‘ಶಾಸಕ ರಾಮಲಿಂಗಾರೆಡ್ಡಿ ಅವರಿಗೆ ನಾನು ಮತ್ತು ದಿನೇಶ್ ಗುಂಡೂರಾವ್ ಸಚಿವ ಸ್ಥಾನ ತಪ್ಪಿಸಿದ್ದೇವೆ ಎಂದು ಮಾಧ್ಯಮಗಳಲ್ಲಿ ಸುದ್ದಿಗಳು ಪ್ರಕಟವಾಗಿದೆ. ಇದು ಸತ್ಯಕ್ಕೆ ದೂರವಾದುದು. ರಮೇಶ್ ಜಾರಕಿಹೊಳಿ ಅವರ ವಿಚಾರದಲ್ಲಿ ಮಾಧ್ಯಮದವರು ಅನಗತ್ಯ ಗೊಂದಲ ಮೂಡಿಸುತ್ತಿದ್ದಾರೆ. ಸಚಿವ ಸಂಪುಟ ವಿಸ್ತರಣೆ ನಂತರ ಸ್ವಾಭಾವಿಕವಾಗಿ ಅಸಮಾಧಾನ ಉಂಟಾಗುತ್ತದೆ. ಮುಂದಿನ ಒಂದು ವಾರದಲ್ಲಿ ಎಲ್ಲವೂ ತಿಳಿಯಾಗಲಿದೆ’ ಎಂದು ಭರವಸೆ ವ್ಯಕ್ತಪಡಿಸಿದರು.