ದಿಗಂಬರ ಜೈನ ಮುನಿಗಳಾದ ಅಮೋಘಕೀರ್ತಿ ಮಹಾರಾಜ್, ಅಮರಕೀರ್ತಿ ಮಹಾರಾಜ್ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಜೈನ ಮುನಿಗಳು, ಮಾತಾಜಿಗಳು, ದಕ್ಷಿಣ ಭಾರತದ ವಿವಿಧ ಜೈನ ಮಠಗಳ ಪೀಠಾಧೀಶರು ಭಾಗವಹಿಸಲಿದ್ದಾರೆ. ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ವಹಿಸಲಿದ್ದು, ಸಮುದಾಯದ ಮುಖಂಡರಾದ ಸುರೇಂದ್ರಕುಮಾರ್, ರಾಕೇಶ್ ಜೈನ್ ಇತರರು ಭಾಗವಹಿಸುವರು ಎಂದು ಹೇಳಿದರು.