<p>ಪಾವಗಡ: ಪಟ್ಟಣದ ಪೊಲೀಸ್ ಠಾಣಾ ಆವರಣದಲ್ಲಿ ಭಾನುವಾರ ಪರಿಶಿಷ್ಟರ ಕುಂದುಕೊರತೆ ಸಭೆ ನಡೆಯಿತು.</p>.<p>ಯಾವುದೇ ಕಾರ್ಯಕ್ರಮಗಳಿಗೆ ಡಿ.ಜೆ.ಗೆ ಅನುಮತಿ ನೀಡಬಾರದು. ಡಿಜೆ ಇಂದ ಸಮಸ್ಯೆಯಾಗುತ್ತದೆ ಎಂದು ಬೇಕರಿ ನಾಗರಾಜು ಒತ್ತಾಯಿಸಿದರು.</p>.<p>ಗ್ರಾಮೀಣ ಬಾಗದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಇದರಿಂದ ಗ್ರಾಮೀಣ ಭಾಗದಲ್ಲಿ ಜಗಳಗಳು ಹೆಚ್ಚುತ್ತಿವೆ. ಹೊಸಹಳ್ಳಿ ಗ್ರಾಮದಲ್ಲಿ ಶಾಲೆಯ ಹತ್ತಿರ ಮದ್ಯ ಮಾರಾಟ ಮಾಡಲಾಗುತ್ತಿದೆ. ಅಧಿಕಾರಿಗಳು ಕೂಡಲೇ ಈ ಬಗ್ಗೆ ಕ್ರಮ ಜರುಗಸಬೇಕು ಎಂದು ನಲಿಗಾನಹಳ್ಳಿ ಮಂಜುನಾಥ್ ಒತ್ತಾಯಿಸಿದರು.</p>.<p>ತಿರುಮಣಿ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮರಳು ಸಾಗಿಸಲಾಗುತ್ತಿದೆ. ಇಸ್ಪೀಟ್ ಜೂಜಾಟ ಹೆಚ್ಚಿದೆ. ಜೂಜಾಟ, ಮರಳು ಸಾಗಣೆಗೆ ಕಡಿವಾಣ ಹಾಕಬೇಕು ಎಂದು ಆಪ್ಬಂಡೆ ಗೋಪಾಲ್ ಆಗ್ರಹಿಸಿದರು.</p>.<p>ಡಿವೈಎಸ್ಪಿ ಜಿ. ಮಂಜುನಾಥ್ ಮಾತನಾಡಿ, ಎಲ್ಲ ದೂರುಗಳ ಬಗ್ಗೆ ಶೀಘ್ರ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.</p>.<p>ಇನ್ಸ್ಪೆಕ್ಟರ್ ಕೆ. ಸುರೇಶ್, ಗ್ರಾಮೀಣ ಭಾಗದ ಬೀಟ್ ಸಿಬ್ಬಂದಿಗೆ ಅಲ್ಲಿನ ಸಂಪೂರ್ಣ ಚಟುವಟಿಕೆ ಕಲೆಹಾಕುವಂತೆ ತಿಳಿಸಲಾಗಿದೆ. ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಸೂಕ್ತ ಕ್ರಮ ತೆಗೆದುಕೊಳ್ಳಲಾಗಿದೆ ಎಂದರು.</p>.<p>ಮುಖಂಡ ವೆಂಕಟೇಶಪ್ಪ, ಗುಟ್ಟಹಳ್ಳಿ ಅಂಜಪ್ಪ, ನಲಿಗಾನಹಳ್ಳಿ ಮಂಜುನಾಥ್, ಪಾತಣ್ಣ, ಆಪ್ ಬಂಡೆ ಗೋಪಾಲ್, ಮೀನಕುಂಟನಹಳ್ಳಿ ನರಸಿಂಹಪ್ಪ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260413-17-414701468</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪಾವಗಡ: ಪಟ್ಟಣದ ಪೊಲೀಸ್ ಠಾಣಾ ಆವರಣದಲ್ಲಿ ಭಾನುವಾರ ಪರಿಶಿಷ್ಟರ ಕುಂದುಕೊರತೆ ಸಭೆ ನಡೆಯಿತು.</p>.<p>ಯಾವುದೇ ಕಾರ್ಯಕ್ರಮಗಳಿಗೆ ಡಿ.ಜೆ.ಗೆ ಅನುಮತಿ ನೀಡಬಾರದು. ಡಿಜೆ ಇಂದ ಸಮಸ್ಯೆಯಾಗುತ್ತದೆ ಎಂದು ಬೇಕರಿ ನಾಗರಾಜು ಒತ್ತಾಯಿಸಿದರು.</p>.<p>ಗ್ರಾಮೀಣ ಬಾಗದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಇದರಿಂದ ಗ್ರಾಮೀಣ ಭಾಗದಲ್ಲಿ ಜಗಳಗಳು ಹೆಚ್ಚುತ್ತಿವೆ. ಹೊಸಹಳ್ಳಿ ಗ್ರಾಮದಲ್ಲಿ ಶಾಲೆಯ ಹತ್ತಿರ ಮದ್ಯ ಮಾರಾಟ ಮಾಡಲಾಗುತ್ತಿದೆ. ಅಧಿಕಾರಿಗಳು ಕೂಡಲೇ ಈ ಬಗ್ಗೆ ಕ್ರಮ ಜರುಗಸಬೇಕು ಎಂದು ನಲಿಗಾನಹಳ್ಳಿ ಮಂಜುನಾಥ್ ಒತ್ತಾಯಿಸಿದರು.</p>.<p>ತಿರುಮಣಿ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮರಳು ಸಾಗಿಸಲಾಗುತ್ತಿದೆ. ಇಸ್ಪೀಟ್ ಜೂಜಾಟ ಹೆಚ್ಚಿದೆ. ಜೂಜಾಟ, ಮರಳು ಸಾಗಣೆಗೆ ಕಡಿವಾಣ ಹಾಕಬೇಕು ಎಂದು ಆಪ್ಬಂಡೆ ಗೋಪಾಲ್ ಆಗ್ರಹಿಸಿದರು.</p>.<p>ಡಿವೈಎಸ್ಪಿ ಜಿ. ಮಂಜುನಾಥ್ ಮಾತನಾಡಿ, ಎಲ್ಲ ದೂರುಗಳ ಬಗ್ಗೆ ಶೀಘ್ರ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.</p>.<p>ಇನ್ಸ್ಪೆಕ್ಟರ್ ಕೆ. ಸುರೇಶ್, ಗ್ರಾಮೀಣ ಭಾಗದ ಬೀಟ್ ಸಿಬ್ಬಂದಿಗೆ ಅಲ್ಲಿನ ಸಂಪೂರ್ಣ ಚಟುವಟಿಕೆ ಕಲೆಹಾಕುವಂತೆ ತಿಳಿಸಲಾಗಿದೆ. ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಸೂಕ್ತ ಕ್ರಮ ತೆಗೆದುಕೊಳ್ಳಲಾಗಿದೆ ಎಂದರು.</p>.<p>ಮುಖಂಡ ವೆಂಕಟೇಶಪ್ಪ, ಗುಟ್ಟಹಳ್ಳಿ ಅಂಜಪ್ಪ, ನಲಿಗಾನಹಳ್ಳಿ ಮಂಜುನಾಥ್, ಪಾತಣ್ಣ, ಆಪ್ ಬಂಡೆ ಗೋಪಾಲ್, ಮೀನಕುಂಟನಹಳ್ಳಿ ನರಸಿಂಹಪ್ಪ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260413-17-414701468</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>