<p><strong>ಪಾವಗಡ:</strong> ತಾಲ್ಲೂಕಿನಲ್ಲಿ ಉತ್ತಮ ಅಭಿವೃದ್ಧಿ ಕಾರ್ಯ ನಡೆಯುತ್ತಿದ್ದರೂ ಅನಗತ್ಯವಾಗಿ ಇಲ್ಲ ಸಲ್ಲದ ಆರೋಪ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಸುಜಿತ್ ತಿಳಿಸಿದರು.</p>.<p>ಪಟ್ಟಣದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಕಳೆದ ಎರಡು ದಿನಗಳ ಹಿಂದೆ ಜೆಡಿಎಸ್ ನಡೆಸಿದ ಪ್ರತಿಭಟನೆಯಲ್ಲಿ ಕೆಲ ಮುಖಂಡರು ಶಾಸಕ ಎಚ್.ವಿ.ವೆಂಕಟೇಶ್ ಹಾಗೂ ಮಾಜಿ ಸಚಿವ ವೆಂಕಟರಮಣಪ್ಪ ಅವರ ವಿರುದ್ಧ ಮಾಡಿರುವ ಆರೋಪಗಳು ಸತ್ಯಕ್ಕೆ ದೂರವಾಗಿವೆ.</p>.<p>ತಾಲ್ಲೂಕಿನಲ್ಲಿ ನೂರಾರು ಕೋಟಿ ರೂಪಾಯಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಮೂರು ವರ್ಷಗಳಿಂದ ತಾಲ್ಲೂಕಿನ ಅಭಿವೃದ್ಧಿಗಾಗಿ ಹೆಚ್ಚಿನ ಅನುದಾನ ತರಲಾಗಿದೆ. ‘ಕಾಂಗ್ರೆಸ್ ಕಾರ್ಯಕರ್ತರು ಗುಂಡಾವರ್ತನೆ ಮಾಡುತ್ತಿದ್ದಾರೆ’ ಎಂಬ ಜೆಡಿಎಸ್ ಮುಖಂಡರ ಆರೋಪ ಖಂಡನೀಯ ಎಂದು ತಿಳಿಸಿದರು.</p>.<p>ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಮಾಂಜಿನಪ್ಪ ಮಾತನಾಡಿ, ಮೂರು ವರ್ಷಗಳಿಂದ ಜೆಡಿಎಸ್ ಮುಖಂಡರು ಮೌನವಾಗಿದ್ದು, ಇದೀಗ ಚುನಾವಣೆ ದೃಷ್ಟಿಯಿಂದ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ದೂರಿದರು.</p>.<p>ಮುಕಂಡ ಓಂಕಾರ ನಾಯಕ, ನಗರ ಘಟಕದ ಅಧ್ಯಕ್ಷ ನವೀನ್, ಸಿ.ಕೆ.ಪುರ ವಿಎಸ್ಎಸ್ಎನ್ ಸದಸ್ಯ ಚಿತ್ತಗಾನಹಳ್ಳಿ ಚಂದ್ರು ಮಾತನಾಡಿದರು.</p>.<p>ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ರಮೇಶ್, ಹನುಮೇಶ್ ದಾಸ್, ಪಿ.ಎಲ್ ಮಣಿ, ಪಳವಳ್ಳಿ ಶಿವಣ್ಣ, ಸುರೇಶ್, ರಂಜಿತ್ ಕುಮಾರ್, ಮೂರ್ತಿ, ಹರೀಶ್, ಹರಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-17-103290282</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾವಗಡ:</strong> ತಾಲ್ಲೂಕಿನಲ್ಲಿ ಉತ್ತಮ ಅಭಿವೃದ್ಧಿ ಕಾರ್ಯ ನಡೆಯುತ್ತಿದ್ದರೂ ಅನಗತ್ಯವಾಗಿ ಇಲ್ಲ ಸಲ್ಲದ ಆರೋಪ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಸುಜಿತ್ ತಿಳಿಸಿದರು.</p>.<p>ಪಟ್ಟಣದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಕಳೆದ ಎರಡು ದಿನಗಳ ಹಿಂದೆ ಜೆಡಿಎಸ್ ನಡೆಸಿದ ಪ್ರತಿಭಟನೆಯಲ್ಲಿ ಕೆಲ ಮುಖಂಡರು ಶಾಸಕ ಎಚ್.ವಿ.ವೆಂಕಟೇಶ್ ಹಾಗೂ ಮಾಜಿ ಸಚಿವ ವೆಂಕಟರಮಣಪ್ಪ ಅವರ ವಿರುದ್ಧ ಮಾಡಿರುವ ಆರೋಪಗಳು ಸತ್ಯಕ್ಕೆ ದೂರವಾಗಿವೆ.</p>.<p>ತಾಲ್ಲೂಕಿನಲ್ಲಿ ನೂರಾರು ಕೋಟಿ ರೂಪಾಯಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಮೂರು ವರ್ಷಗಳಿಂದ ತಾಲ್ಲೂಕಿನ ಅಭಿವೃದ್ಧಿಗಾಗಿ ಹೆಚ್ಚಿನ ಅನುದಾನ ತರಲಾಗಿದೆ. ‘ಕಾಂಗ್ರೆಸ್ ಕಾರ್ಯಕರ್ತರು ಗುಂಡಾವರ್ತನೆ ಮಾಡುತ್ತಿದ್ದಾರೆ’ ಎಂಬ ಜೆಡಿಎಸ್ ಮುಖಂಡರ ಆರೋಪ ಖಂಡನೀಯ ಎಂದು ತಿಳಿಸಿದರು.</p>.<p>ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಮಾಂಜಿನಪ್ಪ ಮಾತನಾಡಿ, ಮೂರು ವರ್ಷಗಳಿಂದ ಜೆಡಿಎಸ್ ಮುಖಂಡರು ಮೌನವಾಗಿದ್ದು, ಇದೀಗ ಚುನಾವಣೆ ದೃಷ್ಟಿಯಿಂದ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ದೂರಿದರು.</p>.<p>ಮುಕಂಡ ಓಂಕಾರ ನಾಯಕ, ನಗರ ಘಟಕದ ಅಧ್ಯಕ್ಷ ನವೀನ್, ಸಿ.ಕೆ.ಪುರ ವಿಎಸ್ಎಸ್ಎನ್ ಸದಸ್ಯ ಚಿತ್ತಗಾನಹಳ್ಳಿ ಚಂದ್ರು ಮಾತನಾಡಿದರು.</p>.<p>ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ರಮೇಶ್, ಹನುಮೇಶ್ ದಾಸ್, ಪಿ.ಎಲ್ ಮಣಿ, ಪಳವಳ್ಳಿ ಶಿವಣ್ಣ, ಸುರೇಶ್, ರಂಜಿತ್ ಕುಮಾರ್, ಮೂರ್ತಿ, ಹರೀಶ್, ಹರಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-17-103290282</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>