<p><strong>ಪಾವಗಡ:</strong> ತಾಲ್ಲೂಕಿನ ಪಿ. ವಡ್ಡರಹಟ್ಟಿ ಗ್ರಾಮಕ್ಕೆ ಶುಕ್ರವಾರ ತಾಲ್ಲೂಕು ಕಾರ್ಯನಿರ್ವಹಣಾ ಅಧಿಕಾರಿ ಮಧುಸೂದನ್ ಭೇಟಿ ನೀಡಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಪರಿಶೀಲನೆ ನಡೆಸಿದರು.</p>.<p>ಪಿ. ವಡ್ಡರಹಟ್ಟಿ ಗ್ರಾಮಸ್ಥರು ಗುರುವಾರ ಕುಡಿಯುವ ನೀರನ್ನು ಪೂರೈಸುವಂತೆ ಒತ್ತಾಯಿಸಿ ಬ್ಯಾಡನೂರು ಗ್ರಾಮ ಪಂಚಾಯಿತಿ ಮುಂದೆ ಖಾಲಿ ಬಿಂದಿಗೆಗಳನ್ನು ಹಿಡಿದು ಪ್ರತಿಭಟನೆ ನಡೆಸಿದ ಬಗ್ಗೆ ‘ಪ್ರಜಾವಾಣಿ’ಯಲ್ಲಿ ಶುಕ್ರವಾರ ವರದಿ ಪ್ರಕಟವಾಗಿತ್ತು.</p>.<p>ತಾಲ್ಲೂಕು ಕಾರ್ಯನಿರ್ವಾಹಣಾ ಅಧಿಕಾರಿ ಮಧುಸೂದನ್ ಮಾತನಾಡಿ, ಪಿ. ವಡ್ಡರಹಟ್ಟಿ ಗ್ರಾಮಕ್ಕೆ ಸಿಬ್ಬಂದಿಗಳೊಂದಿಗೆ ಭೇಟಿ ನೀಡಿ, ನೀರಿನ ಸಮಸ್ಯೆ ಬಗ್ಗೆ ಗ್ರಾಮಸ್ಥರಿಂದ ಮಾಹಿತಿ ಪಡೆದರು.</p>.<p>ಪೈಪ್ಲೈನ್ಗೆ ಅನಧಿಕೃತವಾಗಿ ಅಳವಡಿಸಲಾಗಿದ್ದ ನಲ್ಲಿಗಳನ್ನು ತೆರವುಗೊಳಿಸುವಂತೆ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸಿದರು. ಓವರ್ ಹೆಡ್ ಟ್ಯಾಂಕ್ಗೆ ಸಂಪರ್ಕ ಕಲ್ಪಿಸುವ ಮುಖ್ಯ ಪೈಪ್ಲೈನ್ಗೆ ಯಾವುದೇ ಸಂಪರ್ಕ ನೀಡಬಾರದು ಎಂದು ತಿಳಿಸಿದರು.</p>.<p>ಮುಖ್ಯ ಪೈಪ್ಲೈನ್ನಿಂದ ನಲ್ಲಿಗಳಿಗೆ ಸಂಪರ್ಕ ತೆಗೆದುಕೊಂಡಲ್ಲಿ ಓವರ್ ಹೆಡ್ ಟ್ಯಾಂಕ್ಗೆ ನೀರು ಹೋಗುವುದಿಲ್ಲ. ಇದರಿಂದ ಸಮಸ್ಯೆಯಾಗಿದೆ. ಕುಡಿಯುವ ನೀರಿಗಾಗಿ ಜೆಜೆಎಂ ಸಂಪರ್ಕ ಕೊಡಿಸಲಾಗುವುದು. ಕುಡಿಯುವ ನೀರಿನ ಶುದ್ಧೀಕರಣ ಘಟಕ ದುರಸ್ತಿ ಮಾಡಿಸಿ ಕುಡಿಯುವ ನೀರು ಪೂರೈಸುವಂತೆ ಸೂಚಿಸಿದರು.</p>.<p>ಬ್ಯಾಡನೂರು ಗ್ರಾಮ ಪಂಚಾಯಿತಿ ಪಿಡಿಒ ರಂಗಸ್ವಾಮಿ ಮಾತನಾಡಿ, ಪಿ. ವಡ್ಡರಹಟ್ಟಿ ಗ್ರಾಮಕ್ಕೆ ನೀರಿನ ಸಂಪರ್ಕ ಕಲ್ಪಿಸುವ ಮುಖ್ಯ ಪೈಪ್ಲೈನ್ನಿಂದ ಸಂಪರ್ಕ ಪಡೆದುಕೊಂಡಿದ್ದರು. ತಕ್ಷಣ ಅನಧಿಕೃತವಾಗಿ ನೀರು ಪಡೆಯುತ್ತಿರುವ ಸಂಪರ್ಕ ಸ್ಥಗಿತಗೊಳಿಸಲಾಗಿದೆ. ಸದ್ಯ ಸಮಸ್ಯೆ ಬಗೆಹರಿಸಲಾಗಿದೆ ಎಂದು ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-17-993049076</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾವಗಡ:</strong> ತಾಲ್ಲೂಕಿನ ಪಿ. ವಡ್ಡರಹಟ್ಟಿ ಗ್ರಾಮಕ್ಕೆ ಶುಕ್ರವಾರ ತಾಲ್ಲೂಕು ಕಾರ್ಯನಿರ್ವಹಣಾ ಅಧಿಕಾರಿ ಮಧುಸೂದನ್ ಭೇಟಿ ನೀಡಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಪರಿಶೀಲನೆ ನಡೆಸಿದರು.