<p>ಪಾವಗಡ: ತಾಲ್ಲೂಕಿಗೆ ಶಾಶ್ವತ ನೀರಾವರಿ ಯೋಜನೆ ಅನುಷ್ಠಾನ ಮಾಡಿ, ಕುಡಿಯುವ ನೀರಿನ ಸೌಕರ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ, ಹಸಿರು ಸೇನೆ ನೇತೃತ್ವದಲ್ಲಿ ರೈತರು ಸೋಮವಾರ ಪಟ್ಟಣದ ತಹಶೀಲ್ದಾರ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.</p>.<p>ಬೇಸಿಗೆಯ ಹಿನ್ನೆಲೆ ಕೆರೆ ಕಾಲುವೆ ಬತ್ತಿ ಹೋಗಿವೆ. ಜನ, ಜಾನುವಾರುಗಳಿಗೆ ಕುಡಿಯುಲೂ ನೀರಿಲ್ಲದ ಸ್ಥಿತಿ ನಿರ್ಮಾಣವಾಗಿದೆ. 15 ದಿನಗಳಿಂದ ತುಂಗಭದ್ರಾ ಕುಡಿಯುವ ನೀರೂ ಸಹ ಸ್ಥಗಿತಗೊಂಡಿದೆ ಎಂದು ಜಿಲ್ಲಾ ಘಟಕದ ಅಧ್ಯಕ್ಷ ಪೂಜಾರಪ್ಪ ಆರೋಪಿಸಿದರು.</p>.<p>ತಾಲ್ಲೂಕಿನ 34 ಪಂಚಾಯಿತಿಗಳಲ್ಲಿ ಕೊರೆಸಿರುವ ಕೊಳವೆಬಾವಿ ಬತ್ತಿ ಹೋಗಿವೆ. ಸಾವಿರಾರು ಅಡಿ ಆಳ ಕೊರೆದರೂ ನೀರು ಸಿಗದ ಸ್ಥಿತಿ ಇದೆ. ಶೀಘ್ರ ನೀರಾವರಿ ಯೋಜನೆ ಅನುಷ್ಠಾನ ಮಾಡುವತ್ತ ಅಧಿಕಾರಿಗಳು, ಜನಪ್ರತಿನಿಧಿಗಳು ಒತ್ತು ನೀಡಬೇಕು ಎಂದು ಆಗ್ರಹಿಸಿದರು.</p>.<p>ಒಂದು ಟಿಎಂಸಿ ನೀರು ಸರಬರಾಜು ಮಾಡದಿದ್ದಲ್ಲಿ ರಾಜ್ಯ ರೈತ ಸಂಘದ ಹಾಗೂ ಪ್ರಗತಿಪರ ಸಂಘಟನೆಗಳು ನಿರಂತರ ಧರಣಿ ಹಮ್ಮಿಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.</p>.<p>ಗ್ರಾಮಗಳಲ್ಲಿ ನೀರುಗಂಟಿಗಳು ಸರಿಯಾದ ಸಮಯಕ್ಕೆ ನೀರು ಬಿಡುತ್ತಿಲ್ಲ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಗೆ ದೂರು ನೀಡಿದರೂ ಪ್ರಯೋಜನವಾಗುತ್ತಿಲ್ಲ ಎಂದು ತಾಲ್ಲೂಕು ಘಟಕದ ಅಧ್ಯಕ್ಷ ಶಿವು ಆರೋಪಿಸಿದರು.</p>.<p>ಜಿಲ್ಲಾ ಘಟಕದ ಅಧ್ಯಕ್ಷ ಪೂಜಾರಪ್ಪ, ಮೂರ್ತಿ, ಚಿತ್ತಯ್ಯ, ಗುಡಿ ಪಲ್ಲಪ್ಪ, ರಾಮಾಂಜಿ, ಸುರೇಶ್, ನಾಗೇಂದ್ರಪ್ಪ, ಲಲಿತಮ್ಮ, ಆಂಜನೇಯ, ದುರ್ಗಪ್ಪ, ಸಂಜೀವಪ್ಪ, ನಡಿ ಪನ್ನ, ಹನುಮಂತರಾಯ, ನಾಗೇಂದ್ರ, ಸದಾಶಿವಪ್ಪ, ಬಸವರಾಜು, ನಾಗರಾಜ್ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-17-1274756349</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪಾವಗಡ: