<p><strong>ತೋವಿನಕೆರೆ:</strong> ಜನರಿಗೆ, ಪ್ರಕೃತಿಗೆ ವಿಷ ಉಣಿಸುವುದು ಹೆಚ್ಚಾಗುತ್ತಿದೆ. ಇದನ್ನು ತಡೆಯಲು ರೈತನಿಂದ ಮಾತ್ರ ಸಾಧ್ಯ ಎಂದು ಸಾಣೇಹಳ್ಳಿ ಪಂಡಿತ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದರು.</p>.<p>ತೋವಿನಕೆರೆ ಸಮೀಪದ ಹೊಲತಾಳು ಗ್ರಾಮದ ಅಬೇತೋಸಂ ನಲ್ಲಿ ಭಾನುವಾರ ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಏರ್ಪಡಿಸಿದ್ದ ಸಾವಯವ ಬೇಸಾಯದ ಬದುಕು ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.</p>.<p>ಮನುಷ್ಯ ಹೊರಗಡೆ ಸುಂದರವಾಗಿ ಕಾಣುತ್ತಿದು ಒಳಗಡೆ ಮಲಿನವಾಗುತ್ತಿದ್ದಾನೆ. ಪ್ರತಿ ದಿನ ಟನ್ಗಟ್ಟಲೆ ವಿಷವನ್ನು ನೆಲಕ್ಕೆ ಹಾಕುತ್ತಿದ್ದು ಅದರಲ್ಲಿ ಉತ್ಪತ್ತಿಯಾಗುವ ಆಹಾರವನ್ನು ಸೇವಿಸುತ್ತಿದ್ದೇವೆ. ವಿಷ ಸೇವಿಸುವ ನಾವು ನಮ್ಮ ಬದುಕಿನಲ್ಲಿ ವಿಷವನ್ನೇ ಹೊರ ಹಾಕಬೇಕಾದ ಅನಿವಾರ್ಯ ಸ್ಥಿತಿ ಇದೆ ಎಂದು ವಿಷಾದ ವ್ಯಕ್ತಪಡಿಸಿದರು.</p>.<p>ಅಕಾಡೆಮಿ ಅಧ್ಯಕ್ಷ ಮುಕಂದರಾಜ್ ಎಲ್.ಎನ್ ಮಾತನಾಡಿ, ಸಾಹಿತ್ಯ ಹಾಗೂ ಕೃಷಿ ಪೂರಕವಾಗಿ ಕೆಲಸ ಮಾಡಬೇಕು. ಕೃಷಿ ಇಲ್ಲದೆ ಸಾಹಿತ್ಯ ಉಳಿಯಲು ಸಾಧ್ಯವೇ ಇಲ್ಲ ಎಂದರು.</p>.<p>ಕರ್ನಾಟಕ ಸಾಹಿತ್ಯ ಅಕಾಡೆಮಿ ಮುಂದಿನ ದಿನಗಳಲ್ಲಿ ಕೃಷಿಗೆ ಒತ್ತುಕೊಟ್ಟು ಕೆಲಸ ಮಾಡುತ್ತದೆ. ಪ್ರಥಮ ಬಾರಿಗೆ ಸಾಹಿತ್ಯ ಅಕಾಡೆಮಿ ವಾರ್ಷಿಕ ಪ್ರಶಸ್ತಿಗಳನ್ನು ಡಿಸೆಂಬರ್ 5 ರಂದು ಗುಬ್ಬಿಯಲ್ಲಿ ಪ್ರಧಾನ ಮಾಡಲಾಗುತ್ತದೆ ಎಂದು ಪ್ರಕಟಿಸಿದರು.</p>.<p>ಜೆ.ಸಿ.ಪುರದ ಶಿವನಂಜಪ್ಪ ಬಾಳೆಕಾಯಿ, ಧಾರವಾಡದ ಚನ್ನಪ್ಪ ಅಂಗಡಿ, ಪಾಲಕ್ಷಯ್ಯ, ಮಲ್ಲಿಕಾ ಬಸವರಾಜು, ಅಕ್ಷಯ್ಯ ಕಲ್ಪದ ಮಂಜುನಾಥ, ಯರಬಳ್ಳಿ ಅರುಣಾ, ಪಾತಗಾನಹಳ್ಳಿ ನಟರಾಜು, ಲಕ್ಷ್ಮಿದೇವಮ್ಮ ಮಾತನಾಡಿದರು.</p>.<p>ಅಬೇತೋಸಂ ಮಾಲಿಕ ಡಾ.