<p><strong>ಪಾವಗಡ:</strong> ತಾಲ್ಲೂಕಿನ ಕರೇಕ್ಯಾತನಹಳ್ಳಿಯಲ್ಲಿ ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.</p>.<p>ಸಂವಿಧಾನದ ಪೀಠಿಕೆ ಓದುವ ಮೂಲಕ ಕಾರ್ಯಕ್ರಮ ಉದ್ಘಾಟಿಸಲಾಯಿತು.</p>.<p>ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸತ್ಕರಿಸಲಾಯಿತು.</p>.<p>ಶಾಸಕ ಎಚ್.ವಿ.ವೆಂಕಟೇಶ್, ಸಂವಿಧಾನವು ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಎಲ್ಲ ಜಾತಿ, ಧರ್ಮಗಳಿಗೂ ಸಮಾನ ಅವಕಾಶ ನೀಡಿದೆ. ಮೀಸಲಾತಿ ಇರುವುದರಿಂದ ಕೆಳವರ್ಗದ ಬಹುತೇಕ ವಿದ್ಯಾರ್ಥಿಗಳು ಎಂಜಿನಿಯರಿಂಗ್, ಮೆಡಿಕಲ್ ಸೇರಿದಂತೆ ಉನ್ನತ ಶಿಕ್ಷಣ ಪಡೆಯುವಂತಾಯಿತು ಎಂದರು.</p>.<p>ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ, ಮೀಸಲಾತಿ ಸದ್ಭಳಕೆ ಮಾಡಿಕೊಂಡು ಉತ್ತಮ ಸಾಧನೆ ಮಾಡಬೇಕು. ಶಿಕ್ಷಣದಿಂದ ಉನ್ನತಿ ಸಾಧ್ಯ ಎಂದರು.</p>.<p>ತುಮಕೂರು ವಿವಿ ಮಾಜಿ ಸಿಂಡಿಕೇಟ್ ಸದಸ್ಯ ಕೊಟ್ಟ ಶಂಕರ್, ದಲಿತರಿಗೆ ವಿಮೋಚನೆ ದಾರಿ ತೋರಿಸಿದವರೆ ಅಂಬೇಡ್ಕರ್. ಇಂದಿಗೂ ದಲಿತರಿಗೆ ರಾಜಕೀಯವಾಗಿ ಬೆಳೆಯಲು ಸಾಧ್ಯವಾಗಿಲ್ಲ. ರಾಜಕೀಯವು ಕೆಲವು ವರ್ಗಗಳಿಗೆ ಮಾತ್ರ ಸೀಮಿತವಾಗಿದೆ ಎಂದು ಹೇಳಿದರು.</p>.<p>ಎಸ್ಎಫ್ಐ ಮಾಜಿ ಜಿಲ್ಲಾಧ್ಯಕ್ಷ ಈ.ಶಿವಣ್ಣ ಮಾತನಾಡಿ, ದೇಶದಲ್ಲಿ ದಲಿತರ ಮೇಲೆ ವ್ಯಾಪಕ ದಬ್ಬಾಳಿಕೆ, ದೌರ್ಜನ್ಯ ನಡೆದಿವೆ. ದಲಿತರ ಅಭಿವೃದ್ಧಿಗಾಗಿ ಇದುವರೆಗೂ ವಿಶೇಷ ಸಂಸತ್ ಅಧಿವೇಶನ ನಡೆದಿಲ್ಲ ಎಂದು ದೂರಿದರು.</p>.<p>ಕೆಂಚರಾಯ, ನಾಗರಾಜ, ಕಾರ್ಯದರ್ಶಿ ಸಿ. ಶಿವಣ್ಣ, ಅಧ್ಯಕ್ಷ ಕೆ.ಎಸ್.ಶಿವಕುಮಾರ್, ವಕೀಲ ಕೆ.ಒ.ಶಿವಣ್ಣ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಸ್ವಾರಣ್ಣ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಸುನಿತ, ಸಿ.ಕೆ.ತಿಪ್ಪೇಸ್ವಾಮಿ, ವೆಂಕಟರವಣಪ್ಪ, ಟಿ. ಹನುಮಂತರಾಯ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260522-17-909853377</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾವಗಡ:</strong> ತಾಲ್ಲೂಕಿನ ಕರೇಕ್ಯಾತನಹಳ್ಳಿಯಲ್ಲಿ ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.