<p><strong>ಪಾವಗಡ:</strong> ದೇವರಬೆಟ್ಟದಿಂದ ಕೋಣನಕುರಿಕೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಮುಚ್ಚಿರುವುದನ್ನು ವಿರೋಧಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.</p>.<p>ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯನ್ನು ಕೆಲವರು ಮುಚ್ಚಿದ್ದಾರೆ. ಇದರಿಂದ ಸಾಕಷ್ಟು ಸಮಸ್ಯೆಯಾಗುತ್ತಿದೆ. ಸುತ್ತಿ ಬಳಸಿ ಗ್ರಾಮಕ್ಕೆ ಹೋಗಬೇಕಿದೆ ಎಂದು ಆರೋಪಿಸಿದರು.</p>.<p>ರಸ್ತೆಯ ಮಧ್ಯ ಭಾಗಕ್ಕೆ ಬೇಲಿ, ಮಣ್ಣನ್ನು ಸುರಿದು ವಾಹನಗಳು ಓಡಾಡದಂತೆ ಅಡ್ಡ ಹಾಕಲಾಗಿದೆ. ಪಟ್ಟಣ ಸೇರಿದಂತೆ ವಿವಿಧೆಡೆ ಪ್ರಯಾಣಿಸುವ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ಇದರಿಂದ ಸಾಕಷ್ಟು ತೊಂದರೆಯಾಗುತ್ತಿದೆ. ಸಂಚಾರ ಮಾಡಲು ಅನುವು ಮಾಡಿಕೊಡುವವರೆಗೆ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಗ್ರಾಮಸ್ಥರು ಎಚ್ಚರಿಸಿದರು.</p>.<p>ಕರ್ನಾಟಕ ಕಾಡುಗೊಲ್ಲ ಪರಿಷತ್ ಸಂಘಟನೆ ತಾಲ್ಲೂಕು ಅಧ್ಯಕ್ಷ ಜಿ ನರಸಿಂಹರಾಜ ಮಾತನಾಡಿ, ಹಲವು ವರ್ಷಗಳಿಂದ ಇದೇ ರಸ್ತೆಯಲ್ಲಿ ಗ್ರಾಮಸ್ಥರು ಓಡಾಡುತ್ತಿದ್ದಾರೆ. ಆದರೆ ಇತ್ತೀಚೆಗೆ ರಸ್ತೆ ಇಲ್ಲದಂತಾಗಿದೆ. ತಾಲ್ಲೂಕು ಆಡಳಿತ, ಪಂಚಾಯಿತಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಪರಿಹರಿಸಬೇಕು ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾವಗಡ:</strong> ದೇವರಬೆಟ್ಟದಿಂದ ಕೋಣನಕುರಿಕೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಮುಚ್ಚಿರುವುದನ್ನು ವಿರೋಧಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.</p>.<p>ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯನ್ನು ಕೆಲವರು ಮುಚ್ಚಿದ್ದಾರೆ. ಇದರಿಂದ ಸಾಕಷ್ಟು ಸಮಸ್ಯೆಯಾಗುತ್ತಿದೆ. ಸುತ್ತಿ ಬಳಸಿ ಗ್ರಾಮಕ್ಕೆ ಹೋಗಬೇಕಿದೆ ಎಂದು ಆರೋಪಿಸಿದರು.</p>.<p>ರಸ್ತೆಯ ಮಧ್ಯ ಭಾಗಕ್ಕೆ ಬೇಲಿ, ಮಣ್ಣನ್ನು ಸುರಿದು ವಾಹನಗಳು ಓಡಾಡದಂತೆ ಅಡ್ಡ ಹಾಕಲಾಗಿದೆ. ಪಟ್ಟಣ ಸೇರಿದಂತೆ ವಿವಿಧೆಡೆ ಪ್ರಯಾಣಿಸುವ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ಇದರಿಂದ ಸಾಕಷ್ಟು ತೊಂದರೆಯಾಗುತ್ತಿದೆ. ಸಂಚಾರ ಮಾಡಲು ಅನುವು ಮಾಡಿಕೊಡುವವರೆಗೆ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಗ್ರಾಮಸ್ಥರು ಎಚ್ಚರಿಸಿದರು.</p>.<p>ಕರ್ನಾಟಕ ಕಾಡುಗೊಲ್ಲ ಪರಿಷತ್ ಸಂಘಟನೆ ತಾಲ್ಲೂಕು ಅಧ್ಯಕ್ಷ ಜಿ ನರಸಿಂಹರಾಜ ಮಾತನಾಡಿ, ಹಲವು ವರ್ಷಗಳಿಂದ ಇದೇ ರಸ್ತೆಯಲ್ಲಿ ಗ್ರಾಮಸ್ಥರು ಓಡಾಡುತ್ತಿದ್ದಾರೆ. ಆದರೆ ಇತ್ತೀಚೆಗೆ ರಸ್ತೆ ಇಲ್ಲದಂತಾಗಿದೆ. ತಾಲ್ಲೂಕು ಆಡಳಿತ, ಪಂಚಾಯಿತಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಪರಿಹರಿಸಬೇಕು ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>