ತಾಲ್ಲೂಕಿನ ರಾಪ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗೇನಹಳ್ಳಿ ಗ್ರಾಮದ ಯುವಕ ನರೇಂದ್ರ ಅವರು ತಮ್ಮ ಗ್ರಾಮಕ್ಕೆ ಸಮರ್ಪಕ ರಸ್ತೆ ಸೌಕರ್ಯ, ಬಸ್ ಸಂಚಾರ ಕಲ್ಪಿಸುವಂತೆ ಒತ್ತಾಯಿಸಿದ್ದಾರೆ. ಯಾರೊಬ್ಬರೂ ಗ್ರಾಮಕ್ಕೆ ಸೌಕರ್ಯ ಕಲ್ಪಿಸಲು ಗಮನ ಹರಿಸುತ್ತಿಲ್ಲ ಎಂದು ಬಗರ್ ಹುಕುಂ ಸಭೆ ಮುಗಿಸಿಕೊಂಡು ಹೊರ ಬರುತ್ತಿದ್ದ ಶಾಸಕರನ್ನು ಪ್ರಶ್ನಿಸಿದ್ದಾರೆ.