</p>.<p>ಸಂವಿಧಾನದ ಪೀಠಿಕೆ ಓದುವ ಮೂಲಕ ಕಾರ್ಯಕ್ರಮ ಉದ್ಘಾಟಿಸಲಾಯಿತು.</p>.<p>ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸತ್ಕರಿಸಲಾಯಿತು.</p>.<p>ಶಾಸಕ ಎಚ್.ವಿ.ವೆಂಕಟೇಶ್, ಸಂವಿಧಾನವು ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಎಲ್ಲ ಜಾತಿ, ಧರ್ಮಗಳಿಗೂ ಸಮಾನ ಅವಕಾಶ ನೀಡಿದೆ. ಮೀಸಲಾತಿ ಇರುವುದರಿಂದ ಕೆಳವರ್ಗದ ಬಹುತೇಕ ವಿದ್ಯಾರ್ಥಿಗಳು ಎಂಜಿನಿಯರಿಂಗ್, ಮೆಡಿಕಲ್ ಸೇರಿದಂತೆ ಉನ್ನತ ಶಿಕ್ಷಣ ಪಡೆಯುವಂತಾಯಿತು ಎಂದರು.</p>.<p>ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ, ಮೀಸಲಾತಿ ಸದ್ಭಳಕೆ ಮಾಡಿಕೊಂಡು ಉತ್ತಮ ಸಾಧನೆ ಮಾಡಬೇಕು. ಶಿಕ್ಷಣದಿಂದ ಉನ್ನತಿ ಸಾಧ್ಯ ಎಂದರು.</p>.<p>ತುಮಕೂರು ವಿವಿ ಮಾಜಿ ಸಿಂಡಿಕೇಟ್ ಸದಸ್ಯ ಕೊಟ್ಟ ಶಂಕರ್, ದಲಿತರಿಗೆ ವಿಮೋಚನೆ ದಾರಿ ತೋರಿಸಿದವರೆ ಅಂಬೇಡ್ಕರ್. ಇಂದಿಗೂ ದಲಿತರಿಗೆ ರಾಜಕೀಯವಾಗಿ ಬೆಳೆಯಲು ಸಾಧ್ಯವಾಗಿಲ್ಲ. ರಾಜಕೀಯವು ಕೆಲವು ವರ್ಗಗಳಿಗೆ ಮಾತ್ರ ಸೀಮಿತವಾಗಿದೆ ಎಂದು ಹೇಳಿದರು.</p>.<p>ಎಸ್ಎಫ್ಐ ಮಾಜಿ ಜಿಲ್ಲಾಧ್ಯಕ್ಷ ಈ.ಶಿವಣ್ಣ ಮಾತನಾಡಿ, ದೇಶದಲ್ಲಿ ದಲಿತರ ಮೇಲೆ ವ್ಯಾಪಕ ದಬ್ಬಾಳಿಕೆ, ದೌರ್ಜನ್ಯ ನಡೆದಿವೆ. ದಲಿತರ ಅಭಿವೃದ್ಧಿಗಾಗಿ ಇದುವರೆಗೂ ವಿಶೇಷ ಸಂಸತ್ ಅಧಿವೇಶನ ನಡೆದಿಲ್ಲ ಎಂದು ದೂರಿದರು.</p>.<p>ಕೆಂಚರಾಯ, ನಾಗರಾಜ, ಕಾರ್ಯದರ್ಶಿ ಸಿ. ಶಿವಣ್ಣ, ಅಧ್ಯಕ್ಷ ಕೆ.ಎಸ್.ಶಿವಕುಮಾರ್, ವಕೀಲ ಕೆ.ಒ.ಶಿವಣ್ಣ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಸ್ವಾರಣ್ಣ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಸುನಿತ, ಸಿ.ಕೆ.ತಿಪ್ಪೇಸ್ವಾಮಿ, ವೆಂಕಟರವಣಪ್ಪ, ಟಿ. ಹನುಮಂತರಾಯ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260522-17-909853377</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>