯದಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದುಎಚ್ಚರಿಸಿದರು.</p>.<p>ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಸಂಜೀವ್ ಕುಮಾರ್, ಮುಬಾರಕ್ ಪಾಷ, ನೀಷಾ, ಥಾಮ್ಸನ್, ಜಾಜ್, ವಿಜಯಕುಮಾರ್, ದಾದಾಪೀರ್, ಪ್ರಕಾಶ್, ಶಿವಾಜಿ, ಅಬ್ದುಲ್ ರಹೀಂ ಭಾಗವಹಿಸಿದ್ದರು.</p>.<p>ಉಪವಿಭಾಗಾಧಿಕಾರಿ ಅಜೇಯ್ ಅವರಿಗೆ ಮನವಿ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>