ತಾಲ್ಲೂಕಿಗೆ ಶಾಶ್ವತ ನೀರಾವರಿ ಯೋಜನೆ ಅನುಷ್ಠಾನ ಮಾಡಿ, ಕುಡಿಯುವ ನೀರಿನ ಸೌಕರ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ, ಹಸಿರು ಸೇನೆ ನೇತೃತ್ವದಲ್ಲಿ ರೈತರು ಸೋಮವಾರ ಪಟ್ಟಣದ ತಹಶೀಲ್ದಾರ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.</p>.<p>ಬೇಸಿಗೆಯ ಹಿನ್ನೆಲೆ ಕೆರೆ ಕಾಲುವೆ ಬತ್ತಿ ಹೋಗಿವೆ. ಜನ, ಜಾನುವಾರುಗಳಿಗೆ ಕುಡಿಯುಲೂ ನೀರಿಲ್ಲದ ಸ್ಥಿತಿ ನಿರ್ಮಾಣವಾಗಿದೆ. 15 ದಿನಗಳಿಂದ ತುಂಗಭದ್ರಾ ಕುಡಿಯುವ ನೀರೂ ಸಹ ಸ್ಥಗಿತಗೊಂಡಿದೆ ಎಂದು ಜಿಲ್ಲಾ ಘಟಕದ ಅಧ್ಯಕ್ಷ ಪೂಜಾರಪ್ಪ ಆರೋಪಿಸಿದರು.</p>.<p>ತಾಲ್ಲೂಕಿನ 34 ಪಂಚಾಯಿತಿಗಳಲ್ಲಿ ಕೊರೆಸಿರುವ ಕೊಳವೆಬಾವಿ ಬತ್ತಿ ಹೋಗಿವೆ. ಸಾವಿರಾರು ಅಡಿ ಆಳ ಕೊರೆದರೂ ನೀರು ಸಿಗದ ಸ್ಥಿತಿ ಇದೆ. ಶೀಘ್ರ ನೀರಾವರಿ ಯೋಜನೆ ಅನುಷ್ಠಾನ ಮಾಡುವತ್ತ ಅಧಿಕಾರಿಗಳು, ಜನಪ್ರತಿನಿಧಿಗಳು ಒತ್ತು ನೀಡಬೇಕು ಎಂದು ಆಗ್ರಹಿಸಿದರು.</p>.<p>ಒಂದು ಟಿಎಂಸಿ ನೀರು ಸರಬರಾಜು ಮಾಡದಿದ್ದಲ್ಲಿ ರಾಜ್ಯ ರೈತ ಸಂಘದ ಹಾಗೂ ಪ್ರಗತಿಪರ ಸಂಘಟನೆಗಳು ನಿರಂತರ ಧರಣಿ ಹಮ್ಮಿಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.</p>.<p>ಗ್ರಾಮಗಳಲ್ಲಿ ನೀರುಗಂಟಿಗಳು ಸರಿಯಾದ ಸಮಯಕ್ಕೆ ನೀರು ಬಿಡುತ್ತಿಲ್ಲ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಗೆ ದೂರು ನೀಡಿದರೂ ಪ್ರಯೋಜನವಾಗುತ್ತಿಲ್ಲ ಎಂದು ತಾಲ್ಲೂಕು ಘಟಕದ ಅಧ್ಯಕ್ಷ ಶಿವು ಆರೋಪಿಸಿದರು.</p>.<p>ಜಿಲ್ಲಾ ಘಟಕದ ಅಧ್ಯಕ್ಷ ಪೂಜಾರಪ್ಪ, ಮೂರ್ತಿ, ಚಿತ್ತಯ್ಯ, ಗುಡಿ ಪಲ್ಲಪ್ಪ, ರಾಮಾಂಜಿ, ಸುರೇಶ್, ನಾಗೇಂದ್ರಪ್ಪ, ಲಲಿತಮ್ಮ, ಆಂಜನೇಯ, ದುರ್ಗಪ್ಪ, ಸಂಜೀವಪ್ಪ, ನಡಿ ಪನ್ನ, ಹನುಮಂತರಾಯ, ನಾಗೇಂದ್ರ, ಸದಾಶಿವಪ್ಪ, ಬಸವರಾಜು, ನಾಗರಾಜ್ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-17-1274756349</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>