<p>ಪಾವಗಡ: ರೈತರ ಜಮೀನುಗಳಿಗೆ ಹೋಗುವ ನಕಾಶೆ ರಸ್ತೆಯನ್ನು ಒತ್ತುವರಿ ಮಾಡಿಕೊಂಡಿರುವ ಸೋಲಾರ್ ಕಂಪನಿ ಶೀಘ್ರವೇ ಒತ್ತುವರಿ ತೆರವುಗೊಳಿಸಬೇಕು ಎಂದು ಒತ್ತಾಯಿಸಿ ಶುಕ್ರವಾರ ಎಎಪಿ ನೇತೃತ್ವದಲ್ಲಿ ಪೊರಕೆ, ತಮಟೆಗಳೊಂದಿಗೆ ತಹಶೀಲ್ದಾರ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.</p>.<p>ಆಮ್ ಆದ್ಮಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮಾಂಜಿನಪ್ಪ ಮಾತನಾಡಿ, ಚೆನ್ನೈ ಮೂಲದ ಖಾಸಗಿ ಸೋಲಾರ್ ಕಂಪನಿ ತಿಮ್ಮಾಪುರದಿಂದ ಶ್ರೀರಂಗಪುರಕ್ಕೆ ಹಾದು ಹೋಗುವ ನಕಾಶೆ ರಸ್ತೆಯನ್ನು ಒತ್ತುವರಿ ಮಾಡಿಕೊಂಡಿದೆ. ಈ ಬಗ್ಗೆ ಅಧಿಕಾರಿಗಳಿಗೆ ತಿಳಿಸಿದರೂ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಆರೋಪಿಸಿದರು.</p>.<p>ನಕಾಶೆ ರಸ್ತೆಗೆ ಅಡ್ಡಲಾಗಿ ಸೋಲಾರ್ ಕಂಪನಿ ತಡೆಗೋಡೆ ನಿರ್ಮಿಸಿ ರೈತರು, ಕೂಲಿ ಕಾರ್ಮಿಕರು, ಸ್ಥಳೀಯ ಗ್ರಾಮಸ್ಥರು, ಸಾರ್ವಜನಿಕರಿಗೆ ತೊಂದರೆ ನೀಡಲಾಗುತ್ತಿದೆ ಎಂದು ಆರೋಪಿಸಿದರು.</p>.<p>ಪಕ್ಷದ ತಾಲ್ಲೂಕು ಅಧ್ಯಕ್ಷ ತಿಪ್ಪೇಸ್ವಾಮಿ, ಸರ್ಕಾರದ ಸುತ್ತೋಲೆ ಅನ್ವಯ ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸಬೇಕು. ಸೋಲಾರ್ ಕಂಪನಿಯ ಒತ್ತುವರಿಗೆ ಸಹಕಾರ ನೀಡಿದವರಿಗೆ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದರು.</p>.<p>ರೈತರು ಬೇಸಾಯ ಮಾಡಲು ಜಮೀನುಗಳಿಗೆ ಹೋಗಲು ಮತ್ತು ರೈತರ ಜಮೀನುಗಳಲ್ಲಿ ಬೆಳೆಯುವ ದವಸ ದಾನ್ಯ, ತರಕಾರಿ ತರಲು ಎತ್ತಿನ ಗಾಡಿ, ಉಳುಮೆ ಮಾಡುವ ಟ್ರ್ಯಾಕ್ಟರ್ ಇತ್ಯಾದಿ ವಾಹನಗಳು ಓಡಾಡಲು ಅವಕಾಶವಿಲ್ಲದಂತೆ ಪಳವಳ್ಳಿ ಗ್ರಾಮದ ಸರ್ವೆ ನಂ. 371, 374, 375 ರ ಜಮೀನುಗಳಲ್ಲಿ ಹಾದು ಹೋಗುವ ನಕಾಶೆ ರಸ್ತೆಗೆ ತಡೆಗೋಡೆ ಹಾಕಿ ರಸ್ತೆ ಮುಚ್ಚಿರುವುದರಿಂದ ರೈತರು ಬೆಳೆದ ಪಸಲುಗಳನ್ನು ಜಮೀನಿನಿಂದ ಸಾಗಿಸಲೂ ಸಾಧ್ಯವಾಗದೆ ರೈತರು ನಷ್ಟ ಅನುಭವಿಸುವಂತಾಗಿದೆ ಎಂದರು.</p>.<p>ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಗ್ರೇಡ್ 2 ತಹಶೀಲ್ದಾರ್ ಪ್ರಸಾದ್ ಅವರಿಗೆ ಮನವಿ ಸಲ್ಲಿಸಲಾಯಿತು.</p>.<p>ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಎ.ಎನ್ ನಾರಾಯಣ, ಮಹಿಳಾ ಘಟಕದ ಅಧ್ಯಕ್ಷ ಅಕ್ಕಮ್ಮ, ಡಿ.