<p>ಪಾವಗಡ: ಸಹಕಾರ ಕ್ಷೇತ್ರದಲ್ಲಿ ಬ್ಯಾಂಕ್ ಅಭಿವೃದ್ಧಿ ಹೊಂದಲು ಠೇವಣಿ, ಷೇರುಗಳು ಜೊತೆಗೆ ಉತ್ತಮ ಆಡಳಿತ ಮಂಡಳಿಯೂ ಅತ್ಯಗತ್ಯ ಎಂದು ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಬಿ.ಎಚ್. ಕೃಷ್ಣಾರೆಡ್ಡಿ ತಿಳಿಸಿದರು.</p>.<p>ತಾಲ್ಲೂಕಿನ ತಿರುಮಣಿಯಲ್ಲಿ ಬುಧವಾರ ಶ್ರೀನಿಧಿ ಸೌಹಾರ್ದ ಕೋ-ಆಪರೇಟಿವ್ ಬ್ಯಾಂಕ್ ಶಾಖೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಕಠಿಣ ನಿಯಮಗಳು ಇರುವುದರಿಂದ ಸಾಮಾನ್ಯ ಜನರಿಗೆ ಸಾಲ ಸೌಲಭ್ಯ ಪಡೆಯುವುದು ಕಷ್ಟವಾಗುತ್ತದೆ. ಆದರೆ ಸಹಕಾರಿ ಬ್ಯಾಂಕ್ಗಳು ಸಡಿಲ ನಿಯಮಗಳ ಮೂಲಕ ಜನರಿಗೆ ಸಾಲ ಸೌಲಭ್ಯ ಒದಗಿಸುತ್ತಿವೆ ಎಂದರು.</p>.<p>ಅಧ್ಯಕ್ಷ ಸದಾಶಿವರೆಡ್ಡಿ ಮಾತನಾಡಿ, ಬ್ಯಾಂಕ್ ಸುಮಾರು ಹನ್ನೊಂದು ಸಾವಿರ ಸದಸ್ಯರೊಂದಿಗೆ ₹26 ಕೋಟಿ ಷೇರು ಬಂಡವಾಳ ಹೊಂದಿದೆ. ಬ್ಯಾಂಕ್ನ ₹814 ಕೋಟಿ ವಹಿವಾಟು ಹೊಂದಿದ್ದು, 2024-25ನೇ ಸಾಲಿನಲ್ಲಿ ₹8.7 ಕೋಟಿ ನಿವ್ವಳ ಲಾಭ ಗಳಿಸಿದೆ ಎಂದರು.</p>.<p>ಕೆನರಾ ಬ್ಯಾಂಕ್ ನಿವೃತ್ತ ಪ್ರಧಾನ ವ್ಯವಸ್ಥಾಪಕ ಕೆ. ವೆಂಕಟರಾಮಯ್ಯ, ಸಣ್ಣ ನೀರಾವರಿ ಇಲಾಖೆ ಕಾರ್ಯದರ್ಶಿ ರಾಘವನ್, ಮಾಜಿ ಮಂಡಲ್ ಪ್ರಧಾನ ವಿ.ಸಿ. ಚೆನ್ನಕೇಶವರೆಡ್ಡಿ, ಶಕ್ತಿ ಸ್ಥಳ ರೈತರ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಆರ್.ಪಿ. ಸಾಂಬಸದಾಶಿವರೆಡ್ಡಿ, ಉಪಾಧ್ಯಕ್ಷ ರಾಮಾಂಜನೇಯಲು, ಬ್ಯಾಂಕ್ನ ಎಂಡಿ ಪ್ರವೀಣ್ ಕುಮಾರ್, ಬಾಬುರೆಡ್ಡಿ, ನಿರ್ದೇಶಕ ಕೆ.