ಕೋವಿಡ್ ಹಿನ್ನಲೆಯಲ್ಲಿ ಆಮ್ಲಜನಕ ಸಿಲಿಂಡರ್ಗಳನ್ನು ರೋಗಿಗಳ ಶುಶ್ರೂಷೆಗಾಗಿ ಮಾತ್ರ ಬಳಕೆ ಮಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದರೂ, ದುಬಾರಿ ಬೆಲೆಗೆ ಮಾರಾಟ ಮಾಡುತ್ತಿದ್ದ ಪಟ್ಟಣದ ಎಸ್ಎಲ್ವಿ ಟ್ರೇಡರ್ ಮಾಲೀಕ ನರಸಿಂಹಮೂರ್ತಿ, ಮತ್ತು ಉಸ್ತುವಾರಿ ನೋಡಿಕೊಳ್ಳುತ್ತಿದ್ದ ವಸಂತ್ ಅವರ ವಿರುದ್ಧ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ 2005ರ ಪ್ರಕರಣ ದಾಖಲಿಸಲಾಗಿದೆ ಎಂದು ಸಿಪಿಐ ರಾಜು ತಿಳಿಸಿದ್ದಾರೆ.