<p><strong>ಪಾವಗಡ</strong>: ತಾಲ್ಲೂಕಿನ ಶನೈಶ್ಚರ ದೇಗುಲಕ್ಕೆ ಶನಿವಾರ ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಭಕ್ತರು ಸರದಿಯಲ್ಲಿ ನಿಂತು ದರ್ಶನ ಪಡೆದರು.</p>.<p>ಶುಕ್ರವಾರ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಸೀತಲಾಮಭ ಮೂಲ ಯಂತ್ರಕ್ಕೆ ಸಹಸ್ರ ಕುಂಕುಮಾರ್ಚನೆ ನಡೆಯಿತು. ಮೂಲ ಯಂತ್ರಕ್ಕೆ ವಿಶೇಷ ಅಲಂಕಾರ ಮಾಡಲಾಗಿತ್ತು.</p>.<p>ಶನಿವಾರ ಬೆಳಗಿನ ಜಾವ ಕೇಶ ಮುಂಡನಕ್ಕಾಗಿ ಸಾವಿರಾರು ಮಂದಿ ಸರದಿಯಲ್ಲಿ ನಂತಿದ್ದರು. ಸಂಜೆಯವರೆಗೆ ಭಕ್ತರು ದರ್ಶನ ಪಡೆದರು. ಎರಡು ವಾರಗಳಿಗಿಂತಲೂ ಹೆಚ್ಚಿನ ಸಮಖ್ಯೆಯಲ್ಲಿ ಭಕ್ತರು ದೇಗುಲಕ್ಕೆ ಬಂದಿದ್ದರು.</p>.<p>ದೇಗುಲ ವೃತ್ತ ಹಾಗೂ ಸುಮಾರು ಅರ್ಧ ಕಿ.ಮೀ ದೂರದವರೆಗೆ ಮಂಡಕ್ಕಿ, ಬೆಂಡು, ಬತ್ತಾಸು, ಪೂಜಾ ಸಾಮಗ್ರಿ, ಟೋಪಿ, ಆಟಿಕೆ, ಇತ್ಯಾದಿ ಅಂಗಡಿಗಳಲ್ಲಿ ಭಕ್ತಾದಿಗಳು ಸಾಮಗ್ರಿ ಖರೀದಿಗೆ ಮುಗಿಬಿದ್ದರು.</p>.<p>ಸಂಜೆ ಹೂವಿನ ಪಲ್ಲಕ್ಕಿಯಲ್ಲಿ ಮೂಲ ವಿಗ್ರಹವಿರಿಸಿ ಉತ್ಸವ ನಡೆಸಲಾಯಿತು. ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಲಘು ಉಪಹಾರ ವಿತರಿಸಿದರು.</p>.<p>ದೇಗುಲದಿಂದ ಊಟದ ವ್ಯವಸ್ಥೆ ಮಾಡಲಾಗಿತ್ತು. ಶನೈಶ್ಚರ ದರ್ಶನ ಪಡೆದ ನಂತರ ಕೋಟೆ ಆಂಜನೇಯ ದರ್ಶನ ಪಡೆದು, ಕೆಲವರು ಪಾವಗಡ ಬೆಟ್ಟ ಏರುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾವಗಡ</strong>: ತಾಲ್ಲೂಕಿನ ಶನೈಶ್ಚರ ದೇಗುಲಕ್ಕೆ ಶನಿವಾರ ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಭಕ್ತರು ಸರದಿಯಲ್ಲಿ ನಿಂತು ದರ್ಶನ ಪಡೆದರು.</p>.<p>ಶುಕ್ರವಾರ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಸೀತಲಾಮಭ ಮೂಲ ಯಂತ್ರಕ್ಕೆ ಸಹಸ್ರ ಕುಂಕುಮಾರ್ಚನೆ ನಡೆಯಿತು. ಮೂಲ ಯಂತ್ರಕ್ಕೆ ವಿಶೇಷ ಅಲಂಕಾರ ಮಾಡಲಾಗಿತ್ತು.</p>.<p>ಶನಿವಾರ ಬೆಳಗಿನ ಜಾವ ಕೇಶ ಮುಂಡನಕ್ಕಾಗಿ ಸಾವಿರಾರು ಮಂದಿ ಸರದಿಯಲ್ಲಿ ನಂತಿದ್ದರು. ಸಂಜೆಯವರೆಗೆ ಭಕ್ತರು ದರ್ಶನ ಪಡೆದರು. ಎರಡು ವಾರಗಳಿಗಿಂತಲೂ ಹೆಚ್ಚಿನ ಸಮಖ್ಯೆಯಲ್ಲಿ ಭಕ್ತರು ದೇಗುಲಕ್ಕೆ ಬಂದಿದ್ದರು.</p>.<p>ದೇಗುಲ ವೃತ್ತ ಹಾಗೂ ಸುಮಾರು ಅರ್ಧ ಕಿ.ಮೀ ದೂರದವರೆಗೆ ಮಂಡಕ್ಕಿ, ಬೆಂಡು, ಬತ್ತಾಸು, ಪೂಜಾ ಸಾಮಗ್ರಿ, ಟೋಪಿ, ಆಟಿಕೆ, ಇತ್ಯಾದಿ ಅಂಗಡಿಗಳಲ್ಲಿ ಭಕ್ತಾದಿಗಳು ಸಾಮಗ್ರಿ ಖರೀದಿಗೆ ಮುಗಿಬಿದ್ದರು.</p>.<p>ಸಂಜೆ ಹೂವಿನ ಪಲ್ಲಕ್ಕಿಯಲ್ಲಿ ಮೂಲ ವಿಗ್ರಹವಿರಿಸಿ ಉತ್ಸವ ನಡೆಸಲಾಯಿತು. ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಲಘು ಉಪಹಾರ ವಿತರಿಸಿದರು.</p>.<p>ದೇಗುಲದಿಂದ ಊಟದ ವ್ಯವಸ್ಥೆ ಮಾಡಲಾಗಿತ್ತು. ಶನೈಶ್ಚರ ದರ್ಶನ ಪಡೆದ ನಂತರ ಕೋಟೆ ಆಂಜನೇಯ ದರ್ಶನ ಪಡೆದು, ಕೆಲವರು ಪಾವಗಡ ಬೆಟ್ಟ ಏರುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>