<p><strong>ಪಾವಗಡ:</strong> ಹಿಂದಿ ದಿವಸ್ ಆಚರಣೆ, ಹಿಂದಿ ಭಾಷಾ ಹೇರಿಕೆ ಖಂಡಿಸಿ ತಹಶೀಲ್ದಾರ್ ಕಚೇರಿ ಮುಂಭಾಗ ಮಂಗಳವಾರ ಜೆಡಿಎಸ್ ತಾಲ್ಲೂಕು ಘಟಕದ ಪದಾಧಿಕಾರಿಗಳು, ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.</p>.<p>ಯಾವುದೇ ಭಾಷೆಯನ್ನು ಬಲವಂತವಾಗಿ ಬಳಸುವಂತೆ, ಕಲಿಯುವಂತೆ ಒತ್ತಡ ಹೇರುವುದು ಖಂಡನೀಯ. ರಾಷ್ಟ್ರೀಯ ಪಕ್ಷಗಳು ಇಂತಹ ದೌರ್ಜನ್ಯವನ್ನು ಎಸಗುತ್ತವೆ. ಆದರೆ ಪ್ರಾದೇಶಿಕ ಪಕ್ಷಗಳು ಸ್ಥಳೀಯ ಭಾಷೆಗೆ ಒತ್ತು ನೀಡಿ ಉಳಿಸಲು ಶ್ರಮಿಸುತ್ತವೆ. ಈ ನಿಟ್ಟಿನಲ್ಲಿ ಜೆಡಿಎಸ್ ಹಿಂದಿ ಹೇರಿಕೆಯನ್ನು ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ ನಡೆಸುತ್ತಿದೆ ಎಂದು ತಾಲ್ಲೂಕು ಘಟಕದ ಅಧ್ಯಕ್ಷ ಬಲರಾಮರೆಡ್ಡಿ ತಿಳಿಸಿದರು.</p>.<p>ಎಲ್ಲ ಭಾಷೆಗಳನ್ನು ಗೌರವಿಸಬೇಕು. ಆದರೆ, ಯಾವುದೇ ಒಂದು ಭಾಷೆಯ ಹೇರಿಕೆ ಸಲ್ಲದು. ಹಿಂದಿ, ಇಂಗ್ಲಿಷ್ ಸೇರಿದಂತೆ ಎಲ್ಲ ಭಾಷೆ<br />ಜ್ಞಾನ ಇರಬೇಕು. ಆದರೆ ಕಲಿಯಲೇ ಬೇಕು ಎಂಬ ಒತ್ತಡ ಸರಿಯಲ್ಲ. ಮಾತೃ ಭಾಷೆ, ಪ್ರಾದೇಶಿಕ ಭಾಷೆಗಳ ಬದಲಿಗೆ ಇಂತಹದ್ದೇ ಭಾಷೆ ಬಳಸಬೇಕು ಎನ್ನುವುದು ನಿರಂಕುಶವಾದಿಗಳು ಜನರ ಮೇಲೆ ಎಸಗುವ ದೌರ್ಜನ್ಯ. ಇಂತಹ ಒತ್ತಡಗಳಿಗೆ ಕನ್ನಡಿಗರು ಮಣಿಯುವುದಿಲ್ಲ ಎಂದು ಪ್ರತಿಭಟನನಿರತರು ಎಚ್ಚರಿಸಿದರು.</p>.<p>ಗೌರವಾಧ್ಯಕ್ಷ ರಾಜಶೇಖರ್, ಎನ್ಎ ಈರಣ್ಣ, ಪುರಸಭೆ ಮಾಜಿ ಸದಸ್ಯ ಜಿ.ಎ. ವೆಂಕಟೇಶ್, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಯೂನುಸ್, ಗಂಗಾಧರ ನಾಯ್ಡು, ಚಾಂದ್, ಬಾಬಾ, ಮುಖಂಡರಾದ ಕೆ.