<p><strong>ಪಾವಗಡ</strong>: ಪಟ್ಟಣದ ಶನೈಶ್ಚರ ದೇಗುಲದಲ್ಲಿ ಮೊದಲನೇ ಶ್ರಾವಣ ಶನಿವಾರ ನಡೆದ ವಿಶೇಷ ಕಾರ್ಯಕ್ರಮಗಳಲ್ಲಿ ವಿವಿಧೆಡೆಯಿಂದ ಬಂದಿದ್ದ ಸಹಸ್ರಾರು ಭಕ್ತರು ಭಾಗವಹಿಸಿದ್ದರು.</p>.<p>₹7 ಕೋಟಿ ವೆಚ್ಚದಲ್ಲಿ ದೇಗುಲದ ಗರ್ಭಗುಡಿ, ಪ್ರಾಂಗಣಕ್ಕೆ ಚಿನ್ನದ ಲೇಪನ ಮಾಡಿರುವುದನ್ನು ಭಕ್ತರು ಕಣ್ತುಂಬಿಕೊಂಡರು. ಮುಂಜಾನೆ 4 ಗಂಟೆಯಿಂದಲೇ ಅಭಿಷೇಕ, ತೈಲಾಭಿಷೇಕ, ಕುಂಕುಮಾರ್ಚನೆ, ಸರ್ವಸೇವೆ, ತಾಳಿ ಪೂಜೆ ಇತ್ಯಾದಿ ಪೂಜೆ ನಡೆದವು.</p>.<p>ಸಂಘ ಸಂಸ್ಥೆಗಳ ಪದಾಧಿಕಾರಿಗಳು ಭಕ್ತರಿಗೆ ಉಪಹಾರ ವಿತರಿಸಿದರು. ದೇಗುಲದ ಎಸ್ಎಸ್ಕೆ ಅನ್ನದಾಸೋಹ ಭವನದಲ್ಲಿ ಶುಕ್ರವಾರದಿಂದ ಸಹಸ್ರಾರು ಸಂಖ್ಯೆಯ ಭಕ್ತರಿಗೆ ಉಚಿತ ಪ್ರಸಾದ ವಿತರಿಸಲಾಯಿತು.</p>.<p>ಬೆಳಿಗಿನ ಜಾವದಿಂದಲೇ ಸಂಜೆಯವರೆಗೆ ಸರದಿಯಲ್ಲಿ ನಿಂತು ದರ್ಶನ ಪಡೆದರು. ತರಹೇವಾರಿ ಹೂವುಗಳಿಂದ ಇಡೀ ದೇಗುಲವನ್ನು ಅಲಂಕರಿಸಲಾಗಿತ್ತು. ಶುಕ್ರವಾರವೇ ವಿವಿಧೆಡೆಯಿಂದ ಭಕ್ತರು ಬಂದಿದ್ದರಿಂದ ವಾಹನ ದಟ್ಟಣೆ ಹೆಚ್ಚಿತ್ತು.</p>.<p>ಶನಿವಾರ ಬಳ್ಳಾರಿ ರಸ್ತೆ, ತುಮಕೂರು ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಿದ್ದರಿಂದ ಪಟ್ಟಣದಲ್ಲಿ ಒಂದೆಡೆಯಿಂದ ಮತ್ತೊಂದೆಡೆಗೆ ಸಂಚರಿಸುವುದು ಕಷ್ಟಸಾಧ್ಯವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾವಗಡ</strong>: ಪಟ್ಟಣದ ಶನೈಶ್ಚರ ದೇಗುಲದಲ್ಲಿ ಮೊದಲನೇ ಶ್ರಾವಣ ಶನಿವಾರ ನಡೆದ ವಿಶೇಷ ಕಾರ್ಯಕ್ರಮಗಳಲ್ಲಿ ವಿವಿಧೆಡೆಯಿಂದ ಬಂದಿದ್ದ ಸಹಸ್ರಾರು ಭಕ್ತರು ಭಾಗವಹಿಸಿದ್ದರು.</p>.<p>₹7 ಕೋಟಿ ವೆಚ್ಚದಲ್ಲಿ ದೇಗುಲದ ಗರ್ಭಗುಡಿ, ಪ್ರಾಂಗಣಕ್ಕೆ ಚಿನ್ನದ ಲೇಪನ ಮಾಡಿರುವುದನ್ನು ಭಕ್ತರು ಕಣ್ತುಂಬಿಕೊಂಡರು. ಮುಂಜಾನೆ 4 ಗಂಟೆಯಿಂದಲೇ ಅಭಿಷೇಕ, ತೈಲಾಭಿಷೇಕ, ಕುಂಕುಮಾರ್ಚನೆ, ಸರ್ವಸೇವೆ, ತಾಳಿ ಪೂಜೆ ಇತ್ಯಾದಿ ಪೂಜೆ ನಡೆದವು.</p>.<p>ಸಂಘ ಸಂಸ್ಥೆಗಳ ಪದಾಧಿಕಾರಿಗಳು ಭಕ್ತರಿಗೆ ಉಪಹಾರ ವಿತರಿಸಿದರು. ದೇಗುಲದ ಎಸ್ಎಸ್ಕೆ ಅನ್ನದಾಸೋಹ ಭವನದಲ್ಲಿ ಶುಕ್ರವಾರದಿಂದ ಸಹಸ್ರಾರು ಸಂಖ್ಯೆಯ ಭಕ್ತರಿಗೆ ಉಚಿತ ಪ್ರಸಾದ ವಿತರಿಸಲಾಯಿತು.</p>.<p>ಬೆಳಿಗಿನ ಜಾವದಿಂದಲೇ ಸಂಜೆಯವರೆಗೆ ಸರದಿಯಲ್ಲಿ ನಿಂತು ದರ್ಶನ ಪಡೆದರು. ತರಹೇವಾರಿ ಹೂವುಗಳಿಂದ ಇಡೀ ದೇಗುಲವನ್ನು ಅಲಂಕರಿಸಲಾಗಿತ್ತು. ಶುಕ್ರವಾರವೇ ವಿವಿಧೆಡೆಯಿಂದ ಭಕ್ತರು ಬಂದಿದ್ದರಿಂದ ವಾಹನ ದಟ್ಟಣೆ ಹೆಚ್ಚಿತ್ತು.</p>.<p>ಶನಿವಾರ ಬಳ್ಳಾರಿ ರಸ್ತೆ, ತುಮಕೂರು ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಿದ್ದರಿಂದ ಪಟ್ಟಣದಲ್ಲಿ ಒಂದೆಡೆಯಿಂದ ಮತ್ತೊಂದೆಡೆಗೆ ಸಂಚರಿಸುವುದು ಕಷ್ಟಸಾಧ್ಯವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>