<p><strong>ಪಾವಗಡ:</strong> ಪುರಸಭೆ ಅಧಿಕಾರಿಗಳು, ಸಿಬ್ಬಂದಿ ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು ಎಂದು ಪುರಸಭೆ ಅಧ್ಯಕ್ಷ ರಾಜೇಶ್ ತಿಳಿಸಿದರು.</p>.<p>ಪಟ್ಟಣದಲ್ಲಿ ಬುಧವಾರ ನಡೆದ ಪುರಸಭೆ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಕಂದಾಯ ವಸೂಲಿ, ಸ್ವಚ್ಛತೆ, ಕುಡಿಯುವ ನೀರಿನ ಪೂರೈಕೆ ವಿಚಾರದಲ್ಲಿ ಸಿಬ್ಬಂದಿ, ಅಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು. ಪಟ್ಟಣದ ಎಲ್ಲ ಬಡಾವಣೆಗಳ ಮೂಲ ಸವಲತ್ತುಗಳ ವಿಚಾರಕ್ಕೆ ಆದ್ಯತೆ ನೀಡಬೇಕು ಎಂದರು.</p>.<p>ಅಧಿಕಾರಿಗಳು ಸರಿಯಾದ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿಲ್ಲ. ಕಂದಾಯ ವಸೂಲಿ ಮಾಡುತ್ತಿಲ್ಲ, ಇದರಿಂದಾಗಿ ಲಕ್ಷಾಂತರ ರೂಪಾಯಿ ಕಂದಾಯ ಬಾಕಿ ಇದೆ. ಪುರಸಭೆ ಆದಾಯ ಕಡಿಮೆಯಾಗುತ್ತಿದೆ. ಸಮರ್ಪಕವಾಗಿ ಕೆಲಸ ಮಾಡದಿದ್ದಲ್ಲಿ ಸೂಕ್ತ ಕ್ರಮ ಕೈಗೊಳ್ಳಲು ಶಿಫಾರಸು ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.</p>.<p>ವಾಣಿಜ್ಯ ಮಳಿಗೆಗಳ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಇದರಿಂದ ಪುರಸಭೆಗೆ ಹೆಚ್ಚುವರಿ ಆದಾಯ ಬಂದಿದೆ. ಈ ಆದಾಯದಿಂದ ಪುರಸಭಾ ವ್ಯಾಪ್ತಿಯಲ್ಲಿ ಹಲವು ಅಬಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬಹುದು ಎಂದರು.</p>.<p>ವಾಣಿಜ್ಯ ಮಳಿಗೆಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹೋಗಿರುವ ಅಂಗಡಿ ಮಾಲೀಕರಿಗೆ ಪುರಸಭೆಯಿಂದ ಯಾವುದೇ ಸೌಲಭ್ಯಗಳನ್ನು ನೀಡಬಾರದು ಎಂದು ಸದಸ್ಯರು ಒತ್ತಾಯಿಸಿದರು.</p>.<p>ಚಳ್ಳಕೆರೆ ವೃತ್ತಕ್ಕೆ ಪುನೀತ್ ರಾಜಕುಮಾರ್ ವೃತ್ತ ಎಂದು ಹೆಸರಿಡಲು ಮಾಡಲು ತೀರ್ಮಾನಿಸಲಾಯಿತು.</p>.<p>ಉಪಾಧ್ಯಕ್ಷೆ ಗೀತಾ ಹನುಮಂತರಾಯಪ್ಪ, ಮುಖ್ಯಾಧಿಕಾರಿ ಜಾಫರ್ ಶರೀಫ್, ಸದಸ್ಯ ಸುದೇಶ್ ಬಾಬು, ವೇಲುರಾಜು,ರವಿ, ವೆಂಕಟರಮಣಪ್ಪ, ರಾಮಾಂಜಿನಪ್ಪ ವಿಜಯ್ ಕುಮಾರ್, ಮೊಹಮದ್ ಇಮ್ರಾನ್, ಗೊರ್ತಿನಾಗರಾಜ್, ಲಕ್ಷ್ಮಿ ಪ್ರಮೋದ್, ಜಾಹ್ನವಿ ವಿಶ್ವನಾಥ್, ಗಂಗಮ್ಮ ಗಂಗಾಧರ್, ರಾಮಲಿಂಗ, ಶ್ರೀನಿವಾಸ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾವಗಡ:</strong> ಪುರಸಭೆ ಅಧಿಕಾರಿಗಳು, ಸಿಬ್ಬಂದಿ ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು ಎಂದು ಪುರಸಭೆ ಅಧ್ಯಕ್ಷ ರಾಜೇಶ್ ತಿಳಿಸಿದರು.