<p><strong>ತುಮಕೂರು</strong>: ಬಯಲು ಸೀಮೆಯ ಬರ ನೀಗಿಸಿದ ನೀರಾವರಿ ತಜ್ಞ ಪರಮಶಿವಯ್ಯ ಅವರದ್ದು ಸರ್.ಎಂ.ವಿಶ್ವೇಶ್ವರಯ್ಯ ಅವರಿಗೆ ಸರಿಸಮಾನವಾದ ಸಾಧನೆ ಎಂದು ಸಂಸದ ಜಿ.ಎಸ್.ಬಸವರಾಜು ಅಭಿಪ್ರಾಯಪಟ್ಟರು.</p>.<p>ತುಮಕೂರು ವಿಶ್ವವಿದ್ಯಾನಿಲಯದ ಜಿ.ಎಸ್.ಪರಮಶಿವಯ್ಯ ಅಧ್ಯಯನ ಪೀಠದಿಂದ ಬುಧವಾರ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ತಮಿಳುನಾಡು ಹಾಗೂ ಮಹಾರಾಷ್ಟ್ರದಲ್ಲಿ ಜಲಸಂಪನ್ಮೂಲ ಪ್ರಾಧಿಕಾರ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಆದರೆ, ಕರ್ನಾಟಕದಲ್ಲಿ ಇದು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಆದರೆ, ಪರಮಶಿವಯ್ಯ ಅವರು ಕರ್ನಾಟಕದ ನಿಜವಾದ ಜಲಸಂಪನ್ಮೂಲ ಪ್ರಾಧಿಕಾರವೇ ಆಗಿದ್ದರು. ಅವರ ಶ್ರಮ, ದೂರದೃಷ್ಟಿಯ ಕಲ್ಪನೆಯಿಂದ ಜಿಲ್ಲೆಯ ಜನರಿಗೆ ಹೇಮಾವತಿ ನೀರು ದೊರೆಯುತ್ತಿದೆ ಎಂದರು.</p>.<p>ರೈತರ ಮೂಲ ಸಮಸ್ಯೆಗಳ ಅರಿವು ಪರಮಶಿವಯ್ಯ ಅವರಿಗಿತ್ತು. ಹೇಮಾವತಿಯನ್ನು ಬಯಲುಸೀಮೆಗೆ ಹರಿಸಲೇಬೇಕು ಎಂದು ಶಪಥ ಮಾಡಿ ಅದರಂತೆಯೇ ನಡೆದುಕೊಂಡರು. ಎತ್ತಿನಹೊಳೆ ಯೋಜನೆ ಅವರ ಕನಸಿನ ಕೂಸು. ಅವರ ಕೊಡುಗೆಯನ್ನು ಕರ್ನಾಟಕ ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಹೇಳಿದರು.</p>.<p>ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕೆ.ಜೈಪ್ರಕಾಶ್ ‘ನೀರಾವರಿ ಯೋಜನೆಗಳ ಅನುಷ್ಠಾನ, ನಿರ್ವಹಣೆ ಮತ್ತು ಕಾರ್ಯತಂತ್ರ’ ಕುರಿತು ವಿಶೇಷ ಉಪನ್ಯಾಸ ನೀಡಿ, ನೀರಾವರಿ ನಾಲೆಗಳ ಆಧುನೀಕರಣದಿಂದ ನೀರಿನ ಪರಿಣಾಮಕಾರಿ ಬಳಕೆ ಸಾಧ್ಯ ಎಂದರು.</p>.<p>ಎತ್ತಿನಹೊಳೆ ಯೋಜನೆಯಿಂದ ಏಳು ಜಿಲ್ಲೆಗಳ 76 ಲಕ್ಷ ಮಂದಿಗೆ ಅನುಕೂಲ ಆಗುತ್ತದೆ. 24 ಟಿಎಂಸಿ ಅಡಿ ನೀರು ಬಯಲುಸೀಮೆಗೆ ಲಭ್ಯವಾಗುತ್ತದೆ. ಸುಮಾರು 527 ಕೆರೆಗಳನ್ನು ತುಂಬಿಸುವ ಮೂಲಕ ಅಂತರ್ಜಲ ಅಭಿವೃದ್ಧಿಗೆ ಕಾರಣವಾಗುತ್ತದೆ ಎಂದು ವಿವರಿಸಿದರು.</p>.<p>ಕುಲಪತಿ ಪ್ರೊ.ವೈ.ಎಸ್.ಸಿದ್ದೇಗೌಡಅಧ್ಯಕ್ಷತೆ ವಹಿಸಿದ್ದರು. ಕುಲಸಚಿವ ಪ್ರೊ.ಕೆ.ಎನ್.ಗಂಗಾನಾಯಕ್, ಜಿ.ಎಸ್.ಪರಮಶಿವಯ್ಯ ಅಧ್ಯಯನ ಪೀಠದ ವ್ಯವಸ್ಥಾಪಕ ನಿರ್ದೇಶಕ ಡಾ.ಬಿ.ರವೀಂದ್ರ ಕುಮಾರ್, ಸಹಾಯಕ ಪ್ರಾಧ್ಯಾಪಕ ಡಾ.ಎಂ.