<p><strong>ಪಾವಗಡ:</strong> ಅಂಗವಿಕಲರನ್ನು ಸ್ವಾವಲಂಬಿಗಳನ್ನಾಗಿಸಲು ಅಂಗವಿಕಲರ ಜೀವನೋಪಾಯ ಯೋಜನೆ ಸಹಕಾರಿ ಎಂದು ರಾಮಕೃಷ್ಣ ಸೇವಾಶ್ರಮದ ಅಧ್ಯಕ್ಷ ಸ್ವಾಮಿ ಜಪಾನಂದಜಿ ತಿಳಿಸಿದರು.</p>.<p>ಪಟ್ಟಣದಲ್ಲಿ ಬುಧವಾರ ಸ್ವಾಮಿ ವಿವೇಕಾನಂದ ಸಂಘಟಿತ ಗ್ರಾಮಾಂತರ ಆರೋಗ್ಯ ಕೇಂದ್ರ, ಚೆಶೈರ್ ಡಿಸಬಿಲಿಟಿ ಟ್ರಸ್ಟ್, ಅಜುರ್ ಪವರ್ ಇಂಡಿಯಾ ಸಂಯುಕ್ತಾಶ್ರಯದಲ್ಲಿ ನಡೆದ ಅಂಗವಿಕಲರ ಜೀವನೋಪಾಯ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.</p>.<p>ಈ ಯೋಜನೆಗೆ ನೋಂದಾಯಿಸಿಕೊಳ್ಳುವವರಿಗೆ ಶಾರದಾದೇವಿ ದೃಷ್ಟಿ ನಿರ್ವಹಣಾ ಸಂಸ್ಥೆಯಲ್ಲಿ ಉಚಿತ ಊಟೋಪಚಾರ ಸಹಿತ ತರಬೇತಿ ನೀಡಲಾಗುವುದು. ಹೆಚ್ಚುವರಿಯಾಗಿ ಕಂಪ್ಯೂಟರ್ ತರಬೇತಿ ನೀಡಲು ವ್ಯವಸ್ಥೆ ಮಾಡಲಾಗಿದೆ ಎಂದರು.</p>.<p>ಈಗಾಗಲೇ ಹಲವು ಅಂಗವಿಕಲರು ತರಬೇತಿ ಪಡೆಯುತ್ತಿದ್ದಾರೆ. ಶಾರದಾದೇವಿ ದೃಷ್ಟಿ ನಿರ್ವಹಣ ಸಂಸ್ಥೆಯಿಂದ ಆರು ಮಂದಿ ಪದವಿ ಮುಗಿಸಿ ಮುಂದಿನ ಹಂತಕ್ಕೆ ತಲುಪಿದ್ದಾರೆ ಎಂದರು.</p>.<p>ಚೆಶೈರ್ ಡಿಸಬಿಲಿಟಿ ಟ್ರಸ್ಟ್ ಸಿಇಒ ಅನುರಾಧ ಪಾಟೀಲ್, ಯೋಜನೆಯ ಮೂಲಕ ಅಂಗವಿಕಲರಿಗೆ ಜೀವನದ ಹಾದಿಯನ್ನು ಸುಗಮಗೊಳಿಸಬಹುದಾಗಿದೆ ಎಂದು ತಿಳಿಸಿದರು.</p>.<p>ಅಜೂರ್ ಪವರ್ ಇಂಡಿಯಾದ ಸಿಎಸ್ಆರ್ ಕೋ-ಆರ್ಡಿನೇಟರ್ ಅಮೃತ್ ಕುಮಾರ್, ಗಾಯಿ ರವೀಶ್, ಸ್ವಾಮಿ ವಿವೇಕಾನಂದ ಗ್ರಾಮಾಂತರ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಜಿ.ಆರ್. ಚಂದ್ರಕಲಾ, ಎಂ.ಆರ್.ಡಬ್ಲ್ಯೂ, ಮೈಲಾರಪ್ಪ, ತುಮಕೂರು ವಿಶ್ವವಿದ್ಯಾನಿಲಯದ ಸಮಾಜಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ತೋತ್ಯಾನಾಯ್ಕ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾವಗಡ:</strong> ಅಂಗವಿಕಲರನ್ನು ಸ್ವಾವಲಂಬಿಗಳನ್ನಾಗಿಸಲು ಅಂಗವಿಕಲರ ಜೀವನೋಪಾಯ ಯೋಜನೆ ಸಹಕಾರಿ ಎಂದು ರಾಮಕೃಷ್ಣ ಸೇವಾಶ್ರಮದ ಅಧ್ಯಕ್ಷ ಸ್ವಾಮಿ ಜಪಾನಂದಜಿ ತಿಳಿಸಿದರು.