</p>.<p>ಪಿ. ವಡ್ಡರಹಟ್ಟಿ ಗ್ರಾಮಸ್ಥರು ಗುರುವಾರ ಕುಡಿಯುವ ನೀರನ್ನು ಪೂರೈಸುವಂತೆ ಒತ್ತಾಯಿಸಿ ಬ್ಯಾಡನೂರು ಗ್ರಾಮ ಪಂಚಾಯಿತಿ ಮುಂದೆ ಖಾಲಿ ಬಿಂದಿಗೆಗಳನ್ನು ಹಿಡಿದು ಪ್ರತಿಭಟನೆ ನಡೆಸಿದ ಬಗ್ಗೆ ‘ಪ್ರಜಾವಾಣಿ’ಯಲ್ಲಿ ಶುಕ್ರವಾರ ವರದಿ ಪ್ರಕಟವಾಗಿತ್ತು.</p>.<p>ತಾಲ್ಲೂಕು ಕಾರ್ಯನಿರ್ವಾಹಣಾ ಅಧಿಕಾರಿ ಮಧುಸೂದನ್ ಮಾತನಾಡಿ, ಪಿ. ವಡ್ಡರಹಟ್ಟಿ ಗ್ರಾಮಕ್ಕೆ ಸಿಬ್ಬಂದಿಗಳೊಂದಿಗೆ ಭೇಟಿ ನೀಡಿ, ನೀರಿನ ಸಮಸ್ಯೆ ಬಗ್ಗೆ ಗ್ರಾಮಸ್ಥರಿಂದ ಮಾಹಿತಿ ಪಡೆದರು.</p>.<p>ಪೈಪ್ಲೈನ್ಗೆ ಅನಧಿಕೃತವಾಗಿ ಅಳವಡಿಸಲಾಗಿದ್ದ ನಲ್ಲಿಗಳನ್ನು ತೆರವುಗೊಳಿಸುವಂತೆ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸಿದರು. ಓವರ್ ಹೆಡ್ ಟ್ಯಾಂಕ್ಗೆ ಸಂಪರ್ಕ ಕಲ್ಪಿಸುವ ಮುಖ್ಯ ಪೈಪ್ಲೈನ್ಗೆ ಯಾವುದೇ ಸಂಪರ್ಕ ನೀಡಬಾರದು ಎಂದು ತಿಳಿಸಿದರು.</p>.<p>ಮುಖ್ಯ ಪೈಪ್ಲೈನ್ನಿಂದ ನಲ್ಲಿಗಳಿಗೆ ಸಂಪರ್ಕ ತೆಗೆದುಕೊಂಡಲ್ಲಿ ಓವರ್ ಹೆಡ್ ಟ್ಯಾಂಕ್ಗೆ ನೀರು ಹೋಗುವುದಿಲ್ಲ. ಇದರಿಂದ ಸಮಸ್ಯೆಯಾಗಿದೆ. ಕುಡಿಯುವ ನೀರಿಗಾಗಿ ಜೆಜೆಎಂ ಸಂಪರ್ಕ ಕೊಡಿಸಲಾಗುವುದು. ಕುಡಿಯುವ ನೀರಿನ ಶುದ್ಧೀಕರಣ ಘಟಕ ದುರಸ್ತಿ ಮಾಡಿಸಿ ಕುಡಿಯುವ ನೀರು ಪೂರೈಸುವಂತೆ ಸೂಚಿಸಿದರು.</p>.<p>ಬ್ಯಾಡನೂರು ಗ್ರಾಮ ಪಂಚಾಯಿತಿ ಪಿಡಿಒ ರಂಗಸ್ವಾಮಿ ಮಾತನಾಡಿ, ಪಿ. ವಡ್ಡರಹಟ್ಟಿ ಗ್ರಾಮಕ್ಕೆ ನೀರಿನ ಸಂಪರ್ಕ ಕಲ್ಪಿಸುವ ಮುಖ್ಯ ಪೈಪ್ಲೈನ್ನಿಂದ ಸಂಪರ್ಕ ಪಡೆದುಕೊಂಡಿದ್ದರು. ತಕ್ಷಣ ಅನಧಿಕೃತವಾಗಿ ನೀರು ಪಡೆಯುತ್ತಿರುವ ಸಂಪರ್ಕ ಸ್ಥಗಿತಗೊಳಿಸಲಾಗಿದೆ. ಸದ್ಯ ಸಮಸ್ಯೆ ಬಗೆಹರಿಸಲಾಗಿದೆ ಎಂದು ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-17-993049076</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>