<p><strong>ತುಮಕೂರು:</strong> ನಗರದಲ್ಲಿ ಕೋಳಿ ಮಾಂಸ ಮತ್ತು ಇತರ ಮಾಂಸದ ಅಂಗಡಿಗಳು ಹೆಚ್ಚಿವೆ. ಈ ಅಂಗಡಿಗಳವರು ತ್ಯಾಜ್ಯವನ್ನು ಸಮರ್ಪಕವಾಗಿ ನಿರ್ವಹಣೆ ಮಾಡುತ್ತಿಲ್ಲ ಎನ್ನುವ ದೂರಿನ ಹಿನ್ನೆಲೆಯಲ್ಲಿ ಪಾಲಿಕೆ ಆಯುಕ್ತ ಟಿ.ಭೂಬಾಲನ್ ಅವರು ಮಂಗಳವಾರ ಈ ಕೋಳಿ ಅಂಗಡಿ ಮಾಲೀಕರ ಸಂಘ ಮತ್ತು ಮಾಂಸದ ಅಂಗಡಿ ಮಾಲೀಕರ ಸಂಘದ ಪದಾಧಿಕಾರಿಗಳ ಜತೆ ಸಭೆ ನಡೆಸಿದರು.</p>.<p>ಈ ಎರಡು ಸಂಘದ ತಲಾ ಐದು ಮಂದಿ ಪದಾಧಿಕಾರಿಗಳು, ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ನಯಾಜ್, ಪಾಲಿಕೆ ಸದಸ್ಯೆ ಫರೀದಾ ಬೇಗಂ, ಆರೋಗ್ಯಾಧಿಕಾರಿ ಡಾ.ನಾಗೇಶ್ ಕುಮಾರ್, ಪರಿಸರ ಹಾಗೂ ಆರೋಗ್ಯ ಇಲಾಖೆಯ ಇನ್ಸ್ಪೆಕ್ಟರ್ಗಳು ಸಭೆಯಲ್ಲಿ ಇದ್ದರು.</p>.<p>‘ಈ ಹಿಂದೆ ನಮ್ಮ ಸಂಘಗಳಲ್ಲಿ 60ರಿಂದ 70 ಮಂದಿ ಸದಸ್ಯತ್ವ ಪಡೆದಿದ್ದರು. ಅವರು ಮಾತ್ರ ವ್ಯಾಪಾರ ಮಾಡುತ್ತಿದ್ದರು. ಈಗ ಪಾಲಿಕೆಯೇ ಗುರುತಿಸಿರುವಂತೆ 136 ಮಂದಿ ಮಾಂಸದ ಉದ್ದಿಮೆ ನಡೆಸುತ್ತಿದ್ದಾರೆ’ ಎಂದು ಪದಾಧಿಕಾರಿಗಳು ತಿಳಿಸಿದರು.</p>.<p>‘ನಮ್ಮ ಸಂಘದ ಸದಸ್ಯತ್ವ ಪಡೆದವರಿಗೆ ಮಾತ್ರ ಉದ್ದಿಮೆ ಪರವಾನಗಿಯನ್ನು ನೀವು ನೀಡಿದರೆ ಸ್ವಚ್ಛತೆ ನಿರ್ವಹಣೆ ಸಾಧ್ಯ. ಸ್ವಚ್ಛತೆಯ ನಿರ್ವಹಣೆಯ ಬಗ್ಗೆ ನಾವು ಪಾಲಿಕೆಗೆ ಜವಾಬ್ದಾರರಾಗಿರುತ್ತೇವೆ’ ಎಂದು ಪದಾಧಿಕಾರಿಗಳು ಅಧಿಕಾರಿಗಳಿಗೆ ತಿಳಿಸಿದರು.</p>.<p>ಅಂತಿಮವಾಗಿ ಕೋಳಿ ಮಾಂಸ ಮತ್ತು ಇತರ ಮಾಂಸದ ಮಾರಾಟಗಾರರ ಸಂಘಗಳ ಸದಸ್ಯತ್ವ ಪಡೆದವರಿಗೆ ಮಾತ್ರ ಪಾಲಿಕೆಯಿಂದ ಉದ್ದಿಮೆ ಪರವಾನಗಿ ನೀಡುವ ಬಗ್ಗೆ ತೀರ್ಮಾನಕೈಗೊಳ್ಳಲಾಯಿತು.</p>.<p><strong>ಅಜ್ಜಗೊಂಡನಹಳ್ಳಿ ಘಟಕಕ್ಕೆ ತ್ಯಾಜ್ಯ ನೀಡಿ</strong><br />ಮಾಂಸದ ಅಂಗಡಿಗಳವರು ತ್ಯಾಜ್ಯವನ್ನು ಅಜ್ಜಗೊಂಡನಹಳ್ಳಿ ಕಸ ವಿಲೇವಾರಿ ಘಟಕಕ್ಕೆ ತೆಗೆದುಕೊಂಡು ಹೋಗಿ ನೀಡಬೇಕು. ಇದಕ್ಕಾಗಿ ಅವರು ಎರಡು ವಾಹನಗಳ ವ್ಯವಸ್ಥೆ ಮಾಡಿಕೊಂಡಿದ್ದಾರೆ. ತ್ಯಾಜ್ಯವನ್ನು ಸರಿಯಾಗಿ ನಿರ್ವಹಣೆ ಮಾಡದಿದ್ದರೆ ಅಂತಹವರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಪಾಲಿಕೆ ಆರೋಗ್ಯಾಧಿಕಾರಿ ಡಾ.