ಮುನಿರಾಜು, ಸಿಬಂತಿ ಪದ್ಮನಾಭ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಬಯಲು ಸೀಮೆಯ ಬರ ನೀಗಿಸಿದ ನೀರಾವರಿ ತಜ್ಞ ಪರಮಶಿವಯ್ಯ ಅವರದ್ದು ಸರ್.ಎಂ.ವಿಶ್ವೇಶ್ವರಯ್ಯ ಅವರಿಗೆ ಸರಿಸಮಾನವಾದ ಸಾಧನೆ ಎಂದು ಸಂಸದ ಜಿ.ಎಸ್.ಬಸವರಾಜು ಅಭಿಪ್ರಾಯಪಟ್ಟರು.</p>.<p>ತುಮಕೂರು ವಿಶ್ವವಿದ್ಯಾನಿಲಯದ ಜಿ.ಎಸ್.ಪರಮಶಿವಯ್ಯ ಅಧ್ಯಯನ ಪೀಠದಿಂದ ಬುಧವಾರ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ತಮಿಳುನಾಡು ಹಾಗೂ ಮಹಾರಾಷ್ಟ್ರದಲ್ಲಿ ಜಲಸಂಪನ್ಮೂಲ ಪ್ರಾಧಿಕಾರ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಆದರೆ, ಕರ್ನಾಟಕದಲ್ಲಿ ಇದು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಆದರೆ, ಪರಮಶಿವಯ್ಯ ಅವರು ಕರ್ನಾಟಕದ ನಿಜವಾದ ಜಲಸಂಪನ್ಮೂಲ ಪ್ರಾಧಿಕಾರವೇ ಆಗಿದ್ದರು. ಅವರ ಶ್ರಮ, ದೂರದೃಷ್ಟಿಯ ಕಲ್ಪನೆಯಿಂದ ಜಿಲ್ಲೆಯ ಜನರಿಗೆ ಹೇಮಾವತಿ ನೀರು ದೊರೆಯುತ್ತಿದೆ ಎಂದರು.</p>.<p>ರೈತರ ಮೂಲ ಸಮಸ್ಯೆಗಳ ಅರಿವು ಪರಮಶಿವಯ್ಯ ಅವರಿಗಿತ್ತು. ಹೇಮಾವತಿಯನ್ನು ಬಯಲುಸೀಮೆಗೆ ಹರಿಸಲೇಬೇಕು ಎಂದು ಶಪಥ ಮಾಡಿ ಅದರಂತೆಯೇ ನಡೆದುಕೊಂಡರು. ಎತ್ತಿನಹೊಳೆ ಯೋಜನೆ ಅವರ ಕನಸಿನ ಕೂಸು. ಅವರ ಕೊಡುಗೆಯನ್ನು ಕರ್ನಾಟಕ ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಹೇಳಿದರು.</p>.<p>ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕೆ.ಜೈಪ್ರಕಾಶ್ ‘ನೀರಾವರಿ ಯೋಜನೆಗಳ ಅನುಷ್ಠಾನ, ನಿರ್ವಹಣೆ ಮತ್ತು ಕಾರ್ಯತಂತ್ರ’ ಕುರಿತು ವಿಶೇಷ ಉಪನ್ಯಾಸ ನೀಡಿ, ನೀರಾವರಿ ನಾಲೆಗಳ ಆಧುನೀಕರಣದಿಂದ ನೀರಿನ ಪರಿಣಾಮಕಾರಿ ಬಳಕೆ ಸಾಧ್ಯ ಎಂದರು.</p>.<p>ಎತ್ತಿನಹೊಳೆ ಯೋಜನೆಯಿಂದ ಏಳು ಜಿಲ್ಲೆಗಳ 76 ಲಕ್ಷ ಮಂದಿಗೆ ಅನುಕೂಲ ಆಗುತ್ತದೆ. 24 ಟಿಎಂಸಿ ಅಡಿ ನೀರು ಬಯಲುಸೀಮೆಗೆ ಲಭ್ಯವಾಗುತ್ತದೆ. ಸುಮಾರು 527 ಕೆರೆಗಳನ್ನು ತುಂಬಿಸುವ ಮೂಲಕ ಅಂತರ್ಜಲ ಅಭಿವೃದ್ಧಿಗೆ ಕಾರಣವಾಗುತ್ತದೆ ಎಂದು ವಿವರಿಸಿದರು.</p>.<p>ಕುಲಪತಿ ಪ್ರೊ.ವೈ.ಎಸ್.ಸಿದ್ದೇಗೌಡಅಧ್ಯಕ್ಷತೆ ವಹಿಸಿದ್ದರು. ಕುಲಸಚಿವ ಪ್ರೊ.ಕೆ.ಎನ್.ಗಂಗಾನಾಯಕ್, ಜಿ.ಎಸ್.ಪರಮಶಿವಯ್ಯ ಅಧ್ಯಯನ ಪೀಠದ ವ್ಯವಸ್ಥಾಪಕ ನಿರ್ದೇಶಕ ಡಾ.ಬಿ.ರವೀಂದ್ರ ಕುಮಾರ್, ಸಹಾಯಕ ಪ್ರಾಧ್ಯಾಪಕ ಡಾ.ಎಂ.ಮುನಿರಾಜು, ಸಿಬಂತಿ ಪದ್ಮನಾಭ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>