<p>ಪಾವಗಡ: ತಾಲ್ಲೂಕಿನ ಸಿ.ಕೆ ಪುರದಲ್ಲಿ ಚನ್ನಕೇಶವ ಸ್ವಾಮಿ ಬ್ರಹ್ಮರಥೋತ್ಸವ ವಿಜೃಂಭಣೆಯಿಂದ ನಡೆಯಿತು.</p>.<p>ಬೆಳಗಿನ ಜಾವದಿಂದಲೇ ದೇವಸ್ಥಾನದಲ್ಲಿ ವಿಶೇಷ ಪೂಜೆ, ಅಭಿಷೇಕ, ಧಾರ್ಮಿಕ ಕಾರ್ಯಕ್ರಮಗಳು ನಡೆದವು. ರಥೋತ್ಸವದ ಪ್ರಯುಕ್ತ ಚಿತ್ರಗೋಪುರ ಉತ್ಸವ, ಕಲ್ಯಾಣೋತ್ಸವ, ಗರುಡೋತ್ಸವ ನೆರವೇರಿತು.</p>.<p>ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಮೆರವಣಿಗೆ ಮೂಲಕ ರಥದ ಬಳಿಗೆ ಕರೆತಂದು, ರಥದ ಸುತ್ತ ಪ್ರದಕ್ಷಿಣೆ ಹಾಕಿದ ನಂತರ ರಥದಲ್ಲಿ ಪ್ರತಿಷ್ಠಾಪಿಸಲಾಯಿತು. ಹೂವಿನ ಹಾರ, ಬಾವುಟಗಳಿಂದ ಅಲಂಕರಿಸಿದ್ದ ರಥದ ಚಕ್ರಗಳಿಗೆ ಗೋಪಾಲ್ ರಾವ್, ಸಿ.ಎನ್ ಆನಂದ್ ರಾವ್ ಚಾಲನೆ ನೀಡಿದರು.</p>.<p>ಸಾವಿರಾರು ಭಕ್ತರು ರಥ ಎಳೆದು ಸಂಭ್ರಮಿಸಿದರು. ಸಂಜೆ ಭಕ್ತರ ಸಮ್ಮುಖದಲ್ಲಿ ಗಜೇಂದ್ರ ಮೋಕ್ಷ, ಗಜವಾಹನೋತ್ಸವ ನಡೆಯಿತು.</p>.<p>ರಥೋತ್ಸವದಲ್ಲಿ ಸಿ ಕೆ ಪುರ, ದೇವರಹಟ್ಟಿ, ಚನ್ನಸಾಗರದಹಟ್ಟಿ, ಉದ್ದಂಡಪ್ಪನಪಾಳ್ಯ, ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಂದ ಭಕ್ತರು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260404-17-510214018</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪಾವಗಡ: ತಾಲ್ಲೂಕಿನ ಸಿ.ಕೆ ಪುರದಲ್ಲಿ ಚನ್ನಕೇಶವ ಸ್ವಾಮಿ ಬ್ರಹ್ಮರಥೋತ್ಸವ ವಿಜೃಂಭಣೆಯಿಂದ ನಡೆಯಿತು.</p>.<p>ಬೆಳಗಿನ ಜಾವದಿಂದಲೇ ದೇವಸ್ಥಾನದಲ್ಲಿ ವಿಶೇಷ ಪೂಜೆ, ಅಭಿಷೇಕ, ಧಾರ್ಮಿಕ ಕಾರ್ಯಕ್ರಮಗಳು ನಡೆದವು. ರಥೋತ್ಸವದ ಪ್ರಯುಕ್ತ ಚಿತ್ರಗೋಪುರ ಉತ್ಸವ, ಕಲ್ಯಾಣೋತ್ಸವ, ಗರುಡೋತ್ಸವ ನೆರವೇರಿತು.</p>.<p>ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಮೆರವಣಿಗೆ ಮೂಲಕ ರಥದ ಬಳಿಗೆ ಕರೆತಂದು, ರಥದ ಸುತ್ತ ಪ್ರದಕ್ಷಿಣೆ ಹಾಕಿದ ನಂತರ ರಥದಲ್ಲಿ ಪ್ರತಿಷ್ಠಾಪಿಸಲಾಯಿತು. ಹೂವಿನ ಹಾರ, ಬಾವುಟಗಳಿಂದ ಅಲಂಕರಿಸಿದ್ದ ರಥದ ಚಕ್ರಗಳಿಗೆ ಗೋಪಾಲ್ ರಾವ್, ಸಿ.ಎನ್ ಆನಂದ್ ರಾವ್ ಚಾಲನೆ ನೀಡಿದರು.</p>.<p>ಸಾವಿರಾರು ಭಕ್ತರು ರಥ ಎಳೆದು ಸಂಭ್ರಮಿಸಿದರು. ಸಂಜೆ ಭಕ್ತರ ಸಮ್ಮುಖದಲ್ಲಿ ಗಜೇಂದ್ರ ಮೋಕ್ಷ, ಗಜವಾಹನೋತ್ಸವ ನಡೆಯಿತು.</p>.<p>ರಥೋತ್ಸವದಲ್ಲಿ ಸಿ ಕೆ ಪುರ, ದೇವರಹಟ್ಟಿ, ಚನ್ನಸಾಗರದಹಟ್ಟಿ, ಉದ್ದಂಡಪ್ಪನಪಾಳ್ಯ, ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಂದ ಭಕ್ತರು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260404-17-510214018</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>