<p><strong>ತುಮಕೂರು: </strong>ಪಾವಗಡ ತಾಲ್ಲೂಕಿನ ಪಳವಳ್ಳಿ ಕಟ್ಟೆ ಬಳಿ ಶನಿವಾರ ನಡೆದ ಖಾಸಗಿ ಬಸ್ ಅಪಘಾತದಲ್ಲಿ ಗಾಯಗೊಂಡ 26 ಜನರನ್ನು ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಇದರಲ್ಲಿ 10 ಮಂದಿಯನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕಳುಹಿಸಲಾಗಿದೆ.</p>.<p>16 ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.</p>.<p>ಚಾಲಕನಿಗೆ ನಿಧಾನವಾಗಿ ಬಸ್ ಚಲಾಯಿಸುವಂತೆ ಕೂಗಿಕೊಂಡರೂ ಕೇಳಿಸಿಕೊಳ್ಳುತ್ತಿರಲಿಲ್ಲ. ಆಗೊಮ್ಮೆ, ಹೀಗೊಮ್ಮೆ ಮೊಬೈಲ್ನಲ್ಲಿ ಮಾತನಾಡುತ್ತಿದ್ದರು. ಚಾಲಕನ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಅಪಘಾತದಲ್ಲಿ ಗಾಯಗೊಂಡ ವೈ.ಎನ್.ಹೊಸಕೋಟೆಯ ನಿವಾಸಿ ಮಾರಪ್ಪ ಹೇಳಿದರು.</p>.<p>‘ಬಸ್ನಲ್ಲಿ ಸುಮಾರು 70 ರಿಂದ 80 ಜನ ಪ್ರಯಾಣಿಕರಿದ್ದರು. ಬಸ್ನ ಮೇಲ್ಭಾಗದಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಕೂತಿದ್ದರು. ಬಸ್ನಲ್ಲಿದ್ದ ಹಲವರಿಗೆ ಗಾಯಗಳಾಗಿವೆ. ಪಾವಗಡದಿಂದ ಸರಿಯಾದ ಸಮಯಕ್ಕೆ ಸರ್ಕಾರಿ ಬಸ್ಗಳಿಲ್ಲ. ಹಾಗಾಗಿ ಎಲ್ಲರು ಖಾಸಗಿ ಬಸ್ನಲ್ಲಿ ಪ್ರಯಾಣಿಸುತ್ತಾರೆ’ ಎಂದರು.</p>.<p>ಎರಡರಿಂದ ಮೂರು ಗಂಟೆಗೊಮ್ಮೆ ಸರ್ಕಾರಿ ಬಸ್ಗಳು ಬರುತ್ತವೆ. ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ತರಗತಿಗಳಿಗೆ ಹೋಗಬೇಕು ಎಂಬ ಉದ್ದೇಶದಿಂದ ಬಸ್ ತುಂಬಿದ್ದರೂ ಕೂಡ ಅನಿವಾರ್ಯವಾಗಿ ಅದರಲ್ಲಿಯೇ ಹತ್ತಿಕೊಂಡು ಹೋಗುತ್ತಾರೆ ಎಂದೂ ಅಲ್ಲಿನ ಪರಿಸ್ಥಿತಿಯನ್ನು ವಿವರಿಸಿದರು.</p>.<p>ಇದನ್ನೂ ಓದಿ.. <a href="https://www.prajavani.net/district/tumakuru/private-bus-accident-in-pavagada-palavalli-katte-920724.html"><strong>ಪಾವಗಡದಲ್ಲಿ ಬಸ್ ಭೀಕರ ಅಪಘಾತ: ಕನಿಷ್ಠ 5 ಮಂದಿ ಸಾವು</strong></a><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>ಪಾವಗಡ ತಾಲ್ಲೂಕಿನ ಪಳವಳ್ಳಿ ಕಟ್ಟೆ ಬಳಿ ಶನಿವಾರ ನಡೆದ ಖಾಸಗಿ ಬಸ್ ಅಪಘಾತದಲ್ಲಿ ಗಾಯಗೊಂಡ 26 ಜನರನ್ನು ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಇದರಲ್ಲಿ 10 ಮಂದಿಯನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕಳುಹಿಸಲಾಗಿದೆ.</p>.<p>16 ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.</p>.<p>ಚಾಲಕನಿಗೆ ನಿಧಾನವಾಗಿ ಬಸ್ ಚಲಾಯಿಸುವಂತೆ ಕೂಗಿಕೊಂಡರೂ ಕೇಳಿಸಿಕೊಳ್ಳುತ್ತಿರಲಿಲ್ಲ. ಆಗೊಮ್ಮೆ, ಹೀಗೊಮ್ಮೆ ಮೊಬೈಲ್ನಲ್ಲಿ ಮಾತನಾಡುತ್ತಿದ್ದರು. ಚಾಲಕನ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಅಪಘಾತದಲ್ಲಿ ಗಾಯಗೊಂಡ ವೈ.ಎನ್.ಹೊಸಕೋಟೆಯ ನಿವಾಸಿ ಮಾರಪ್ಪ ಹೇಳಿದರು.</p>.<p>‘ಬಸ್ನಲ್ಲಿ ಸುಮಾರು 70 ರಿಂದ 80 ಜನ ಪ್ರಯಾಣಿಕರಿದ್ದರು. ಬಸ್ನ ಮೇಲ್ಭಾಗದಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಕೂತಿದ್ದರು. ಬಸ್ನಲ್ಲಿದ್ದ ಹಲವರಿಗೆ ಗಾಯಗಳಾಗಿವೆ. ಪಾವಗಡದಿಂದ ಸರಿಯಾದ ಸಮಯಕ್ಕೆ ಸರ್ಕಾರಿ ಬಸ್ಗಳಿಲ್ಲ. ಹಾಗಾಗಿ ಎಲ್ಲರು ಖಾಸಗಿ ಬಸ್ನಲ್ಲಿ ಪ್ರಯಾಣಿಸುತ್ತಾರೆ’ ಎಂದರು.</p>.<p>ಎರಡರಿಂದ ಮೂರು ಗಂಟೆಗೊಮ್ಮೆ ಸರ್ಕಾರಿ ಬಸ್ಗಳು ಬರುತ್ತವೆ. ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ತರಗತಿಗಳಿಗೆ ಹೋಗಬೇಕು ಎಂಬ ಉದ್ದೇಶದಿಂದ ಬಸ್ ತುಂಬಿದ್ದರೂ ಕೂಡ ಅನಿವಾರ್ಯವಾಗಿ ಅದರಲ್ಲಿಯೇ ಹತ್ತಿಕೊಂಡು ಹೋಗುತ್ತಾರೆ ಎಂದೂ ಅಲ್ಲಿನ ಪರಿಸ್ಥಿತಿಯನ್ನು ವಿವರಿಸಿದರು.</p>.<p>ಇದನ್ನೂ ಓದಿ.. <a href="https://www.prajavani.net/district/tumakuru/private-bus-accident-in-pavagada-palavalli-katte-920724.html"><strong>ಪಾವಗಡದಲ್ಲಿ ಬಸ್ ಭೀಕರ ಅಪಘಾತ: ಕನಿಷ್ಠ 5 ಮಂದಿ ಸಾವು</strong></a><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>