<p><strong>ಪಾವಗಡ:</strong> ವಿಜಯದಶಮಿ ಹಬ್ಬವನ್ನು ತಾಲ್ಲೂಕಿನಾದ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಬುಧವಾರ ಆಯುಧಪೂಜೆ ದಿನ ಪಟ್ಟಣದ ಶನೈಶ್ಚರ ದೇಗುಲದ ಮುಂದೆ ವಾಹನಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. </p>.<p>ಶನೈಶ್ಚರ ದೇಗುಲ, ನಾಗಲಮಡಿಕೆ ಸುಬ್ರಹ್ಮಣ್ಯೇಶ್ವರ ದೇಗುಲ, ಸಂಕಾಪುರ ಸುವರ್ಚಲಾ ಆಂಜನೇಯ ದೇಗುಲ ಸೇರಿದಂತೆ ಹಲವು ದೇಗುಲಗಳಲ್ಲಿ ಭಕ್ತರು ವಿಶೇಷ ಪೂಜೆ ಸಲ್ಲಿಸಿದರು. ಶನೈಶ್ಚರ ದೇಗುಲದಲ್ಲಿ ಸೀತಲಾದೇವಿಗೆ ನಿತ್ಯ ವಿವಿಧ ಅಲಂಕಾರ ಮಾಡಲಾಗಿತ್ತು.</p>.<p>ಪಟ್ಟಣದಲ್ಲಿ ನಡೆದ ಜಂಬೂ ಸವಾರಿಯಲ್ಲಿ ತಹಶೀಲ್ದಾರ್ ವೈ.ರವಿ ಅವರು ವಾದ್ಯವೃಂದದೊಂದಿಗೆ ಮೆರವಣಿಗೆಯಲ್ಲಿ ಭಾಗವಹಿಸಿ ಶಮಿ ವೃಕ್ಷಕ್ಕೆ ಪೂಜೆ ಸಲ್ಲಿಸಿದರು.</p>.<p>ವೈ.ಎನ್.ಹೊಸಕೋಟೆಯಲ್ಲಿ ರಾಜಮನೆತನದ ಸಾಂಪ್ರದಾಯಿಕ ಜಂಬೂ ಸವಾರಿ ನಡೆಯಿತು. ರಾಜಾ ಜಯಚಂದ್ರರಾಜು ಅವರು ಕೋಟೆ ಆಂಜನೇಯಸ್ವಾಮಿ ದೇಗುಲದಲ್ಲಿ ಪೂಜೆ ಸಲ್ಲಿಸಿದ ನಂತರ ಮೆರವಣಿಗೆ ಆರಂಭವಾಯಿತು. ಗ್ರಾಮದೇವತೆಗಳ ಉತ್ಸವ ಮೂರ್ತಿಗಳೊಂದಿಗೆ ನಡೆದ ಈ ಮೆರವಣಿಗೆ ಬನ್ನಿ ಮಂಟಪಕ್ಕೆ ತಲುಪಿತು. ಅಲ್ಲಿ ಶಮಿ ಪತ್ರೆ ಹಂಚಿಕೆ ಮತ್ತು ಶುಭಾಶಯಗಳ ವಿನಿಮಯ ನಡೆಯಿತು.</p>.<p>ಬೆಸ್ಕಾಂ ಕಚೇರಿಯಲ್ಲಿರುವ ವರಸಿದ್ಧಿ ವಿನಾಯಕ ದೇವಾಲಯದಲ್ಲಿ ಸಹ ವಿಶೇಷ ಪೂಜೆ ನಡೆಯಿತು. ಬನ್ನಿ ಮಂಟಪಕ್ಕೆ ಬಂದ ಭಕ್ತರು ವಿನಾಯಕನ ದರ್ಶನ ಮಾಡಿ ಪ್ರಸಾದ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾವಗಡ:</strong> ವಿಜಯದಶಮಿ ಹಬ್ಬವನ್ನು ತಾಲ್ಲೂಕಿನಾದ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಬುಧವಾರ ಆಯುಧಪೂಜೆ ದಿನ ಪಟ್ಟಣದ ಶನೈಶ್ಚರ ದೇಗುಲದ ಮುಂದೆ ವಾಹನಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. </p>.<p>ಶನೈಶ್ಚರ ದೇಗುಲ, ನಾಗಲಮಡಿಕೆ ಸುಬ್ರಹ್ಮಣ್ಯೇಶ್ವರ ದೇಗುಲ, ಸಂಕಾಪುರ ಸುವರ್ಚಲಾ ಆಂಜನೇಯ ದೇಗುಲ ಸೇರಿದಂತೆ ಹಲವು ದೇಗುಲಗಳಲ್ಲಿ ಭಕ್ತರು ವಿಶೇಷ ಪೂಜೆ ಸಲ್ಲಿಸಿದರು. ಶನೈಶ್ಚರ ದೇಗುಲದಲ್ಲಿ ಸೀತಲಾದೇವಿಗೆ ನಿತ್ಯ ವಿವಿಧ ಅಲಂಕಾರ ಮಾಡಲಾಗಿತ್ತು.</p>.<p>ಪಟ್ಟಣದಲ್ಲಿ ನಡೆದ ಜಂಬೂ ಸವಾರಿಯಲ್ಲಿ ತಹಶೀಲ್ದಾರ್ ವೈ.ರವಿ ಅವರು ವಾದ್ಯವೃಂದದೊಂದಿಗೆ ಮೆರವಣಿಗೆಯಲ್ಲಿ ಭಾಗವಹಿಸಿ ಶಮಿ ವೃಕ್ಷಕ್ಕೆ ಪೂಜೆ ಸಲ್ಲಿಸಿದರು.</p>.<p>ವೈ.ಎನ್.ಹೊಸಕೋಟೆಯಲ್ಲಿ ರಾಜಮನೆತನದ ಸಾಂಪ್ರದಾಯಿಕ ಜಂಬೂ ಸವಾರಿ ನಡೆಯಿತು. ರಾಜಾ ಜಯಚಂದ್ರರಾಜು ಅವರು ಕೋಟೆ ಆಂಜನೇಯಸ್ವಾಮಿ ದೇಗುಲದಲ್ಲಿ ಪೂಜೆ ಸಲ್ಲಿಸಿದ ನಂತರ ಮೆರವಣಿಗೆ ಆರಂಭವಾಯಿತು. ಗ್ರಾಮದೇವತೆಗಳ ಉತ್ಸವ ಮೂರ್ತಿಗಳೊಂದಿಗೆ ನಡೆದ ಈ ಮೆರವಣಿಗೆ ಬನ್ನಿ ಮಂಟಪಕ್ಕೆ ತಲುಪಿತು. ಅಲ್ಲಿ ಶಮಿ ಪತ್ರೆ ಹಂಚಿಕೆ ಮತ್ತು ಶುಭಾಶಯಗಳ ವಿನಿಮಯ ನಡೆಯಿತು.</p>.<p>ಬೆಸ್ಕಾಂ ಕಚೇರಿಯಲ್ಲಿರುವ ವರಸಿದ್ಧಿ ವಿನಾಯಕ ದೇವಾಲಯದಲ್ಲಿ ಸಹ ವಿಶೇಷ ಪೂಜೆ ನಡೆಯಿತು. ಬನ್ನಿ ಮಂಟಪಕ್ಕೆ ಬಂದ ಭಕ್ತರು ವಿನಾಯಕನ ದರ್ಶನ ಮಾಡಿ ಪ್ರಸಾದ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>