</p>.<p>ಪಟ್ಟಣದಲ್ಲಿ ಬುಧವಾರ ನಡೆದ ಪುರಸಭೆ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಕಂದಾಯ ವಸೂಲಿ, ಸ್ವಚ್ಛತೆ, ಕುಡಿಯುವ ನೀರಿನ ಪೂರೈಕೆ ವಿಚಾರದಲ್ಲಿ ಸಿಬ್ಬಂದಿ, ಅಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು. ಪಟ್ಟಣದ ಎಲ್ಲ ಬಡಾವಣೆಗಳ ಮೂಲ ಸವಲತ್ತುಗಳ ವಿಚಾರಕ್ಕೆ ಆದ್ಯತೆ ನೀಡಬೇಕು ಎಂದರು.</p>.<p>ಅಧಿಕಾರಿಗಳು ಸರಿಯಾದ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿಲ್ಲ. ಕಂದಾಯ ವಸೂಲಿ ಮಾಡುತ್ತಿಲ್ಲ, ಇದರಿಂದಾಗಿ ಲಕ್ಷಾಂತರ ರೂಪಾಯಿ ಕಂದಾಯ ಬಾಕಿ ಇದೆ. ಪುರಸಭೆ ಆದಾಯ ಕಡಿಮೆಯಾಗುತ್ತಿದೆ. ಸಮರ್ಪಕವಾಗಿ ಕೆಲಸ ಮಾಡದಿದ್ದಲ್ಲಿ ಸೂಕ್ತ ಕ್ರಮ ಕೈಗೊಳ್ಳಲು ಶಿಫಾರಸು ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.</p>.<p>ವಾಣಿಜ್ಯ ಮಳಿಗೆಗಳ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಇದರಿಂದ ಪುರಸಭೆಗೆ ಹೆಚ್ಚುವರಿ ಆದಾಯ ಬಂದಿದೆ. ಈ ಆದಾಯದಿಂದ ಪುರಸಭಾ ವ್ಯಾಪ್ತಿಯಲ್ಲಿ ಹಲವು ಅಬಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬಹುದು ಎಂದರು.</p>.<p>ವಾಣಿಜ್ಯ ಮಳಿಗೆಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹೋಗಿರುವ ಅಂಗಡಿ ಮಾಲೀಕರಿಗೆ ಪುರಸಭೆಯಿಂದ ಯಾವುದೇ ಸೌಲಭ್ಯಗಳನ್ನು ನೀಡಬಾರದು ಎಂದು ಸದಸ್ಯರು ಒತ್ತಾಯಿಸಿದರು.</p>.<p>ಚಳ್ಳಕೆರೆ ವೃತ್ತಕ್ಕೆ ಪುನೀತ್ ರಾಜಕುಮಾರ್ ವೃತ್ತ ಎಂದು ಹೆಸರಿಡಲು ಮಾಡಲು ತೀರ್ಮಾನಿಸಲಾಯಿತು.</p>.<p>ಉಪಾಧ್ಯಕ್ಷೆ ಗೀತಾ ಹನುಮಂತರಾಯಪ್ಪ, ಮುಖ್ಯಾಧಿಕಾರಿ ಜಾಫರ್ ಶರೀಫ್, ಸದಸ್ಯ ಸುದೇಶ್ ಬಾಬು, ವೇಲುರಾಜು,ರವಿ, ವೆಂಕಟರಮಣಪ್ಪ, ರಾಮಾಂಜಿನಪ್ಪ ವಿಜಯ್ ಕುಮಾರ್, ಮೊಹಮದ್ ಇಮ್ರಾನ್, ಗೊರ್ತಿನಾಗರಾಜ್, ಲಕ್ಷ್ಮಿ ಪ್ರಮೋದ್, ಜಾಹ್ನವಿ ವಿಶ್ವನಾಥ್, ಗಂಗಮ್ಮ ಗಂಗಾಧರ್, ರಾಮಲಿಂಗ, ಶ್ರೀನಿವಾಸ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>