ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹತ್ಯೆ ಆರೋಪಿಗಳ ಬಂಧನ

Last Updated 7 ಏಪ್ರಿಲ್ 2020, 16:13 IST
ಅಕ್ಷರ ಗಾತ್ರ

ಪಾವಗಡ: ತಾಲ್ಲೂಕಿನ ಬಿ.ಕೆ.ಹಳ್ಳಿಯಲ್ಲಿ ಪಡಿತರ ತರಲು ಹೋಗಿದ್ದ ವ್ಯಕ್ತಿಯನ್ನು ಹತ್ಯೆ ಮಾಡಿದ್ದ ಆರೋಪಿಗಳನ್ನು ತಿರುಮಣಿ ಪೊಲೀಸರು ಬಂಧಿಸಿದ್ದಾರೆ.

ವಡ್ರೇವು ಗ್ರಾಮದ ಓಬಣ್ಣ (26), ಮಾರುತಿ (25), ನವೀನ್ (26), ಸತೀಶ್ (27) ಬಂಧಿತರು. ಎಷ್ಟು ಮಂದಿ ಹತ್ಯೆಯಲ್ಲಿ ಭಾಗವಹಿಸಿದ್ದಾರೆ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.

ಸೋಮವಾರ ವಡ್ರೇವು ಗ್ರಾಮದ ಗಂಗಾಧರ್ (40) ಎಂಬುವರನ್ನು ಹತ್ಯೆ ಮಾಡಲಾಗಿತ್ತು.

ತಿರುಮಣಿ ಪೊಲೀಸರು ಗ್ರಾಮದ ಬಳಿಯ ತೋಟದಲ್ಲಿ ಅಡಗಿಕೊಂಡಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ. ತನಿಖೆ ಮುಂದುವರೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT