<p><strong>ಪಾವಗಡ</strong>: ಪಟ್ಟಣದ ಶಿರಾ ರಸ್ತೆ ಬಳಿಯ ಕುಮಾರಸ್ವಾಮಿ ಬಡಾವಣೆ ಹೆಸರನ್ನು ಯಾವುದೇ ಕಾರಣಕ್ಕೂ ಬದಲಾಯಿಸಬಾರದು ಎಂದು ಒಕ್ಕಲಿಗರ ಸಂಘದ ಮುಖಂಡ ಎನ್.ಎ. ಈರಣ್ಣ ಒತ್ತಾಯಿಸಿದರು.</p>.<p>ಪಟ್ಟಣದಲ್ಲಿ ಮಂಗಳವಾರ ತಾಲ್ಲೂಕು ಒಕ್ಕಲಿಗರ ಸಂಘದಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ನಿರ್ಮಿಸಲಾಗಿದ್ದ ಮನೆಗಳನ್ನು ವಿತರಿಸಿ ಉದ್ಘಾಟಿಸಿದ್ದರು. ಆಗಿನ ಶಾಸಕ ಕೆ.ಎಂ. ತಿಮ್ಮರಾಯಪ್ಪ ಬಡಾವಣೆಗೆ ಮೂಲ ಸೌಕರ್ಯಗಳನ್ನು ಕಲ್ಪಿಸಿದ್ದರು ಎಂದರು.</p>.<p>ಆದರೆ ಈಗಿನ ಪುರಸಭೆ ಆಡಳಿತವು ಒಕ್ಕಲಿಗ ಸಮುದಾಯದ ನಾಯಕನಿಗೆ ಅಪಮಾನ ಮಾಡುವ ರೀತಿಯಲ್ಲಿ ಬಡಾವಣೆ ಹೆಸರನ್ನು ಬದಲಾವಣೆ ಮಾಡಲು ಹೊರಟಿರುವುದು ಅಸಮಂಜಸ. ತಾಲ್ಲೂಕಿನಲ್ಲಿ ಒಕ್ಕಲಿಗರಿಗೆ ಮಾಡಿರುವ ಅಪಮಾನ, ತಾಲೂಕಿನಲ್ಲಿ 30ರಿಂದ 40ಸಾವಿರ ಜನರಿರುವ ಒಕ್ಕಲಿಗ ಸಮುದಾಯವನ್ನು ಕಡೆಗಣಿಸಲಾಗುತ್ತಿದೆ ಎಂದರು.</p>.<p>ಮುಖಂಡ ಮಂಗಳವಾಡ ರಂಗಣ್ಣ ಮಾತನಾಡಿ, ಸಮಾಜದ ಏಳ್ಗೆಗೆ ಶ್ರಮಿಸಿದ ಒಕ್ಕಲಿಗ ಸಮಾಜದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೆಸರಿಗೆ ಕಳಂಕ ತರುವ ರೀತಿ ಪುರಸಭೆ ಬಡಾವಣೆ ಹೆಸರು ಬದಲಾವಣೆ ಮಾಡಲು ಹೊರಟಿರುವುದನ್ನು ಒಕ್ಕಲಿಗರ ಸಂಘ ಖಂಡಿಸುತ್ತದೆ ಎಂದರು.</p>.<p>ತಾಲೂಕು ಒಕ್ಕಲಿಗ ಸಂಘದ ಅಧ್ಯಕ್ಷ ತಿಪ್ಪೆಈರಣ್ಣ ಮಾತನಾಡಿ, ಯಾವುದೇ ಕಾರಣಕ್ಕೂ ಬಡಾವಣೆ ಹೆಸರು ಬದಲಿಸಬಾರದು. ಹೆಸರು ಬದಲಿಸಿದಲ್ಲಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.</p>.<p>ಮುಖಂಡ ಕೆ.ಟಿ ಹಳ್ಳಿ ಚಂದ್ರಶೇಖರ್, ವಿಎಸ್ಎಸ್ಎನ್ ಮಾಜಿ ಅಧ್ಯಕ್ಷ ಕೃಷ್ಣಪ್ಪ, ಕುಂಚಿಟಿಗ ಒಕ್ಕಲಿಗ ಸಂಘದ ನಿರ್ದೇಶಕ ಮೂರ್ತಿ, ಕಾರ್ಯಕಾರಿಣಿ ಸದಸ್ಯ ಈರಣ್ಣ, ಮಂಜಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾವಗಡ</strong>: ಪಟ್ಟಣದ ಶಿರಾ ರಸ್ತೆ ಬಳಿಯ ಕುಮಾರಸ್ವಾಮಿ ಬಡಾವಣೆ ಹೆಸರನ್ನು ಯಾವುದೇ ಕಾರಣಕ್ಕೂ ಬದಲಾಯಿಸಬಾರದು ಎಂದು ಒಕ್ಕಲಿಗರ ಸಂಘದ ಮುಖಂಡ ಎನ್.ಎ. ಈರಣ್ಣ ಒತ್ತಾಯಿಸಿದರು.</p>.<p>ಪಟ್ಟಣದಲ್ಲಿ ಮಂಗಳವಾರ ತಾಲ್ಲೂಕು ಒಕ್ಕಲಿಗರ ಸಂಘದಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ನಿರ್ಮಿಸಲಾಗಿದ್ದ ಮನೆಗಳನ್ನು ವಿತರಿಸಿ ಉದ್ಘಾಟಿಸಿದ್ದರು. ಆಗಿನ ಶಾಸಕ ಕೆ.ಎಂ. ತಿಮ್ಮರಾಯಪ್ಪ ಬಡಾವಣೆಗೆ ಮೂಲ ಸೌಕರ್ಯಗಳನ್ನು ಕಲ್ಪಿಸಿದ್ದರು ಎಂದರು.</p>.<p>ಆದರೆ ಈಗಿನ ಪುರಸಭೆ ಆಡಳಿತವು ಒಕ್ಕಲಿಗ ಸಮುದಾಯದ ನಾಯಕನಿಗೆ ಅಪಮಾನ ಮಾಡುವ ರೀತಿಯಲ್ಲಿ ಬಡಾವಣೆ ಹೆಸರನ್ನು ಬದಲಾವಣೆ ಮಾಡಲು ಹೊರಟಿರುವುದು ಅಸಮಂಜಸ. ತಾಲ್ಲೂಕಿನಲ್ಲಿ ಒಕ್ಕಲಿಗರಿಗೆ ಮಾಡಿರುವ ಅಪಮಾನ, ತಾಲೂಕಿನಲ್ಲಿ 30ರಿಂದ 40ಸಾವಿರ ಜನರಿರುವ ಒಕ್ಕಲಿಗ ಸಮುದಾಯವನ್ನು ಕಡೆಗಣಿಸಲಾಗುತ್ತಿದೆ ಎಂದರು.</p>.<p>ಮುಖಂಡ ಮಂಗಳವಾಡ ರಂಗಣ್ಣ ಮಾತನಾಡಿ, ಸಮಾಜದ ಏಳ್ಗೆಗೆ ಶ್ರಮಿಸಿದ ಒಕ್ಕಲಿಗ ಸಮಾಜದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೆಸರಿಗೆ ಕಳಂಕ ತರುವ ರೀತಿ ಪುರಸಭೆ ಬಡಾವಣೆ ಹೆಸರು ಬದಲಾವಣೆ ಮಾಡಲು ಹೊರಟಿರುವುದನ್ನು ಒಕ್ಕಲಿಗರ ಸಂಘ ಖಂಡಿಸುತ್ತದೆ ಎಂದರು.</p>.<p>ತಾಲೂಕು ಒಕ್ಕಲಿಗ ಸಂಘದ ಅಧ್ಯಕ್ಷ ತಿಪ್ಪೆಈರಣ್ಣ ಮಾತನಾಡಿ, ಯಾವುದೇ ಕಾರಣಕ್ಕೂ ಬಡಾವಣೆ ಹೆಸರು ಬದಲಿಸಬಾರದು. ಹೆಸರು ಬದಲಿಸಿದಲ್ಲಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.</p>.<p>ಮುಖಂಡ ಕೆ.ಟಿ ಹಳ್ಳಿ ಚಂದ್ರಶೇಖರ್, ವಿಎಸ್ಎಸ್ಎನ್ ಮಾಜಿ ಅಧ್ಯಕ್ಷ ಕೃಷ್ಣಪ್ಪ, ಕುಂಚಿಟಿಗ ಒಕ್ಕಲಿಗ ಸಂಘದ ನಿರ್ದೇಶಕ ಮೂರ್ತಿ, ಕಾರ್ಯಕಾರಿಣಿ ಸದಸ್ಯ ಈರಣ್ಣ, ಮಂಜಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>