<p><strong>ತುಮಕೂರು</strong>: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸದನದಲ್ಲೇ ಆರ್ಎಸ್ಎಸ್ ಗೀತೆ ಹಾಡಿ ವಿವಾದಕ್ಕೆ ಸಿಲುಕಿದ ಬಳಿಕ, ಎಬಿವಿಪಿ ಹಮ್ಮಿಕೊಂಡಿದ್ದ ಮೆರವಣಿಗೆ ಕಾರ್ಯಕ್ರಮದಲ್ಲಿ ಗೃಹ ಸಚಿವ ಜಿ.ಪರಮೇಶ್ವರ ಭಾಗಿಯಾಗಿರುವುದು ಗಮನ ಸೆಳೆದಿದೆ.</p>.<p>ವೀರ ರಾಣಿ ಅಬ್ಬಕ್ಕ ಅವರ 500ನೇ ಜಯಂತಿ ಪ್ರಯುಕ್ತ ರಥಯಾತ್ರೆಯನ್ನು ಎಬಿವಿಪಿ ರಾಜ್ಯದಾದ್ಯಂತ ಹಮ್ಮಿಕೊಂಡಿದೆ. ತಿಪಟೂರಿನಲ್ಲಿ ಮಂಗಳವಾರ ರಾತ್ರಿ ಪಂಜಿನ ಮೆರವಣಿಗೆಯಲ್ಲಿ ರಥಯಾತ್ರೆ ಸಾಗುತ್ತಿದ್ದಾಗ ಪರಮೇಶ್ವರ ಪಾಲ್ಗೊಂಡಿದ್ದರು.</p>.<p>ತಿಪಟೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ತೆರಳುತ್ತಿದ್ದ ಸಮಯದಲ್ಲಿ ಪಂಜಿನ ಮೆರವಣಿಗೆ ಬರುತ್ತಿರುವುದನ್ನು ಸಚಿವರು ಗಮನಿಸಿದ್ದಾರೆ. ನಂತರ ಸಚಿವರು ಕಾರಿನಿಂದ ಇಳಿದು, ಶಾಸಕ ಕೆ.ಷಡಕ್ಷರಿ ಜತೆಯಲ್ಲಿ ರಥಯಾತ್ರೆ ಬಳಿಗೆ ತೆರಳಿದ್ದಾರೆ.</p>.<p>ಮೆರವಣಿಗೆಯಲ್ಲಿ ಒಯ್ಯುತ್ತಿದ್ದ ರಾಣಿ ಅಬ್ಬಕ್ಕ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ್ದಾರೆ. ಸ್ಥಳದಲ್ಲಿದ್ದ ಪ್ರಮುಖರ ಜತೆ ಕೆಲಕಾಲ ಮಾತುಕತೆ ನಡೆಸಿ ವಾಪಸಾಗಿದ್ದಾರೆ.</p>.<p><strong>‘ಮಾಹಿತಿ ಇಲ್ಲ’</strong></p><p>ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಯಾರೆಲ್ಲಾ ಹುದ್ದೆ ಹಾಗೂ ಜವಾಬ್ದಾರಿ ತೆಗೆದುಕೊಂಡಿದ್ದಾರೊ ಅವರು ಪಕ್ಷಕ್ಕೆ ನಿಷ್ಠರಾಗಿ ಕೆಲಸ ಮಾಡಬೇಕು ಎಂದು ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಕಾರ್ಯಕರ್ತರಾಗಿ, ಪಕ್ಷದ ಪದಾಧಿಕಾರಿಯಾಗಿ ಜವಾಬ್ದಾರಿ ವಹಿಸಿಕೊಂಡವರು ಅದಕ್ಕಾಗಿ ಸಮಯ ಮೀಸಲಿಡಬೇಕು – ಡಿ.ಕೆ. ಶಿವಕುಮಾರ್, ಡಿಸಿಎಂ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸದನದಲ್ಲೇ ಆರ್ಎಸ್ಎಸ್ ಗೀತೆ ಹಾಡಿ ವಿವಾದಕ್ಕೆ ಸಿಲುಕಿದ ಬಳಿಕ, ಎಬಿವಿಪಿ ಹಮ್ಮಿಕೊಂಡಿದ್ದ ಮೆರವಣಿಗೆ ಕಾರ್ಯಕ್ರಮದಲ್ಲಿ ಗೃಹ ಸಚಿವ ಜಿ.ಪರಮೇಶ್ವರ ಭಾಗಿಯಾಗಿರುವುದು ಗಮನ ಸೆಳೆದಿದೆ.</p>.<p>ವೀರ ರಾಣಿ ಅಬ್ಬಕ್ಕ ಅವರ 500ನೇ ಜಯಂತಿ ಪ್ರಯುಕ್ತ ರಥಯಾತ್ರೆಯನ್ನು ಎಬಿವಿಪಿ ರಾಜ್ಯದಾದ್ಯಂತ ಹಮ್ಮಿಕೊಂಡಿದೆ. ತಿಪಟೂರಿನಲ್ಲಿ ಮಂಗಳವಾರ ರಾತ್ರಿ ಪಂಜಿನ ಮೆರವಣಿಗೆಯಲ್ಲಿ ರಥಯಾತ್ರೆ ಸಾಗುತ್ತಿದ್ದಾಗ ಪರಮೇಶ್ವರ ಪಾಲ್ಗೊಂಡಿದ್ದರು.</p>.<p>ತಿಪಟೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ತೆರಳುತ್ತಿದ್ದ ಸಮಯದಲ್ಲಿ ಪಂಜಿನ ಮೆರವಣಿಗೆ ಬರುತ್ತಿರುವುದನ್ನು ಸಚಿವರು ಗಮನಿಸಿದ್ದಾರೆ. ನಂತರ ಸಚಿವರು ಕಾರಿನಿಂದ ಇಳಿದು, ಶಾಸಕ ಕೆ.ಷಡಕ್ಷರಿ ಜತೆಯಲ್ಲಿ ರಥಯಾತ್ರೆ ಬಳಿಗೆ ತೆರಳಿದ್ದಾರೆ.</p>.<p>ಮೆರವಣಿಗೆಯಲ್ಲಿ ಒಯ್ಯುತ್ತಿದ್ದ ರಾಣಿ ಅಬ್ಬಕ್ಕ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ್ದಾರೆ. ಸ್ಥಳದಲ್ಲಿದ್ದ ಪ್ರಮುಖರ ಜತೆ ಕೆಲಕಾಲ ಮಾತುಕತೆ ನಡೆಸಿ ವಾಪಸಾಗಿದ್ದಾರೆ.</p>.<p><strong>‘ಮಾಹಿತಿ ಇಲ್ಲ’</strong></p><p>ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಯಾರೆಲ್ಲಾ ಹುದ್ದೆ ಹಾಗೂ ಜವಾಬ್ದಾರಿ ತೆಗೆದುಕೊಂಡಿದ್ದಾರೊ ಅವರು ಪಕ್ಷಕ್ಕೆ ನಿಷ್ಠರಾಗಿ ಕೆಲಸ ಮಾಡಬೇಕು ಎಂದು ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಕಾರ್ಯಕರ್ತರಾಗಿ, ಪಕ್ಷದ ಪದಾಧಿಕಾರಿಯಾಗಿ ಜವಾಬ್ದಾರಿ ವಹಿಸಿಕೊಂಡವರು ಅದಕ್ಕಾಗಿ ಸಮಯ ಮೀಸಲಿಡಬೇಕು – ಡಿ.ಕೆ. ಶಿವಕುಮಾರ್, ಡಿಸಿಎಂ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>