ನರಸಿಂಹ, ಡಿ. ಪರಮೇಶ್ ನಾಯ್ಕ್ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260328-17-570579172</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪಾವಗಡ: ಸಹಕಾರ ಕ್ಷೇತ್ರದಲ್ಲಿ ಬ್ಯಾಂಕ್ ಅಭಿವೃದ್ಧಿ ಹೊಂದಲು ಠೇವಣಿ, ಷೇರುಗಳು ಜೊತೆಗೆ ಉತ್ತಮ ಆಡಳಿತ ಮಂಡಳಿಯೂ ಅತ್ಯಗತ್ಯ ಎಂದು ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಬಿ.ಎಚ್. ಕೃಷ್ಣಾರೆಡ್ಡಿ ತಿಳಿಸಿದರು.</p>.<p>ತಾಲ್ಲೂಕಿನ ತಿರುಮಣಿಯಲ್ಲಿ ಬುಧವಾರ ಶ್ರೀನಿಧಿ ಸೌಹಾರ್ದ ಕೋ-ಆಪರೇಟಿವ್ ಬ್ಯಾಂಕ್ ಶಾಖೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಕಠಿಣ ನಿಯಮಗಳು ಇರುವುದರಿಂದ ಸಾಮಾನ್ಯ ಜನರಿಗೆ ಸಾಲ ಸೌಲಭ್ಯ ಪಡೆಯುವುದು ಕಷ್ಟವಾಗುತ್ತದೆ. ಆದರೆ ಸಹಕಾರಿ ಬ್ಯಾಂಕ್ಗಳು ಸಡಿಲ ನಿಯಮಗಳ ಮೂಲಕ ಜನರಿಗೆ ಸಾಲ ಸೌಲಭ್ಯ ಒದಗಿಸುತ್ತಿವೆ ಎಂದರು.</p>.<p>ಅಧ್ಯಕ್ಷ ಸದಾಶಿವರೆಡ್ಡಿ ಮಾತನಾಡಿ, ಬ್ಯಾಂಕ್ ಸುಮಾರು ಹನ್ನೊಂದು ಸಾವಿರ ಸದಸ್ಯರೊಂದಿಗೆ ₹26 ಕೋಟಿ ಷೇರು ಬಂಡವಾಳ ಹೊಂದಿದೆ. ಬ್ಯಾಂಕ್ನ ₹814 ಕೋಟಿ ವಹಿವಾಟು ಹೊಂದಿದ್ದು, 2024-25ನೇ ಸಾಲಿನಲ್ಲಿ ₹8.7 ಕೋಟಿ ನಿವ್ವಳ ಲಾಭ ಗಳಿಸಿದೆ ಎಂದರು.</p>.<p>ಕೆನರಾ ಬ್ಯಾಂಕ್ ನಿವೃತ್ತ ಪ್ರಧಾನ ವ್ಯವಸ್ಥಾಪಕ ಕೆ. ವೆಂಕಟರಾಮಯ್ಯ, ಸಣ್ಣ ನೀರಾವರಿ ಇಲಾಖೆ ಕಾರ್ಯದರ್ಶಿ ರಾಘವನ್, ಮಾಜಿ ಮಂಡಲ್ ಪ್ರಧಾನ ವಿ.ಸಿ. ಚೆನ್ನಕೇಶವರೆಡ್ಡಿ, ಶಕ್ತಿ ಸ್ಥಳ ರೈತರ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಆರ್.ಪಿ. ಸಾಂಬಸದಾಶಿವರೆಡ್ಡಿ, ಉಪಾಧ್ಯಕ್ಷ ರಾಮಾಂಜನೇಯಲು, ಬ್ಯಾಂಕ್ನ ಎಂಡಿ ಪ್ರವೀಣ್ ಕುಮಾರ್, ಬಾಬುರೆಡ್ಡಿ, ನಿರ್ದೇಶಕ ಕೆ.ನರಸಿಂಹ, ಡಿ. ಪರಮೇಶ್ ನಾಯ್ಕ್ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260328-17-570579172</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>