</p>.<p>ಪಟ್ಟಣದಲ್ಲಿ ಬುಧವಾರ ಸ್ವಾಮಿ ವಿವೇಕಾನಂದ ಸಂಘಟಿತ ಗ್ರಾಮಾಂತರ ಆರೋಗ್ಯ ಕೇಂದ್ರ, ಚೆಶೈರ್ ಡಿಸಬಿಲಿಟಿ ಟ್ರಸ್ಟ್, ಅಜುರ್ ಪವರ್ ಇಂಡಿಯಾ ಸಂಯುಕ್ತಾಶ್ರಯದಲ್ಲಿ ನಡೆದ ಅಂಗವಿಕಲರ ಜೀವನೋಪಾಯ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.</p>.<p>ಈ ಯೋಜನೆಗೆ ನೋಂದಾಯಿಸಿಕೊಳ್ಳುವವರಿಗೆ ಶಾರದಾದೇವಿ ದೃಷ್ಟಿ ನಿರ್ವಹಣಾ ಸಂಸ್ಥೆಯಲ್ಲಿ ಉಚಿತ ಊಟೋಪಚಾರ ಸಹಿತ ತರಬೇತಿ ನೀಡಲಾಗುವುದು. ಹೆಚ್ಚುವರಿಯಾಗಿ ಕಂಪ್ಯೂಟರ್ ತರಬೇತಿ ನೀಡಲು ವ್ಯವಸ್ಥೆ ಮಾಡಲಾಗಿದೆ ಎಂದರು.</p>.<p>ಈಗಾಗಲೇ ಹಲವು ಅಂಗವಿಕಲರು ತರಬೇತಿ ಪಡೆಯುತ್ತಿದ್ದಾರೆ. ಶಾರದಾದೇವಿ ದೃಷ್ಟಿ ನಿರ್ವಹಣ ಸಂಸ್ಥೆಯಿಂದ ಆರು ಮಂದಿ ಪದವಿ ಮುಗಿಸಿ ಮುಂದಿನ ಹಂತಕ್ಕೆ ತಲುಪಿದ್ದಾರೆ ಎಂದರು.</p>.<p>ಚೆಶೈರ್ ಡಿಸಬಿಲಿಟಿ ಟ್ರಸ್ಟ್ ಸಿಇಒ ಅನುರಾಧ ಪಾಟೀಲ್, ಯೋಜನೆಯ ಮೂಲಕ ಅಂಗವಿಕಲರಿಗೆ ಜೀವನದ ಹಾದಿಯನ್ನು ಸುಗಮಗೊಳಿಸಬಹುದಾಗಿದೆ ಎಂದು ತಿಳಿಸಿದರು.</p>.<p>ಅಜೂರ್ ಪವರ್ ಇಂಡಿಯಾದ ಸಿಎಸ್ಆರ್ ಕೋ-ಆರ್ಡಿನೇಟರ್ ಅಮೃತ್ ಕುಮಾರ್, ಗಾಯಿ ರವೀಶ್, ಸ್ವಾಮಿ ವಿವೇಕಾನಂದ ಗ್ರಾಮಾಂತರ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಜಿ.ಆರ್. ಚಂದ್ರಕಲಾ, ಎಂ.ಆರ್.ಡಬ್ಲ್ಯೂ, ಮೈಲಾರಪ್ಪ, ತುಮಕೂರು ವಿಶ್ವವಿದ್ಯಾನಿಲಯದ ಸಮಾಜಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ತೋತ್ಯಾನಾಯ್ಕ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>