<p><strong>ಪಾವಗಡ: </strong>ತಾಲ್ಲೂಕಿನ ಉಪ್ಪಾರಹಳ್ಳಿ ತಾಂಡದಲ್ಲಿ ಕುರಿ, ಮೇಕೆಗಳನ್ನು ಕಳವು ಮಾಡಿದ್ದ ಆರೋಪಿಯನ್ನು ತಿರುಮಣಿ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ಆಂಧ್ರದ ಅನಂತಪುರ ಜಿಲ್ಲೆ ಸನಪ ಗ್ರಾಮದ ಅಂಜಿ ಬಂಧಿತ ಆರೋಪಿ. ಸೋಮವಾರ ರಾತ್ರಿ ರಾಮಾನಾಯ್ಕ, ಡಾಕಾನಾಯ್ಕ ಎಂಬುವವರ ಕುರಿಗಳನ್ನು ಕಳವು ಮಾಡಲಾಗಿತ್ತು. ತಿರುಮಣಿ ಪೊಲೀಸರು ಆರೋಪಿಯ ಜಾಡು ಹಿಡಿದು ಬಂಧಿಸಿದ್ದಾರೆ. ಆರೋಪಿಯಿಂದ 75 ಕುರಿ, ಮೇಕೆಗಳನ್ನು ವಶಪಡಿಸಿಕೊಳ್ಳಲಾಗಿದೆ.</p>.<p>ಸರ್ಕಲ್ ಇನ್ಸ್ಪೆಕ್ಟರ್ ಶ್ರೀಶೈಲಮೂರ್ತಿ, ಸಬ್ ಇನ್ಸ್ಪೆಕ್ಟರ್ ರಾಮಕೃಷ್ಣಪ್ಪ, ಕೇಶವರಾಜು, ಗೋಕರ್ಣ, ಸೋಮು, ನಾಗೇಂದ್ರಪ್ರಸಾದ್, ಪುಂಡಲೀಕ್ ಲಮಾಣಿ, ಪ್ರವೀಣ್ ಭಜಂತ್ರಿ ತನಿಖಾ ತಂಡದಲ್ಲಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಪಾವಗಡ: </strong>ತಾಲ್ಲೂಕಿನ ಉಪ್ಪಾರಹಳ್ಳಿ ತಾಂಡದಲ್ಲಿ ಕುರಿ, ಮೇಕೆಗಳನ್ನು ಕಳವು ಮಾಡಿದ್ದ ಆರೋಪಿಯನ್ನು ತಿರುಮಣಿ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ಆಂಧ್ರದ ಅನಂತಪುರ ಜಿಲ್ಲೆ ಸನಪ ಗ್ರಾಮದ ಅಂಜಿ ಬಂಧಿತ ಆರೋಪಿ. ಸೋಮವಾರ ರಾತ್ರಿ ರಾಮಾನಾಯ್ಕ, ಡಾಕಾನಾಯ್ಕ ಎಂಬುವವರ ಕುರಿಗಳನ್ನು ಕಳವು ಮಾಡಲಾಗಿತ್ತು. ತಿರುಮಣಿ ಪೊಲೀಸರು ಆರೋಪಿಯ ಜಾಡು ಹಿಡಿದು ಬಂಧಿಸಿದ್ದಾರೆ. ಆರೋಪಿಯಿಂದ 75 ಕುರಿ, ಮೇಕೆಗಳನ್ನು ವಶಪಡಿಸಿಕೊಳ್ಳಲಾಗಿದೆ.</p>.<p>ಸರ್ಕಲ್ ಇನ್ಸ್ಪೆಕ್ಟರ್ ಶ್ರೀಶೈಲಮೂರ್ತಿ, ಸಬ್ ಇನ್ಸ್ಪೆಕ್ಟರ್ ರಾಮಕೃಷ್ಣಪ್ಪ, ಕೇಶವರಾಜು, ಗೋಕರ್ಣ, ಸೋಮು, ನಾಗೇಂದ್ರಪ್ರಸಾದ್, ಪುಂಡಲೀಕ್ ಲಮಾಣಿ, ಪ್ರವೀಣ್ ಭಜಂತ್ರಿ ತನಿಖಾ ತಂಡದಲ್ಲಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>