ಟಿ. ನಾಗರಾಜ್, ಕಾವಲಗೆರೆ ರಾಮಾಂಜಿ, ಮಣಿ, ಲೋಕೇಶ್, ಶಿವಕುಮಾರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾವಗಡ:</strong> ಹಿಂದಿ ದಿವಸ್ ಆಚರಣೆ, ಹಿಂದಿ ಭಾಷಾ ಹೇರಿಕೆ ಖಂಡಿಸಿ ತಹಶೀಲ್ದಾರ್ ಕಚೇರಿ ಮುಂಭಾಗ ಮಂಗಳವಾರ ಜೆಡಿಎಸ್ ತಾಲ್ಲೂಕು ಘಟಕದ ಪದಾಧಿಕಾರಿಗಳು, ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.</p>.<p>ಯಾವುದೇ ಭಾಷೆಯನ್ನು ಬಲವಂತವಾಗಿ ಬಳಸುವಂತೆ, ಕಲಿಯುವಂತೆ ಒತ್ತಡ ಹೇರುವುದು ಖಂಡನೀಯ. ರಾಷ್ಟ್ರೀಯ ಪಕ್ಷಗಳು ಇಂತಹ ದೌರ್ಜನ್ಯವನ್ನು ಎಸಗುತ್ತವೆ. ಆದರೆ ಪ್ರಾದೇಶಿಕ ಪಕ್ಷಗಳು ಸ್ಥಳೀಯ ಭಾಷೆಗೆ ಒತ್ತು ನೀಡಿ ಉಳಿಸಲು ಶ್ರಮಿಸುತ್ತವೆ. ಈ ನಿಟ್ಟಿನಲ್ಲಿ ಜೆಡಿಎಸ್ ಹಿಂದಿ ಹೇರಿಕೆಯನ್ನು ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ ನಡೆಸುತ್ತಿದೆ ಎಂದು ತಾಲ್ಲೂಕು ಘಟಕದ ಅಧ್ಯಕ್ಷ ಬಲರಾಮರೆಡ್ಡಿ ತಿಳಿಸಿದರು.</p>.<p>ಎಲ್ಲ ಭಾಷೆಗಳನ್ನು ಗೌರವಿಸಬೇಕು. ಆದರೆ, ಯಾವುದೇ ಒಂದು ಭಾಷೆಯ ಹೇರಿಕೆ ಸಲ್ಲದು. ಹಿಂದಿ, ಇಂಗ್ಲಿಷ್ ಸೇರಿದಂತೆ ಎಲ್ಲ ಭಾಷೆ<br />ಜ್ಞಾನ ಇರಬೇಕು. ಆದರೆ ಕಲಿಯಲೇ ಬೇಕು ಎಂಬ ಒತ್ತಡ ಸರಿಯಲ್ಲ. ಮಾತೃ ಭಾಷೆ, ಪ್ರಾದೇಶಿಕ ಭಾಷೆಗಳ ಬದಲಿಗೆ ಇಂತಹದ್ದೇ ಭಾಷೆ ಬಳಸಬೇಕು ಎನ್ನುವುದು ನಿರಂಕುಶವಾದಿಗಳು ಜನರ ಮೇಲೆ ಎಸಗುವ ದೌರ್ಜನ್ಯ. ಇಂತಹ ಒತ್ತಡಗಳಿಗೆ ಕನ್ನಡಿಗರು ಮಣಿಯುವುದಿಲ್ಲ ಎಂದು ಪ್ರತಿಭಟನನಿರತರು ಎಚ್ಚರಿಸಿದರು.</p>.<p>ಗೌರವಾಧ್ಯಕ್ಷ ರಾಜಶೇಖರ್, ಎನ್ಎ ಈರಣ್ಣ, ಪುರಸಭೆ ಮಾಜಿ ಸದಸ್ಯ ಜಿ.ಎ. ವೆಂಕಟೇಶ್, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಯೂನುಸ್, ಗಂಗಾಧರ ನಾಯ್ಡು, ಚಾಂದ್, ಬಾಬಾ, ಮುಖಂಡರಾದ ಕೆ.ಟಿ. ನಾಗರಾಜ್, ಕಾವಲಗೆರೆ ರಾಮಾಂಜಿ, ಮಣಿ, ಲೋಕೇಶ್, ಶಿವಕುಮಾರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>