ಸಿದ್ಧಗಂಗಯ್ಯ ಹೊಲತಾಳು ಒಣಭೂಮಿ ರೈತರ ಸಮಸ್ಯೆಗಳ ಬಗ್ಗೆ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತೋವಿನಕೆರೆ:</strong> ಜನರಿಗೆ, ಪ್ರಕೃತಿಗೆ ವಿಷ ಉಣಿಸುವುದು ಹೆಚ್ಚಾಗುತ್ತಿದೆ. ಇದನ್ನು ತಡೆಯಲು ರೈತನಿಂದ ಮಾತ್ರ ಸಾಧ್ಯ ಎಂದು ಸಾಣೇಹಳ್ಳಿ ಪಂಡಿತ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದರು.</p>.<p>ತೋವಿನಕೆರೆ ಸಮೀಪದ ಹೊಲತಾಳು ಗ್ರಾಮದ ಅಬೇತೋಸಂ ನಲ್ಲಿ ಭಾನುವಾರ ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಏರ್ಪಡಿಸಿದ್ದ ಸಾವಯವ ಬೇಸಾಯದ ಬದುಕು ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.</p>.<p>ಮನುಷ್ಯ ಹೊರಗಡೆ ಸುಂದರವಾಗಿ ಕಾಣುತ್ತಿದು ಒಳಗಡೆ ಮಲಿನವಾಗುತ್ತಿದ್ದಾನೆ. ಪ್ರತಿ ದಿನ ಟನ್ಗಟ್ಟಲೆ ವಿಷವನ್ನು ನೆಲಕ್ಕೆ ಹಾಕುತ್ತಿದ್ದು ಅದರಲ್ಲಿ ಉತ್ಪತ್ತಿಯಾಗುವ ಆಹಾರವನ್ನು ಸೇವಿಸುತ್ತಿದ್ದೇವೆ. ವಿಷ ಸೇವಿಸುವ ನಾವು ನಮ್ಮ ಬದುಕಿನಲ್ಲಿ ವಿಷವನ್ನೇ ಹೊರ ಹಾಕಬೇಕಾದ ಅನಿವಾರ್ಯ ಸ್ಥಿತಿ ಇದೆ ಎಂದು ವಿಷಾದ ವ್ಯಕ್ತಪಡಿಸಿದರು.</p>.<p>ಅಕಾಡೆಮಿ ಅಧ್ಯಕ್ಷ ಮುಕಂದರಾಜ್ ಎಲ್.ಎನ್ ಮಾತನಾಡಿ, ಸಾಹಿತ್ಯ ಹಾಗೂ ಕೃಷಿ ಪೂರಕವಾಗಿ ಕೆಲಸ ಮಾಡಬೇಕು. ಕೃಷಿ ಇಲ್ಲದೆ ಸಾಹಿತ್ಯ ಉಳಿಯಲು ಸಾಧ್ಯವೇ ಇಲ್ಲ ಎಂದರು.</p>.<p>ಕರ್ನಾಟಕ ಸಾಹಿತ್ಯ ಅಕಾಡೆಮಿ ಮುಂದಿನ ದಿನಗಳಲ್ಲಿ ಕೃಷಿಗೆ ಒತ್ತುಕೊಟ್ಟು ಕೆಲಸ ಮಾಡುತ್ತದೆ. ಪ್ರಥಮ ಬಾರಿಗೆ ಸಾಹಿತ್ಯ ಅಕಾಡೆಮಿ ವಾರ್ಷಿಕ ಪ್ರಶಸ್ತಿಗಳನ್ನು ಡಿಸೆಂಬರ್ 5 ರಂದು ಗುಬ್ಬಿಯಲ್ಲಿ ಪ್ರಧಾನ ಮಾಡಲಾಗುತ್ತದೆ ಎಂದು ಪ್ರಕಟಿಸಿದರು.</p>.<p>ಜೆ.ಸಿ.ಪುರದ ಶಿವನಂಜಪ್ಪ ಬಾಳೆಕಾಯಿ, ಧಾರವಾಡದ ಚನ್ನಪ್ಪ ಅಂಗಡಿ, ಪಾಲಕ್ಷಯ್ಯ, ಮಲ್ಲಿಕಾ ಬಸವರಾಜು, ಅಕ್ಷಯ್ಯ ಕಲ್ಪದ ಮಂಜುನಾಥ, ಯರಬಳ್ಳಿ ಅರುಣಾ, ಪಾತಗಾನಹಳ್ಳಿ ನಟರಾಜು, ಲಕ್ಷ್ಮಿದೇವಮ್ಮ ಮಾತನಾಡಿದರು.</p>.<p>ಅಬೇತೋಸಂ ಮಾಲಿಕ ಡಾ.ಸಿದ್ಧಗಂಗಯ್ಯ ಹೊಲತಾಳು ಒಣಭೂಮಿ ರೈತರ ಸಮಸ್ಯೆಗಳ ಬಗ್ಗೆ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>