<p><strong>ಪಾವಗಡ:</strong> ತಾಲ್ಲೂಕಿನ ಕಡಮಲಕುಂಟೆ ಬಳಿಯ ಪೆನುಗೊಂಡ- ಪಾವಗಡ ರಸ್ತೆಯಲ್ಲಿ ಶನಿವಾರ ಕಾರು- ಆಂಧ್ರಪ್ರದೇಶದ ಸರ್ಕಾರಿ ಬಸ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಕಾರು ಚಾಲಕ ಮೃತಪಟ್ಟಿದ್ದಾರೆ.</p><p>ತಾಲ್ಲೂಕಿನ ಮೇಡಿಹಳ್ಳಿ ಗ್ರಾಮದ ರಾಜಶೇಖರರೆಡ್ಡಿ (38) ಮೃತರು. ಪಟ್ಟಣದಿಂದ ಆಂಧ್ರದ ಧರ್ಮವರಂಗೆ ಹೋಗುತ್ತಿದ್ದ ಇನ್ನೋವಾ ಕಾರು, ಪೆನುಗೊಂಡ ಕಡೆಯಿಂದ ಪಟ್ಟಣದ ಕಡೆಗೆ ಬರುತ್ತಿದ್ದ ಎಪಿಎಸ್ಆರ್ಟಿಸಿ ಬಸ್ ಮುಖಾಮುಖಿಯಾಗಿದೆ. ಬಸ್ನಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿವೆ.</p><p>ಈ ರಸ್ತೆಯಲ್ಲಿ ತಿರುವುಗಳು ಹೆಚ್ಚಿವೆ. ಅನಂತಪುರಂ, ಪೆನುಗೊಂಡ, ಧರ್ಮವರಂ, ಬೆಂಗಳೂರಿಗೆ ಹೋಗುವವರು ಇದೇ ಮಾರ್ಗದಲ್ಲಿ ಸಂಚರಿಸುತ್ತಾರೆ. ರಸ್ತೆಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಿದ್ದು, ಸಾವು–ನೋವುಗಳ ಪ್ರಮಾಣವೂ ಜಾಸ್ತಿಯಾಗುತ್ತಿದೆ. ವೇಗ ನಿಯಂತ್ರಿಸುವ ಸಲುವಾಗಿ ವೈಜ್ಞಾನಿಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕಡಮಲಕುಂಟೆ, ಕೊಡಮಡುಗು, ಟಿ.ಎನ್.ಪೇಟೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾವಗಡ:</strong> ತಾಲ್ಲೂಕಿನ ಕಡಮಲಕುಂಟೆ ಬಳಿಯ ಪೆನುಗೊಂಡ- ಪಾವಗಡ ರಸ್ತೆಯಲ್ಲಿ ಶನಿವಾರ ಕಾರು- ಆಂಧ್ರಪ್ರದೇಶದ ಸರ್ಕಾರಿ ಬಸ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಕಾರು ಚಾಲಕ ಮೃತಪಟ್ಟಿದ್ದಾರೆ.</p><p>ತಾಲ್ಲೂಕಿನ ಮೇಡಿಹಳ್ಳಿ ಗ್ರಾಮದ ರಾಜಶೇಖರರೆಡ್ಡಿ (38) ಮೃತರು. ಪಟ್ಟಣದಿಂದ ಆಂಧ್ರದ ಧರ್ಮವರಂಗೆ ಹೋಗುತ್ತಿದ್ದ ಇನ್ನೋವಾ ಕಾರು, ಪೆನುಗೊಂಡ ಕಡೆಯಿಂದ ಪಟ್ಟಣದ ಕಡೆಗೆ ಬರುತ್ತಿದ್ದ ಎಪಿಎಸ್ಆರ್ಟಿಸಿ ಬಸ್ ಮುಖಾಮುಖಿಯಾಗಿದೆ. ಬಸ್ನಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿವೆ.</p><p>ಈ ರಸ್ತೆಯಲ್ಲಿ ತಿರುವುಗಳು ಹೆಚ್ಚಿವೆ. ಅನಂತಪುರಂ, ಪೆನುಗೊಂಡ, ಧರ್ಮವರಂ, ಬೆಂಗಳೂರಿಗೆ ಹೋಗುವವರು ಇದೇ ಮಾರ್ಗದಲ್ಲಿ ಸಂಚರಿಸುತ್ತಾರೆ. ರಸ್ತೆಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಿದ್ದು, ಸಾವು–ನೋವುಗಳ ಪ್ರಮಾಣವೂ ಜಾಸ್ತಿಯಾಗುತ್ತಿದೆ. ವೇಗ ನಿಯಂತ್ರಿಸುವ ಸಲುವಾಗಿ ವೈಜ್ಞಾನಿಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕಡಮಲಕುಂಟೆ, ಕೊಡಮಡುಗು, ಟಿ.ಎನ್.ಪೇಟೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>