ನಾಗೇಶ್ ಕುಮಾರ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ನಗರದಲ್ಲಿ ಕೋಳಿ ಮಾಂಸ ಮತ್ತು ಇತರ ಮಾಂಸದ ಅಂಗಡಿಗಳು ಹೆಚ್ಚಿವೆ. ಈ ಅಂಗಡಿಗಳವರು ತ್ಯಾಜ್ಯವನ್ನು ಸಮರ್ಪಕವಾಗಿ ನಿರ್ವಹಣೆ ಮಾಡುತ್ತಿಲ್ಲ ಎನ್ನುವ ದೂರಿನ ಹಿನ್ನೆಲೆಯಲ್ಲಿ ಪಾಲಿಕೆ ಆಯುಕ್ತ ಟಿ.ಭೂಬಾಲನ್ ಅವರು ಮಂಗಳವಾರ ಈ ಕೋಳಿ ಅಂಗಡಿ ಮಾಲೀಕರ ಸಂಘ ಮತ್ತು ಮಾಂಸದ ಅಂಗಡಿ ಮಾಲೀಕರ ಸಂಘದ ಪದಾಧಿಕಾರಿಗಳ ಜತೆ ಸಭೆ ನಡೆಸಿದರು.</p>.<p>ಈ ಎರಡು ಸಂಘದ ತಲಾ ಐದು ಮಂದಿ ಪದಾಧಿಕಾರಿಗಳು, ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ನಯಾಜ್, ಪಾಲಿಕೆ ಸದಸ್ಯೆ ಫರೀದಾ ಬೇಗಂ, ಆರೋಗ್ಯಾಧಿಕಾರಿ ಡಾ.ನಾಗೇಶ್ ಕುಮಾರ್, ಪರಿಸರ ಹಾಗೂ ಆರೋಗ್ಯ ಇಲಾಖೆಯ ಇನ್ಸ್ಪೆಕ್ಟರ್ಗಳು ಸಭೆಯಲ್ಲಿ ಇದ್ದರು.</p>.<p>‘ಈ ಹಿಂದೆ ನಮ್ಮ ಸಂಘಗಳಲ್ಲಿ 60ರಿಂದ 70 ಮಂದಿ ಸದಸ್ಯತ್ವ ಪಡೆದಿದ್ದರು. ಅವರು ಮಾತ್ರ ವ್ಯಾಪಾರ ಮಾಡುತ್ತಿದ್ದರು. ಈಗ ಪಾಲಿಕೆಯೇ ಗುರುತಿಸಿರುವಂತೆ 136 ಮಂದಿ ಮಾಂಸದ ಉದ್ದಿಮೆ ನಡೆಸುತ್ತಿದ್ದಾರೆ’ ಎಂದು ಪದಾಧಿಕಾರಿಗಳು ತಿಳಿಸಿದರು.</p>.<p>‘ನಮ್ಮ ಸಂಘದ ಸದಸ್ಯತ್ವ ಪಡೆದವರಿಗೆ ಮಾತ್ರ ಉದ್ದಿಮೆ ಪರವಾನಗಿಯನ್ನು ನೀವು ನೀಡಿದರೆ ಸ್ವಚ್ಛತೆ ನಿರ್ವಹಣೆ ಸಾಧ್ಯ. ಸ್ವಚ್ಛತೆಯ ನಿರ್ವಹಣೆಯ ಬಗ್ಗೆ ನಾವು ಪಾಲಿಕೆಗೆ ಜವಾಬ್ದಾರರಾಗಿರುತ್ತೇವೆ’ ಎಂದು ಪದಾಧಿಕಾರಿಗಳು ಅಧಿಕಾರಿಗಳಿಗೆ ತಿಳಿಸಿದರು.</p>.<p>ಅಂತಿಮವಾಗಿ ಕೋಳಿ ಮಾಂಸ ಮತ್ತು ಇತರ ಮಾಂಸದ ಮಾರಾಟಗಾರರ ಸಂಘಗಳ ಸದಸ್ಯತ್ವ ಪಡೆದವರಿಗೆ ಮಾತ್ರ ಪಾಲಿಕೆಯಿಂದ ಉದ್ದಿಮೆ ಪರವಾನಗಿ ನೀಡುವ ಬಗ್ಗೆ ತೀರ್ಮಾನಕೈಗೊಳ್ಳಲಾಯಿತು.</p>.<p><strong>ಅಜ್ಜಗೊಂಡನಹಳ್ಳಿ ಘಟಕಕ್ಕೆ ತ್ಯಾಜ್ಯ ನೀಡಿ</strong><br />ಮಾಂಸದ ಅಂಗಡಿಗಳವರು ತ್ಯಾಜ್ಯವನ್ನು ಅಜ್ಜಗೊಂಡನಹಳ್ಳಿ ಕಸ ವಿಲೇವಾರಿ ಘಟಕಕ್ಕೆ ತೆಗೆದುಕೊಂಡು ಹೋಗಿ ನೀಡಬೇಕು. ಇದಕ್ಕಾಗಿ ಅವರು ಎರಡು ವಾಹನಗಳ ವ್ಯವಸ್ಥೆ ಮಾಡಿಕೊಂಡಿದ್ದಾರೆ. ತ್ಯಾಜ್ಯವನ್ನು ಸರಿಯಾಗಿ ನಿರ್ವಹಣೆ ಮಾಡದಿದ್ದರೆ ಅಂತಹವರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಪಾಲಿಕೆ ಆರೋಗ್ಯಾಧಿಕಾರಿ ಡಾ.ನಾಗೇಶ್ ಕುಮಾರ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>