ಹನುಮಂತ, ಆಂಜನೇಯಲು, ಪೋಲೆ ನಾಯ್ಕ, ಈರಪ್ಪ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260418-17-754503089</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪಾವಗಡ: ರೈತರ ಜಮೀನುಗಳಿಗೆ ಹೋಗುವ ನಕಾಶೆ ರಸ್ತೆಯನ್ನು ಒತ್ತುವರಿ ಮಾಡಿಕೊಂಡಿರುವ ಸೋಲಾರ್ ಕಂಪನಿ ಶೀಘ್ರವೇ ಒತ್ತುವರಿ ತೆರವುಗೊಳಿಸಬೇಕು ಎಂದು ಒತ್ತಾಯಿಸಿ ಶುಕ್ರವಾರ ಎಎಪಿ ನೇತೃತ್ವದಲ್ಲಿ ಪೊರಕೆ, ತಮಟೆಗಳೊಂದಿಗೆ ತಹಶೀಲ್ದಾರ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.</p>.<p>ಆಮ್ ಆದ್ಮಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮಾಂಜಿನಪ್ಪ ಮಾತನಾಡಿ, ಚೆನ್ನೈ ಮೂಲದ ಖಾಸಗಿ ಸೋಲಾರ್ ಕಂಪನಿ ತಿಮ್ಮಾಪುರದಿಂದ ಶ್ರೀರಂಗಪುರಕ್ಕೆ ಹಾದು ಹೋಗುವ ನಕಾಶೆ ರಸ್ತೆಯನ್ನು ಒತ್ತುವರಿ ಮಾಡಿಕೊಂಡಿದೆ. ಈ ಬಗ್ಗೆ ಅಧಿಕಾರಿಗಳಿಗೆ ತಿಳಿಸಿದರೂ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಆರೋಪಿಸಿದರು.</p>.<p>ನಕಾಶೆ ರಸ್ತೆಗೆ ಅಡ್ಡಲಾಗಿ ಸೋಲಾರ್ ಕಂಪನಿ ತಡೆಗೋಡೆ ನಿರ್ಮಿಸಿ ರೈತರು, ಕೂಲಿ ಕಾರ್ಮಿಕರು, ಸ್ಥಳೀಯ ಗ್ರಾಮಸ್ಥರು, ಸಾರ್ವಜನಿಕರಿಗೆ ತೊಂದರೆ ನೀಡಲಾಗುತ್ತಿದೆ ಎಂದು ಆರೋಪಿಸಿದರು.</p>.<p>ಪಕ್ಷದ ತಾಲ್ಲೂಕು ಅಧ್ಯಕ್ಷ ತಿಪ್ಪೇಸ್ವಾಮಿ, ಸರ್ಕಾರದ ಸುತ್ತೋಲೆ ಅನ್ವಯ ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸಬೇಕು. ಸೋಲಾರ್ ಕಂಪನಿಯ ಒತ್ತುವರಿಗೆ ಸಹಕಾರ ನೀಡಿದವರಿಗೆ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದರು.</p>.<p>ರೈತರು ಬೇಸಾಯ ಮಾಡಲು ಜಮೀನುಗಳಿಗೆ ಹೋಗಲು ಮತ್ತು ರೈತರ ಜಮೀನುಗಳಲ್ಲಿ ಬೆಳೆಯುವ ದವಸ ದಾನ್ಯ, ತರಕಾರಿ ತರಲು ಎತ್ತಿನ ಗಾಡಿ, ಉಳುಮೆ ಮಾಡುವ ಟ್ರ್ಯಾಕ್ಟರ್ ಇತ್ಯಾದಿ ವಾಹನಗಳು ಓಡಾಡಲು ಅವಕಾಶವಿಲ್ಲದಂತೆ ಪಳವಳ್ಳಿ ಗ್ರಾಮದ ಸರ್ವೆ ನಂ. 371, 374, 375 ರ ಜಮೀನುಗಳಲ್ಲಿ ಹಾದು ಹೋಗುವ ನಕಾಶೆ ರಸ್ತೆಗೆ ತಡೆಗೋಡೆ ಹಾಕಿ ರಸ್ತೆ ಮುಚ್ಚಿರುವುದರಿಂದ ರೈತರು ಬೆಳೆದ ಪಸಲುಗಳನ್ನು ಜಮೀನಿನಿಂದ ಸಾಗಿಸಲೂ ಸಾಧ್ಯವಾಗದೆ ರೈತರು ನಷ್ಟ ಅನುಭವಿಸುವಂತಾಗಿದೆ ಎಂದರು.</p>.<p>ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಗ್ರೇಡ್ 2 ತಹಶೀಲ್ದಾರ್ ಪ್ರಸಾದ್ ಅವರಿಗೆ ಮನವಿ ಸಲ್ಲಿಸಲಾಯಿತು.</p>.<p>ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಎ.ಎನ್ ನಾರಾಯಣ, ಮಹಿಳಾ ಘಟಕದ ಅಧ್ಯಕ್ಷ ಅಕ್ಕಮ್ಮ, ಡಿ.ಹನುಮಂತ, ಆಂಜನೇಯಲು, ಪೋಲೆ ನಾಯ್ಕ, ಈರಪ್ಪ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260418-17-754503089</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>