<p><strong>ತುಮಕೂರು:</strong> ನಗರದ ಸಿದ್ಧಾರ್ಥ ಎಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ಹಮ್ಮಿಕೊಂಡಿದ್ದ 2 ದಿನಗಳ ಕಲೋತ್ಸವಕ್ಕೆ ತೆರೆಬಿತ್ತು.</p>.<p>ಕಲೋತ್ಸವದಲ್ಲಿ ರಾಜ್ಯದ ವಿವಿಧ ಎಂಜಿನಿಯರಿಂಗ್ ಕಾಲೇಜುಗಳ 10 ತಂಡಗಳು 35 ಸ್ಪರ್ಧೆಗಳಲ್ಲಿ ಭಾಗವಹಿಸಿದ್ದವು. ಸಿದ್ಧಾರ್ಥ ಎಂಜಿನಿಯರಿಂಗ್ ಕಾಲೇಜಿನ ‘ಸಂಸ್ಕೃತಿ’ ತಂಡ ಮೊದಲ ಸ್ಥಾನ ಪಡೆದು ಚಾಂಪಿಯನ್ ಟ್ರೋಫಿ ತನ್ನದಾಗಿಸಿಕೊಂಡಿತು. ವಿದ್ಯಾರ್ಥಿಗಳ ಕಲಾ ಪ್ರದರ್ಶನಗಳು ನೆರೆದ ಪ್ರೇಕ್ಷಕರ ಮನ ತಣಿಸಿದವು.</p>.<p>ಸಂಗೀತ, ನಾಟಕ, ಚಿತ್ರಕಲೆ, ರಂಗೋಲಿ, ಗಾಯನ, ಮಿಮಿಕ್ರಿ, ಫ್ಯಾಶನ್ ಶೊ, ನೃತ್ಯ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಕಾಲೇಜಿನ ಪ್ರಾಧ್ಯಾಪಕಿಯರು ನಡೆಸಿದ ವಿವಿಧತೆಯಲ್ಲಿ ಏಕತೆಯನ್ನು ಪ್ರತಿಬಿಂಬಿಸುವ ಫ್ಯಾಷನ್ ಶೊ ನೋಡುಗರ ಗಮನ ಸೆಳೆಯಿತು.</p>.<p>ಸಮಾರೋಪ ಸಮಾರಂಭದಲ್ಲಿ ಗಾಯಕ ಅಶ್ವಿನ್ ಶರ್ಮಾ, ಸಾಹೇ ವಿ.ವಿ ಕುಲಪತಿ ಕೆ.ಬಿ.ಲಿಂಗೇಗೌಡ, ಪ್ರಾಂಶುಪಾಲ ಎಂ.ಎಸ್.ರವಿಪ್ರಕಾಶ್, ರಿಜಿಸ್ಟ್ರಾರ್ ಎಂ.ಝಡ್.ಕುರಿಯನ್, ಡೀನ್ ರೇಣುಕಾಲತಾ, ವಿದ್ಯಾರ್ಥಿ ಸಂಘದ ಪ್ರತಿನಿಧಿಗಳಾದ ವಿಷ್ಣು ನಾಯಕ, ಕಾರ್ತಿಕ್, ಲಿಖಿತ್, ಮೇಘನ್ಗೌಡ, ಯಶವಂತ್, ವೈಷ್ಣವಿ, ಚೈತ್ರಾ ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ನಗರದ ಸಿದ್ಧಾರ್ಥ ಎಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ಹಮ್ಮಿಕೊಂಡಿದ್ದ 2 ದಿನಗಳ ಕಲೋತ್ಸವಕ್ಕೆ ತೆರೆಬಿತ್ತು.</p>.<p>ಕಲೋತ್ಸವದಲ್ಲಿ ರಾಜ್ಯದ ವಿವಿಧ ಎಂಜಿನಿಯರಿಂಗ್ ಕಾಲೇಜುಗಳ 10 ತಂಡಗಳು 35 ಸ್ಪರ್ಧೆಗಳಲ್ಲಿ ಭಾಗವಹಿಸಿದ್ದವು. ಸಿದ್ಧಾರ್ಥ ಎಂಜಿನಿಯರಿಂಗ್ ಕಾಲೇಜಿನ ‘ಸಂಸ್ಕೃತಿ’ ತಂಡ ಮೊದಲ ಸ್ಥಾನ ಪಡೆದು ಚಾಂಪಿಯನ್ ಟ್ರೋಫಿ ತನ್ನದಾಗಿಸಿಕೊಂಡಿತು. ವಿದ್ಯಾರ್ಥಿಗಳ ಕಲಾ ಪ್ರದರ್ಶನಗಳು ನೆರೆದ ಪ್ರೇಕ್ಷಕರ ಮನ ತಣಿಸಿದವು.</p>.<p>ಸಂಗೀತ, ನಾಟಕ, ಚಿತ್ರಕಲೆ, ರಂಗೋಲಿ, ಗಾಯನ, ಮಿಮಿಕ್ರಿ, ಫ್ಯಾಶನ್ ಶೊ, ನೃತ್ಯ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಕಾಲೇಜಿನ ಪ್ರಾಧ್ಯಾಪಕಿಯರು ನಡೆಸಿದ ವಿವಿಧತೆಯಲ್ಲಿ ಏಕತೆಯನ್ನು ಪ್ರತಿಬಿಂಬಿಸುವ ಫ್ಯಾಷನ್ ಶೊ ನೋಡುಗರ ಗಮನ ಸೆಳೆಯಿತು.</p>.<p>ಸಮಾರೋಪ ಸಮಾರಂಭದಲ್ಲಿ ಗಾಯಕ ಅಶ್ವಿನ್ ಶರ್ಮಾ, ಸಾಹೇ ವಿ.ವಿ ಕುಲಪತಿ ಕೆ.ಬಿ.ಲಿಂಗೇಗೌಡ, ಪ್ರಾಂಶುಪಾಲ ಎಂ.ಎಸ್.ರವಿಪ್ರಕಾಶ್, ರಿಜಿಸ್ಟ್ರಾರ್ ಎಂ.ಝಡ್.ಕುರಿಯನ್, ಡೀನ್ ರೇಣುಕಾಲತಾ, ವಿದ್ಯಾರ್ಥಿ ಸಂಘದ ಪ್ರತಿನಿಧಿಗಳಾದ ವಿಷ್ಣು ನಾಯಕ, ಕಾರ್ತಿಕ್, ಲಿಖಿತ್, ಮೇಘನ್ಗೌಡ, ಯಶವಂತ್, ವೈಷ್ಣವಿ, ಚೈತ್ರಾ ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>